Prasidh Krishna News: ಟೀಂ ಇಂಡಿಯಾದ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಶುಕ್ರವಾರ ರಾತ್ರಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿಯು ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: BBK: ಈಕೆ ದುಡ್ಡು ಕೊಟ್ಟ ಕಾರಣ ಸಂಗೀತಾಗೆ ಫಿನಾಲೆ ಟಿಕೆಟ್ ಕೊಟ್ರಂತೆ Bigg Boss! ಶಾಕಿಂಗ್ ಹೇಳಿಕೆ… ಫ್ಯಾನ್ಸ್ ಆಕ್ರೋಶ


ಆದರೆ ಪ್ರಸಿದ್ಧ್ ಕೃಷ್ಣ ಗಾಯಗೊಂಡಿರುವ ಕಾರಣದಿಂದ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಅವರನ್ನು ಆಯ್ಕೆ ಮಾಡಲಾಗಿಲ್ಲ. ಶುಕ್ರವಾರ ನಡೆದ ರಣಜಿ ಟ್ರೋಫಿ ಪಂದ್ಯದ ವೇಳೆ ಟೀಂ ಇಂಡಿಯಾದ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಅವರು ಗಾಯಗೊಂಡಿದ್ದಾರೆ.


ಪ್ರಸಿದ್ಧ್ ಕೃಷ್ಣ ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ವೇಳೆ ಭಾರತ ತಂಡದ ಭಾಗವಾಗಿದ್ದರು. ಅಹಮದಾಬಾದ್‌’ನಲ್ಲಿ ನಡೆಯುತ್ತಿರುವ ಕರ್ನಾಟಕ ಮತ್ತು ಗುಜರಾತ್ ನಡುವಿನ ರಣಜಿ ಪಂದ್ಯದ ವೇಳೆ ಪ್ರಸಿದ್ಧ್ ಕೃಷ್ಣ ಬೌಲಿಂಗ್ ಮಾಡುವಾಗ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು.


ಪ್ರಸಿದ್ಧ್ ಕೃಷ್ಣ ಅವರು ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ಆಡುವ ಸುವರ್ಣ ಅವಕಾಶವನ್ನು ಹೊಂದಿದ್ದರು. ಆದರೆ ಗಾಯದಿಂದ ಆ ಅವಕಾಶ ಕೈತಪ್ಪಿ ಹೋಗಿದೆ. ಪ್ರಸಿದ್ಧ್ ಕೃಷ್ಣ ಅವರು ದಕ್ಷಿಣ ಆಫ್ರಿಕಾ ಪ್ರವಾಸದ ಸಂದರ್ಭದಲ್ಲಿ ಟೆಸ್ಟ್ ಕ್ರಿಕೆಟ್‌’ಗೆ ಪಾದಾರ್ಪಣೆ ಮಾಡಿದ್ದರು.


ಇದನ್ನೂ ಓದಿ: ‘ಸಂಕ್ರಾಂತಿ’ ಸಡಗರ ಶುರು: ನಿಮ್ಮ ಪ್ರೀತಿಪಾತ್ರರಿಗೆ ಶುಭಾಶಯ ಕೋರಲು ಇಲ್ಲಿವೆ ಶುಭಸಂದೇಶಗಳು


ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಜನವರಿ 25 ರಿಂದ ಹೈದರಾಬಾದ್‌ನಲ್ಲಿ ನಡೆಯಲಿದ್ದು, ಎರಡನೇ ಪಂದ್ಯ ಫೆಬ್ರವರಿ 2 ರಿಂದ ವಿಶಾಖಪಟ್ಟಣದಲ್ಲಿ ನಡೆಯಲಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.