ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ನ ಮುಂದಿನ ಸೀಸನ್ಗೆ (ಐಪಿಎಲ್ 2024) ಮುಂಚಿತವಾಗಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಈಗ ಆಘಾತವೊಂದು ಎದುರಾಗಿದೆ.
ಹೌದು, ತಂಡದ ನಾಯಕ ಶ್ರೇಯಸ್ ಅಯ್ಯರ್ ಗೆ ಈಗ ಬೆನ್ನು ನೋವಿನಿಂದಾಗಿ ಅವರು ಕೆಲವು ಆರಂಭಿಕ ಪಂದ್ಯಗಳು ಇಲ್ಲವೇ ಸಂಪೂರ್ಣ ಐಪಿಎಲ್ ಟೂರ್ನಿಗೆ ಅಲಭ್ಯರಾಗಲಿದ್ದಾರೆ ಎನ್ನಲಾಗಿದೆ.ಪ್ರಸ್ತುತ ರಣಜಿ ಟ್ರೋಫಿ 2024 ರ ಫೈನಲ್ನಲ್ಲಿ ಮುಂಬೈ ಪರ ಆಡುತ್ತಿರುವ ಅಯ್ಯರ್, ಮಾಧ್ಯಮಗಳ ವರದಿಯ ಪ್ರಕಾರ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಗಾಗಿ ಕೆಲವು ಪಂದ್ಯಗಳನ್ನು ಕಳೆದುಕೊಳ್ಳಬಹುದು ಎನ್ನಲಾಗಿದೆ. ವಿದರ್ಭ ವಿರುದ್ಧದ ಪಂದ್ಯದಲ್ಲಿ ಅವರಿಗೆ ಮತ್ತೆ ಬೆನ್ನುನೋವು ಉಲ್ಬಣಗೊಂಡಿದ್ದರಿಂದ ಈಗ ಅವರು ಐಪಿಎಲ್ ಆರಂಭಿಕ ಪಂದ್ಯಗಳಿಗೆ ಗೈರಾಗುವ ಸಾಧ್ಯತೆಗಳು ದಟ್ಟವಾಗಿವೆ.
Chalo shuru karte hai! 🗓 pic.twitter.com/i2l0M9dP8x
— KolkataKnightRiders (@KKRiders) February 22, 2024
ಇನ್ನೊಂದೆಡೆಗೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (NCA) ವೈದ್ಯಕೀಯ ಸಮಿತಿಯು ಅಯ್ಯರ್ಗೆ ಕ್ಲೀನ್ ಚಿಟ್ ನೀಡಿದ್ದು, ಅವರ ಗಾಯಕ್ಕೆ ಸಂಬಂಧಿಸಿದಂತೆ ಹಲವು ವದಂತಿಗಳಿಗೆ ಕಾರಣವಾಗಿವೆ.ಕೆಕೆಆರ್ ಮಾರ್ಚ್ 23 ರಂದು IPL 2024 ರ ತನ್ನ ಮೊದಲ ಪಂದ್ಯವನ್ನು ಆಡುತ್ತದೆ ಮತ್ತು ಮುಂದಿನ 8 ದಿನಗಳಲ್ಲಿ ಅಯ್ಯರ್ ಸಂಪೂರ್ಣವಾಗಿ ಫಿಟ್ ಆಗಿರದಿದ್ದಲ್ಲಿ ಆಗ ಅವರು ಪಂದ್ಯಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ