Mumbai Indians vs Royal Challengers Bengaluru: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 12 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಗೆದ್ದ ಮುಂಬೈ ನಾಯಕ ಹಾರ್ದಿಕ ಪಾಂಡ್ಯ ಫೀಲ್ಡಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 221 ರನ್ ಗಳಿಸಿತು. ಬೃಹತ್ ಮೊತ್ತದ ಟಾರ್ಗೆಟ್ ಬೆನ್ನತ್ತಿದ ಮುಂಬೈ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 209 ರನ್ ಗಳಿಸಲಷ್ಟೇ ಶಕ್ತಿವಾಗಿ ಸೋಲು ಕಂಡಿತು.
ಇದನ್ನೂ ಓದಿ: ಐಪಿಎಲ್ ಮಧ್ಯೆಯೇ ಫುಲ್ ಎಂಜಾಯ್... ವಿದೇಶಿ ಗರ್ಲ್ಫ್ರೆಂಡ್ ಜೊತೆ ಬೆಡ್ ರೂಮ್ನಲ್ಲಿ ಯಶಸ್ವಿ ಜೈಸ್ವಾಲ್! ಫೋಟೋ ವೈರಲ್
‘W’ankhede ✅
A thriller of a run fest with 430 runs scored, and we're extremely happy to have finished on the right side! ?#PlayBold #ನಮ್ಮRCB #IPL2025 #MIvRCB pic.twitter.com/7WFWzkPp1f
— Royal Challengers Bengaluru (@RCBTweets) April 7, 2025
ಟ್ರೆಂಟ್ ಬೌಲ್ಟ್ ಎಸೆದ ಮೊದಲ ಒವರ್ನ 2ನೇ ಎಸೆತದಲ್ಲಿ ಫಿಲ್ ಸಾಲ್ಟ್ ಬೌಲ್ಡ್ ಆಗಿದ್ದರಿಂದ ಆರ್ಸಿಬಿಗೆ ಆರಂಭಿಕ ಆಘಾತ ಉಂಟಾಗಿತ್ತು. ಆದರೆ ವಿರಾಟ್ ಕೊಹ್ಲಿ ಆಕರ್ಷಕ ಅರ್ಧಶತಕ ಗಳಿಸುವ ಮೂಲಕ ತಂಡಕ್ಕೆ ನೆರವಾದರು. 42 ಎಸೆತಗಳಲ್ಲಿ ಅವರು 8 ಬೌಂಡರಿ ಮತ್ತು 2 ಸಿಕ್ಸರ್ ಇದ್ದ 67 ರನ್ ಗಳಿಸಿದರು. ಸ್ಫೋಟಕ ಆಟವಾಡಿದ ನಾಯಕ ರಜತ್ ಪಾಟೀದಾರ್ 32 ಎಸೆತಗಳಲ್ಲಿ 5 ಬೌಂಡರಿ 4 ಸಿಕ್ಸರ್ ಇದ್ದ 64 ರನ್ ಗಳಿಸಿದರು.
The best finisher debate can go on, but with the ball, here's Krunal Pandya's entry. ?#PlayBold #ನಮ್ಮRCB #IPL2025 #MIvRCB pic.twitter.com/PbMPUrdY5O
— Royal Challengers Bengaluru (@RCBTweets) April 7, 2025
ಕೊನೆಯಲ್ಲಿ ಮಿಂಚಿದ ಜಿತೇಶ್ ಶರ್ಮಾ ಸ್ಫೋಟಕ ಆಟವಾಡುವ ಮೂಲಕ ತಂಡದ ಮೊತ್ತವನ್ನು 200 ರನ್ಗಳ ಗಡಿ ದಾಟಿಸಲು ನೆರವಾದರು. 19 ಎಸೆತಗಳಲ್ಲಿ 2 ಬೌಂಡರಿ 4 ಸಿಕ್ಸರ್ ಇದ್ದ ಅಜೇಯ 40 ರನ್ ಗಳಿಸಿದರು. ಇದಲ್ಲದೆ ದೇವದತ್ ಪಡಿಕ್ಕಲ್ 22 ಎಸೆತಗಳಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್ ಇದ್ದ 37 ರನ್ ಗಳಿಸಿ ತಂಡಕ್ಕೆ ನೆರವಾದರು. ಮುಂಬೈ ಪರ ಟ್ರೆಂಟ್ ಬೌಲ್ಟ್ ಮತ್ತು ಹಾರ್ದಿಕ್ ಪಾಂಡ್ಯ ತಲಾ ಎರಡು ವಿಕೆಟ್ ಪಡೆದು ಮಿಂಚಿದರೆ, ವಿಘ್ನೇಶ್ ಪುತ್ತೂರು ಒಂದು ವಿಕೆಟ್ ಕಬಳಿಸಿದರು.
ಇದನ್ನೂ ಓದಿ: Explainer: RCB ತಂಡವು 18 ವರ್ಷದಲ್ಲಿ ಐಪಿಎಲ್ ಕಪ್ ಗೆಲ್ಲದೇ ಇರುವುದಕ್ಕೆ 3 ಕಾರಣಗಳು..!
ಕೃನಾಲ್ ಮಾರಕ ಬೌಲಿಂಗ್!!
ಮುಂಬೈ ಪರ ತಿಲಕ್ ವರ್ಮಾ (56) ಆಕರ್ಷಕ ಅರ್ಧಶತಕ ಸಿಡಿಸಿದರು. ನಾಯಕ ಹಾರ್ದಿಕ್ ಪಾಂಡ್ಯ (42) ರನ್ ಗಳಿಸಿದರು. ಇನ್ನುಳಿದಂತೆ ಸೂರ್ಯಕುಮಾರ್ ಯಾದವ್ (28), ವಿಲ್ ಜಾಕ್ಸ್ (22), ರೋಹಿತ್ ಶರ್ಮಾ (17), ರಯಾನ್ ರಿಕೆಲ್ಟನ್ (17) ಮತ್ತು ನಮನ್ ಧೀರ್ (11) ರನ್ ಗಳಿಸಿದರು. ಆರ್ಸಿಬಿ ಪರ ಬೌಲಿಂಗ್ನಲ್ಲಿ ಮಿಂಚಿದ ಕೃನಾಲ್ ಪಾಂಡ್ಯ (45ಕ್ಕೆ 4) ಕೊನೆಯ ಓವರ್ನಲ್ಲಿ ಮೂರು ವಿಕೆಟ್ಗಳನ್ನು ಪಡೆಯುವ ಮೂಲಕ ತಂಡಕ್ಕೆ ಅಮೋಘ ಗೆಲುವು ತಂದುಕೊಟ್ಟರು. ಯಶ್ ದಯಾಳ್ ಮತ್ತು ಜೋಶ್ ಹ್ಯಾಜಲ್ವುಡ್ ತಲಾ 2 ವಿಕೆಟ್ ಪಡೆದರೆ, ಭುವನೇಶ್ವರ್ ಕುಮಾರ್ 1 ವಿಕೆಟ್ ಕಬಳಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









