IPL 2025, RCB vs PBKS: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ೧೮ನೇ ಆವೃತ್ತಿಯ ಐಪಿಎಲ್ ಟೂರ್ನಿಯ 34ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಎದುರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಲು ಕಂಡಿದೆ. ಈ ಮೂಲಕ ತವರು ನೆಲದಲ್ಲಿಯೇ ಹ್ಯಾಟ್ರಿಕ್ ಸೋಲು ಕಾಣುವ ಮೂಲಕ ಆರ್ಸಿಬಿ ತನ್ನ ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಸೆ ಮೂಡಿದೆ.
ಟಾಸ್ ಗೆದ್ದ ಪಂಜಾಬ್ ತಂಡ ನಾಯಕ ಶ್ರೇಯಸ್ ಅಯ್ಯರ್ ಫೀಲ್ಡಿಂಗ್ ಆಯ್ದುಕೊಂಡರು. ಮಳೆಯ ಕಾರಣ ವಿಳಂಬವಾಗಿ ಆರಂಭವಾದ ಪಂದ್ಯಕ್ಕೆ 14 ಓವರ್ಗಳನ್ನ ನಿಗದಿ ಮಾಡಲಾಗಿತ್ತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ಬ್ಯಾಟ್ಸ್ಮನ್ಗಳು ಪಂಜಾಬ್ ಬೌಲರ್ಗಳ ಮಾರಕ ದಾಳಿಗೆ ಸಿಲುಕಿ ನಲುಗಿದರು. ಐವತ್ತು ರನ್ಗಳಿಗೆ ಆಲೌಟ್ ಆಗುವ ಹಂತದಲ್ಲಿದ್ದ ತಂಡಕ್ಕೆ ಕೊನೆಯಲ್ಲಿ ಟಿಮ್ ಡೇವಿಡ್ ಸ್ಫೋಟಕ ಆಟವಾಡಿ ನೆರವಾದರು.
ಇದನ್ನೂ ಓದಿ: IPL 2025: ಪಂಜಾಬ್ ಮಾರಕ ಬೌಲಿಂಗ್ ದಾಳಿಯ ನಡುವೆ ಮಿಂಚಿದ ಟಿಮ್ ಡೇವಿಡ್!! ಗೆಲ್ಲುತ್ತಾ RCB?
ಆರ್ಸಿಬಿ ತಂಡಕ್ಕೆ ಪಂಜಾಬ್ ಬೌಲರ್ಗಳು ಆಘಾತಗಳ ಮೇಲೆ ಆಘಾತ ನೀಡಿದರು. ತವರು ನೆಲದಲ್ಲಿ ಆರ್ಸಿಬಿ ಬ್ಯಾಟ್ಸ್ಮನ್ಗಳು ಮತ್ತೊಮ್ಮೆ ನಿರಾಸೆ ಮೂಡಿಸಿದರು. ಪಂಜಾಬ್ನ ಮಾರಕ ಬೌಲಿಂಗ್ ದಾಳಿಗೆ ನಲುಗಿದ ಆರ್ಸಿಬಿಯ ಬ್ಯಾಟ್ಸ್ಮನ್ಗಳು ಪೆವಿಲಿಯನ್ ಪರೇಡ್ ನಡೆಸಿದರು. ನಾಯಕ ರಜತ್ ಪಾಟೀದಾರ್ (23) ಮತ್ತು ಟಿಮ್ ಡೇವಿಡ್ (ಅಜೇಯ 50) ಬಿಟ್ಟರೆ ಬೇರಾವ್ ಆಟಗಾರರು ಎರಡಂಕಿ ಮೊತ್ತ ದಾಖಲಿಸಲಿಲ್ಲ. ಟಿಮ್ ಡೇವಿಡ್ ಆಕರ್ಷಕ ಅರ್ಧಶತಕದ ನೆರವಿನಿಂದ ಆರ್ಸಿಬಿ 14 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 95 ರನ್ ಗಳಿಸಿದೆ. ಟಿಮ್ ಡೇವಿಡ್ ಕೇವಲ 26 ಎಸೆತಗಳಲ್ಲಿ 5 ಬೌಂಡರಿ ಮತ್ತು 3 ಸಿಕ್ಸರ್ ಇದ್ದ ಅಜೇಯ 50 ರನ್ ಗಳಿಸಿದರು.
We fought hard, but it wasn’t enough. ❤️🩹
Let’s turn it around in Chandigarh, boys! 👊#PlayBold #ನಮ್ಮRCB #IPL2025 #RCBvPBKS pic.twitter.com/TSZozulDTS
— Royal Challengers Bengaluru (@RCBTweets) April 18, 2025
ಫಿಲ್ ಸಾಲ್ಟ್ ಒಂದು ಬೌಂಡರಿ ಬಾರಿಸಿ ಔಟಾದರೆ, ವಿರಾಟ್ ಕೊಹ್ಲಿ ಕೇವಲ 1 ರನ್ ಗಳಿಸಿ ನಿರ್ಗಮಿಸಿದರು. ಲಿಯಾಮ್ ಲಿವಿಂಗ್ಸ್ಟೋನ್ ಕೇವಲ 4 ರನ್ ಗಳಿಸಿ ಔಟಾದರೆ, ಜಿತೇಶ್ ಶರ್ಮಾ ಕೇವಲ 2 ರನ್ಗೆ ವಿಕೆಟ್ ಒಪ್ಪಿಸಿದರು. ಕೃನಾಲ್ ಪಾಂಡ್ಯ ಕೂಡ ಕೇವಲ 1 ರನ್ಗೆ ಪೆವಿಲಿಯನ್ ಸೇರಿದರು. ಪಂಜಾಬ್ ಪರ ಅರ್ಷದೀಪ್ ಸಿಂಗ್, ಹರ್ಪ್ರೀತ್ ಬ್ರಾರ್, ಮಾರ್ಕೊ ಜಾನ್ಸೆನ್ ಮತ್ತು ಯಜುವೇಂದ್ರ ಚಹಾಲ್ ತಲಾ ಎರಡು ವಿಕೆಟ್ ಪಡೆದರೆ, ಜೇವಿಯರ್ ಬಾರ್ಟ್ಲೆಟ್ ಒಂದು ವಿಕೆಟ್ ಕಬಳಿಸಿದರು.
ಇದನ್ನೂ ಓದಿ: PSL ನಲ್ಲಿ ಆಟಗಾರರಿಗೆ IPL ಗಿಂತ ಹೆಚ್ಚಿನ ಹಣ..! ವಿಶ್ವದ ಅತಿದೊಡ್ಡ ಲೀಗ್ ಅನ್ನು ಗೇಲಿ ಮಾಡಿದ ಪಾಕಿಸ್ತಾನ!
ಮಿಂಚಿದ ನೆಹಾಲ್ ವಧೇರಾ
ಸುಲಭ ಗೆಲುವಿನ ಗುರಿ ಬೆನ್ನಟ್ಟಿದ ಪಂಜಾಬ್ 12.1 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ಮುಟ್ಟಿತು. ಪಂಜಾಬ್ ಪರ ನೆಹಾಲ್ ವಧೇರಾ (33), ಪ್ರಿಯಾಂಶ್ ಆರ್ಯ (16), ಜೋಶ್ ಇಂಗ್ಲಿಸ್ (14) ಮತ್ತು ಪ್ರಭಸಿಮ್ರನ್ ಸಿಂಗ್ (13) ರನ್ ಗಳಿಸಿದರು. ಆರ್ಸಿಬಿ ಪರ ಬೌಲಿಂಗ್ನಲ್ಲಿ ಜೋಶ್ ಹ್ಯಾಜಲ್ವುಡ್ 3 ಮತ್ತು ಭುವನೇಶ್ವರ್ ಕುಮಾರ್ 2 ವಿಕೆಟ್ ಪಡೆದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.