ಮೈಸೂರು: ಮೈಸೂರು ಜಿಲ್ಲೆ ಬಿಳಿಕೆರೆ ಸಮೀಪ‌ ಅಂತಾರಾಷ್ಟ್ರೀಯ ಅಥ್ಲೀಟ್ ಟಿ.ಅರ್ಜುನ್ ದೇವಯ್ಯ ಕಾರು ಅಪಘಾತಕ್ಕೀಡಾಗಿದ್ದು ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಮಡಿಕೇರಿಯಿಂದ ಮೈಸೂರಿಗೆ ಆಗಮಿಸುತ್ತಿದ್ದ ವೇಳೆ ಇಂದು ಬೆಳಿಗ್ಗೆ ಮೈಸೂರು ಜಿಲ್ಲೆ ಬಿಳಿಕೆರೆ ಸಮೀಪ‌ ಈ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ  ಅಥ್ಲೀಟ್  ಅರ್ಜುನ್ ದೇವಯ್ಯ, ಪತ್ನಿ ದಿವ್ಯಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.


ಈ ಕುರಿತು ಬಿಳಿಕೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.