IND vs ZIM: ಜಿಂಬಾಬ್ವೆ ವಿರುದ್ಧ ಐದನೇ ಟಿ20 ಆಡಲಿರುವ ಅಂತಿಮ ಪ್ಲೇಯಿಂಗ್‌ XI

IND vs ZIM: ಜಿಂಬಾಬ್ವೆ ಪ್ರವಾಸದ ಐದು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಅಂತಿಮ ಕದನಕ್ಕೆ ಸಜ್ಜಾಗಿದೆ. ಐದು ಪಂದ್ಯಗಳ ಟಿ20 ಸರಣಿ ಇದಾಗಿದ್ದು ನಾಲ್ಕು ಪಂದ್ಯಗಳು ಮುಗಿದಿದೆ, ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ 3-1 ಅಂತರದಲ್ಲಿ ಭಾರತ ತಂಡ ಪಂದ್ಯ ವಶಪಡಿಸಿಕೊಂಡಿದೆ.  ಶುಭಮನ್ ಗಿಲ್ ನೇತೃತ್ವದ ತಂಡ ಭಾನುವಾರ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆ ತಂಡವನ್ನು ಎದುರಿಸಲಿದೆ. ಸರಣಿ ಗೆದ್ದ ಹಿನ್ನಲೆಯಲ್ಲಿ ಟೀಂ ಇಂಡಿಯಾ ತಂಡದಲ್ಲಿ ಬೆಂಚ್ ಪ್ಲೇಯರ್‌ಗಳಿಗೆ ಅವಕಾಶ ಕೊಡುವ ಸಾಧ್ಯತೆ ಇದೆ.  

Written by - Zee Kannada News Desk | Last Updated : Jul 14, 2024, 11:39 AM IST
  • ಜಿಂಬಾಬ್ವೆ ಪ್ರವಾಸದ ಐದು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಅಂತಿಮ ಕದನಕ್ಕೆ ಸಜ್ಜಾಗಿದೆ.
  • ಬೆಂಚ್ ಆಟಗಾರರಿಗೆ ಅವಕಾಶ ನೀಡಿದರೆ ರಿಯಾನ್ ಪರಾಗ್ ಮತ್ತು ಧ್ರುವ್ ಜುರೆಲ್ ಅಂತಿಮ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ.
  • ಮಧ್ಯಮ ಕ್ರಮಾಂಕದಲ್ಲಿ ರಿಯಾನ್ ಪರಾಗ್ ಆಡಲಿದ್ದು, ಧ್ರುವ್ ಜುರೆಲ್ ವಿಕೆಟ್ ಕೀಪರ್ ಆಗಿ ಕಣಕ್ಕೆ ಇಳಿಯಲಿದ್ದಾರೆ.
IND vs ZIM: ಜಿಂಬಾಬ್ವೆ ವಿರುದ್ಧ ಐದನೇ ಟಿ20 ಆಡಲಿರುವ ಅಂತಿಮ ಪ್ಲೇಯಿಂಗ್‌ XI title=

IND vs ZIM: ಜಿಂಬಾಬ್ವೆ ಪ್ರವಾಸದ ಐದು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಅಂತಿಮ ಕದನಕ್ಕೆ ಸಜ್ಜಾಗಿದೆ. ಐದು ಪಂದ್ಯಗಳ ಟಿ20 ಸರಣಿ ಇದಾಗಿದ್ದು ನಾಲ್ಕು ಪಂದ್ಯಗಳು ಮುಗಿದಿದೆ, ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ 3-1 ಅಂತರದಲ್ಲಿ ಭಾರತ ತಂಡ ಪಂದ್ಯ ವಶಪಡಿಸಿಕೊಂಡಿದೆ.  ಶುಭಮನ್ ಗಿಲ್ ನೇತೃತ್ವದ ತಂಡ ಭಾನುವಾರ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆ ತಂಡವನ್ನು ಎದುರಿಸಲಿದೆ. ಸರಣಿ ಗೆದ್ದ ಹಿನ್ನಲೆಯಲ್ಲಿ ಟೀಂ ಇಂಡಿಯಾ ತಂಡದಲ್ಲಿ ಬೆಂಚ್ ಪ್ಲೇಯರ್‌ಗಳಿಗೆ ಅವಕಾಶ ಕೊಡುವ ಸಾಧ್ಯತೆ ಇದೆ.

ಜಿಂಬಾಬ್ವೆ ಅಂತಿಮ ಪಂದ್ಯವನ್ನು ಗೆಲ್ಲುವ ಮೂಲಕ ತಮ್ಮ ಅಭಿಮಾನಿಗಳನ್ನು ಸಂತಸ ಪಡಿಸುವ ಕ್ಷಣಕ್ಕಾಗಿ ಕಾಯುತ್ತಿದೆ. ಬೆಂಚ್ ಆಟಗಾರರಿಗೆ ಅವಕಾಶ ನೀಡಿದರೆ ರಿಯಾನ್ ಪರಾಗ್ ಮತ್ತು ಧ್ರುವ್ ಜುರೆಲ್ ಅಂತಿಮ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ವಾಸ್ತವವಾಗಿ, ಈ ಸರಣಿಯಲ್ಲಿ ಅಗ್ರ ಮೂರು ಬ್ಯಾಟ್ಸ್‌ಮನ್‌ಗಳನ್ನು ಹೊರತುಪಡಿಸಿ ಉಳಿದವರಿಗೆ ಹೆಚ್ಚು ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿಲ್ಲ.

ಇದನ್ನೂ ಓದಿ: ವಿಶ್ವಕಪ್‌ ಗೆಲುವಿನ ಸಂಭ್ರಮದಲ್ಲಿ ರೋಹಿತ್‌ ಧರಿಸಿದ್ದ ಕೈ ಗಡಿಯಾರದ ಬೆಲೆ ಎಷ್ಟು ಗೊತ್ತಾ..?

ಶ್ರೀಲಂಕಾ ಪ್ರವಾಸದ ಹಿನ್ನೆಲೆಯಲ್ಲಿ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಮತ್ತು ಸಂಜು ಸ್ಯಾಮ್ಸನ್ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ಇವರಿಬ್ಬರು ಕೈ ತಪ್ಪಿದರೆ ಅಭಿಷೇಕ್ ಶರ್ಮಾ ಓಪನರ್ ಆಗಿ ಕಣಕ್ಕಿಳಿಯಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ರಿಯಾನ್ ಪರಾಗ್ ಆಡಲಿದ್ದು, ಧ್ರುವ್ ಜುರೆಲ್ ವಿಕೆಟ್ ಕೀಪರ್ ಆಗಿ ಕಣಕ್ಕೆ ಇಳಿಯಲಿದ್ದಾರೆ. 

ಬೆಂಚ್ ಆಟಗಾರರನ್ನು ಆಡಿಸುವ ಯೋಜನೆ ಇಲ್ಲದಿದ್ದರೆ ಅಂತಿಮ ತಂಡದಲ್ಲಿ ಯಾವುದೇ ಬದಲಾವಣೆಗಳಿಲ್ಲದೆ ಟೀಂ ಇಂಡಿಯಾ ಕಣಕ್ಕೆ ಇಳಿಯುವ ಸಾಧ್ಯತೆ ಇದೆ. ಬೌಲಿಂಗ್ ವಿಭಾಗದಲ್ಲಿ ಮುಖೇಶ್ ಕುಮಾರ್ ಮತ್ತು ಅವೇಶ್ ಖಾನ್ ಅವರನ್ನು ಕಣಕ್ಕೆ ಇಳಿಸಿದರೆ ಖಲೀಲ್ ಅಹ್ಮದ್ ಮತ್ತು ತುಷಾರ್ ದೇಶಪಾಂಡೆ ತಂಡದಿಂದ ಹೊರಗಿಡಲಾಗುತ್ತದೆ. ರವಿ ಬಿಷ್ಣೋಯ್ ಸ್ಪೆಷಲಿಸ್ಟ್ ಸ್ಪಿನ್ನರ್ ಆಗಿ ಮತ್ತು ವಾಷಿಂಗ್ಟನ್ ಸುಂದರ್ ಸ್ಪಿನ್ ಆಲ್ ರೌಂಡರ್ ಆಗಿ ಆಡಲಿದ್ದಾರೆ.

ಯಶಸ್ವಿ ಜೈಸ್ವಾಲ್/ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ರಯಾನ್ ಪರಾಗ್, ಸಂಜು ಸ್ಯಾಮ್ಸನ್/ಧ್ರುವ್ ಜುರೆಲ್, ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ತುಷಾರ್ ದೇಶಪಾಂಡೆ, ಖಲೀಲ್ ಅಹ್ಮದ್/ಮುಖೇಶ್ ಕುಮಾರ್, ಅವೇಶ್ ಖಾನ್.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News