ನವದೆಹಲಿ: ಬುಧವಾರ ರಾತ್ರಿ ನಡೆದ ಐಪಿಎಲ್‌ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ರೋಚಕ ಗೆಲುವು ಸಾಧಿಸಿತು. ಟಾಸ್ ಗೆದ್ದ ಆರ್‌ಸಿಬಿ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್ ತಂಡವು ರನ್ ಗಳಿಸಲು ತಿಣುಕಾಡಿತು.


COMMERCIAL BREAK
SCROLL TO CONTINUE READING

ಆರ್‌ಸಿಬಿ ಬೌಲರ್ ಗಳ ಕರಾರುವಾಕ್ಕು ಬೌಲಿಂಗ್ ದಾಳಿಗೆ ತತ್ತರಿಸಿ ಹೋದ ಕೆಕೆಆರ್ 18.5 ಓವರ್ ಗಳಲ್ಲಿ ಕೇವಲ 128 ರನ್‍ಗಳಿಗೆ ಆಲೌಟ್ ಆಯಿತು. ಸುಲಭ ಗೆಲುವಿನ ಗುರಿ ಬೆನ್ನತ್ತಿದ ಆರ್‌ಸಿಬಿ ಆರಂಭದಲ್ಲಿಯೇ ಆಘಾತ ಅನುಭಿಸಿತು. ಬಳಿಕ ಚೇತರಿಸಿಕೊಂಡು ಆಡಿ ಗುರಿ ಮುಟ್ಟುವವರೆಗೂ ಹೋರಾಟ ನಡೆಸಿ ಗೆಲುವಿನ ನಗೆ ಬೀರಿತು.


ಅಂತಿಮ ಹಂತದವರೆಗೂ ಜಿದ್ದಾಜಿದ್ದಿನ ಹಣಾಹಣಿ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.