ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 21 ರನ್ ಗಳ ಅಂತರದಲ್ಲಿ ಸೋಲನ್ನು ಅನುಭವಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ನನ್ನ ಪ್ರಚಾರ ವ್ಯಕ್ತಿ ಪರ, ಪಕ್ಷದ ಪರವಲ್ಲ


ಟಾಸ್ ಗೆದ್ದು ಆರ್ಸಿಬಿ ತಂಡವು ಫೀಲ್ಡಿಂಗ್ ಆಯ್ದುಕೊಂಡಿತು. ಇದೆ ವೇಳೆ ಬ್ಯಾಟಿಂಗ್ ಅವಕಾಶ ಪಡೆದ ಕೊಲ್ಕತ್ತಾ ತಂಡವು ಆರಂಭಿಕ ಆಟಗಾರರ ಭರ್ಜರಿ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಐದು ವಿಕೆಟ್ ನಷ್ಟಕ್ಕೆ 200 ರನ್ ಗಳಿಸಿತು.


"ಯಡಿಯೂರಪ್ಪ ಅವರ ಪುತ್ರರಿಗೆ ಟಿಕೆಟ್ ನೀಡುವುದು ಪರಿವಾರವಾದವಲ್ಲವೇ?"


ಇನ್ನೂ ಕೋಲ್ಕತ್ತಾ ನೀಡಿದ 201 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಉತ್ತಮ ಆರಂಭವನ್ನೇ ಕಂಡಿತ್ತು, ಈ ಸಂದರ್ಭದಲ್ಲಿ ಫಾಫ್ ದುಪ್ಲೆಸಿಸ್ ತಂಡದ ಮೊತ್ತ 31 ಆಗಿದ್ದಾಗ ಸುಯಸ್ ಶರ್ಮಾಗೆ ವಿಕೆಟ್ ಒಪ್ಪಿಸಿದರು. ನಂತರ ಬಂದ ಶಾಬಾಜ್ ಅಹಮದ್ 2, ಹಾಗೂ ಗ್ಲೆನ್ ಮ್ಯಾಕ್ಸ್ ವೆಲ್ 5 ರನ್ ಗಳಿಗೆ ವಿಕೆಟ್ ಒಪ್ಪಿಸುವ ಮೂಲಕ ತಂಡಕ್ಕೆ ನಿರಾಸೆ ಮೂಡಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.