W,W,W,W,W... ಹೀಗೆ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸಿದ್ದು ಅಂದು ಟೀಂ ಇಂಡಿಯಾದಿಂದ ಹೊರಬಿದ್ದ ಈ ಬೌಲರ್!

Gujarat Titans vs Sunrisers Hyderabad: ಗುಜರಾತ್ ಟೈಟಾನ್ಸ್ ವಿರುದ್ಧ ಅನುಭವಿ ಸನ್‌ ರೈಸರ್ಸ್ ಹೈದರಾಬಾದ್ ಬೌಲರ್ ಭುವನೇಶ್ವರ್ ಕುಮಾರ್ ಅವರ ಮಾರಕ ಬೌಲಿಂಗ್ ಕಂಡುಬಂದಿದೆ. ಈ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ತಮ್ಮ ತಂಡದ ಅತ್ಯಂತ ಯಶಸ್ವಿ ಬೌಲರ್ ಎಂದು ಸಾಬೀತುಪಡಿಸಿದ್ದಾರೆ. ಈ ಪಂದ್ಯದಲ್ಲಿ ಅವರು 4 ಓವರ್ ಬೌಲಿಂಗ್ ಮಾಡುವಾಗ 30 ರನ್ ವ್ಯಯಿಸಿ 5 ವಿಕೆಟ್ ಪಡೆದರು. ಗುಜರಾತ್ ಟೈಟಾನ್ಸ್ ಇನಿಂಗ್ಸ್ ನ ಕೊನೆಯ ಓವರ್ ನಲ್ಲಿ ಭುವನೇಶ್ವರ್ ಕುಮಾರ್ 3 ವಿಕೆಟ್ ಪಡೆದರು.

Written by - Bhavishya Shetty | Last Updated : May 16, 2023, 10:11 AM IST
    • ಸನ್ ರೈಸರ್ಸ್ ಹೈದರಾಬಾದ್ ಪರ ಅನುಭವಿ ಬೌಲರ್ ಒಬ್ಬರು ಈ ಪಂದ್ಯದಲ್ಲಿ 5 ವಿಕೆಟ್ ಪಡೆದಿದ್ದಾರೆ
    • ಈ ಆಟಗಾರ ಕೆಲ ದಿನಗಳಿಂದ ಭಾರತ ತಂಡದಲ್ಲಿ ಸ್ಥಾನ ಪಡೆಯಲು ಹರಸಾಹಸ ಪಡುತ್ತಿದ್ದಾರೆ
    • ಭುವನೇಶ್ವರ್ ಕುಮಾರ್ ತಮ್ಮ ತಂಡದ ಅತ್ಯಂತ ಯಶಸ್ವಿ ಬೌಲರ್ ಎಂದು ಸಾಬೀತುಪಡಿಸಿದ್ದಾರೆ
W,W,W,W,W... ಹೀಗೆ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸಿದ್ದು ಅಂದು ಟೀಂ ಇಂಡಿಯಾದಿಂದ ಹೊರಬಿದ್ದ ಈ ಬೌಲರ್! title=
Bhuvneshwar Kumar

Gujarat Titans vs Sunrisers Hyderabad: ಇಂಡಿಯನ್ ಪ್ರೀಮಿಯರ್ ಲೀಗ್ 2023 (ಐಪಿಎಲ್ 2023) ನ 62 ನೇ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ನಡೆದಿದೆ. ಈ ಪಂದ್ಯದಲ್ಲಿ ಹೈದರಾಬಾದ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಶುಭ್ಮನ್ ಗಿಲ್ ಅವರ ಅದ್ಭುತ ಶತಕದಿಂದಾಗಿ ಗುಜರಾತ್ ಟೈಟಾನ್ಸ್ ತಂಡ 20 ಓವರ್‌ ಗಳಲ್ಲಿ 188 ರನ್ ಗಳಿಸಿತು. ಆದರೆ ಸನ್ ರೈಸರ್ಸ್ ಹೈದರಾಬಾದ್ ಪರ ಅನುಭವಿ ಬೌಲರ್ ಒಬ್ಬರು ಈ ಪಂದ್ಯದಲ್ಲಿ 5 ವಿಕೆಟ್ ಪಡೆದಿದ್ದಾರೆ. ಇನ್ನು ಈ ಆಟಗಾರ ಕೆಲ ದಿನಗಳಿಂದ ಭಾರತ ತಂಡದಲ್ಲಿ ಸ್ಥಾನ ಪಡೆಯಲು ಹರಸಾಹಸ ಪಡುತ್ತಿದ್ದಾರೆ.

ಇದನ್ನೂ ಓದಿ: Team India: ರೋಹಿತ್ ಶರ್ಮಾ ನಿವೃತ್ತಿ ಬಳಿಕ ಟೀಂ ಇಂಡಿಯಾದ ನಾಯಕನಾಗೋದು ಈ ಸ್ಟಾರ್ ಬ್ಯಾಟ್ಸ್’ಮನ್!

ಗುಜರಾತ್ ಟೈಟಾನ್ಸ್ ವಿರುದ್ಧ ಅನುಭವಿ ಸನ್‌ ರೈಸರ್ಸ್ ಹೈದರಾಬಾದ್ ಬೌಲರ್ ಭುವನೇಶ್ವರ್ ಕುಮಾರ್ ಅವರ ಮಾರಕ ಬೌಲಿಂಗ್ ಕಂಡುಬಂದಿದೆ. ಈ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ತಮ್ಮ ತಂಡದ ಅತ್ಯಂತ ಯಶಸ್ವಿ ಬೌಲರ್ ಎಂದು ಸಾಬೀತುಪಡಿಸಿದ್ದಾರೆ. ಈ ಪಂದ್ಯದಲ್ಲಿ ಅವರು 4 ಓವರ್ ಬೌಲಿಂಗ್ ಮಾಡುವಾಗ 30 ರನ್ ವ್ಯಯಿಸಿ 5 ವಿಕೆಟ್ ಪಡೆದರು. ಗುಜರಾತ್ ಟೈಟಾನ್ಸ್ ಇನಿಂಗ್ಸ್ ನ ಕೊನೆಯ ಓವರ್ ನಲ್ಲಿ ಭುವನೇಶ್ವರ್ ಕುಮಾರ್ 3 ವಿಕೆಟ್ ಪಡೆದರು. ಈ ಪಂದ್ಯದಲ್ಲಿ ಅವರು ವೃದ್ಧಿಮಾನ್ ಸಹಾ, ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ, ರಶೀದ್ ಖಾನ್ ಮತ್ತು ಮೊಹಮ್ಮದ್ ಶಮಿಗೆ ಪೆವಿಲಿಯನ್ ಹಾದಿ ತೋರಿಸಿದ್ದಾರೆ.

ಭುವನೇಶ್ವರ್ ಕುಮಾರ್ 21 ಜನವರಿ 2022 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಪರ ಕೊನೆಯ ODI ಆಡಿದ್ದಾರೆ. ಇದರ ಹೊರತಾಗಿ, ಭುವನೇಶ್ವರ್ ಕುಮಾರ್ ಟೀಮ್ ಇಂಡಿಯಾ ಪರ ತಮ್ಮ ಕೊನೆಯ T20 ಪಂದ್ಯವನ್ನು 22 ನವೆಂಬರ್ 2022 ರಂದು ನ್ಯೂಜಿಲೆಂಡ್ ವಿರುದ್ಧ ಆಡಿದ್ದರು.

ಆದರೆ ಸದ್ಯದ ಪರಿಸ್ಥಿತಿಯಲ್ಲಿ ಅವರು ಭಾರತ ತಂಡದ ಪರವಾಗಿ ಆಡುತ್ತಿಲ್ಲ. ಇದೀಗ ಭುವಿ ಅದ್ಭುತ ಪ್ರದರ್ಶನ ನೀಡಿದ್ದು, ಇದು ಅವರನ್ನು ಮತ್ತೆ ಟೀಮ್ ಇಂಡಿಯಾಕ್ಕೆ ಮರಳಿ ಕರೆತರಬಹುದು ಎಂದು ನಂಬಿಕೆ ಮೂಡಿದೆ.

ಇದನ್ನೂ ಓದಿ: Free Hit Rules: ಫ್ರೀ ಹಿಟ್ ನಿಯಮದಲ್ಲಿ ಐತಿಹಾಸಿಕ ಬದಲಾವಣೆ! ಹೇಗಿರಲಿದೆ ಗೊತ್ತಾ ಹೊಸ ರೂಲ್ಸ್?

ಶುಭ್ಮನ್ ಗಿಲ್ ಅವರ ಶತಕ ಮತ್ತು ಬಿ ಸಾಯಿ ಸುದರ್ಶನ್ ಅವರ ಶತಕದ ಜೊತೆಯಾಟದಿಂದ ಗುಜರಾತ್ ಟೈಟಾನ್ಸ್ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಒಂಬತ್ತು ವಿಕೆಟ್‌ ಗೆ 188 ರನ್ ಗಳಿಸಿತು. ಗಿಲ್ 58 ಎಸೆತಗಳಲ್ಲಿ 13 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 101 ರನ್ ಗಳಿಸಿದರು. ಸುದರ್ಶನ್ 47 ರನ್ ಬಾರಿಸಿದರು. ಈ ಇಬ್ಬರು ಆಟಗಾರರ ನಡುವೆ ಎರಡನೇ ವಿಕೆಟ್‌ ಗೆ 147 ರನ್ ಸೇರಿಸಿ ಟೈಟಾನ್ಸ್‌ ನ ಬಲಿಷ್ಠ ಸ್ಕೋರ್‌ ಗೆ ಅಡಿಪಾಯ ಹಾಕಿದರು. ಆದರೆ ಇವರಿಬ್ಬರನ್ನು ಹೊರತುಪಡಿಸಿ, ಟೈಟಾನ್ಸ್ ಬ್ಯಾಟ್ಸ್‌ ಮನ್‌ ಗಳು ಎರಡಂಕಿ ತಲುಪಲು ಕೂಡ ಸಾಧ್ಯವಾಗಿರಲಿಲ್ಲ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News