ಬೆಂಗಳೂರು: ಟೀಂ ಇಂಡಿಯಾ ಆಲ್‌ರೌಂಡರ್‌ ಆಟಗಾರ ರವೀಂದ್ರ ಜಡೇಜಾ ಅವರು, ಆಸ್ಪತ್ರೆಗೆ ದಾಖಲಾಗಿದ್ದು ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಕುರಿತು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ʼಈ ಸಂದರ್ಭದಲ್ಲಿ ನಾನು ತುಂಬಾ ಜನರಿಗೆ ಧನ್ಯವಾದ ಹೇಳಬೇಕು, ನನಗೆ ಬೆಂಬಲಿಸಿದ್ದಕ್ಕಾಗಿ ಬಿಸಿಸಿಐ ಮತ್ತು ಅಭಿಮಾನಿಗಳಿಗೆ ಧನ್ಯವಾದ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಆದಷ್ಟು ಬೇಗ ಕ್ರಿಕೆಟ್‌ಗೆ ಮರಳಲು ಪ್ರಯತ್ನಿಸುವುದಾಗಿʼ ಅಭಿಮಾನಿಗಳಿಗೆ ಜಡೇಜಾ ತಿಳಿಸಿದ್ದಾರೆ.


ಇದನ್ನೂ ಓದಿ: Team India: ಏಷ್ಯಾಕಪ್‌ನೊಂದಿಗೆ ಈ 2 ಆಟಗಾರರ ವೃತ್ತಿಜೀವನ ಬಹುತೇಕ ಅಂತ್ಯ..?


ಈ ಬಾರಿಯ ಏಷ್ಯಾಕಪ್​ನ ಮೊದಲ ಎರಡು ಪಂದ್ಯಗಳಲ್ಲಿ ಜಡೇಜಾ ಕಾಣಿಸಿಕೊಂಡಿದ್ದರು. ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ 35 ರನ್​ಗಳ ಹೊಡೆಯುವ ಮೂಲಕ ಟೀಮ್ ಇಂಡಿಯಾ ಗೆಲುವಿಗೆ ಕಾರಣರಾಗಿದ್ದರು. ಅಲ್ದೆ, ಹಾಂಗ್ ಕಾಂಗ್ ವಿರುದ್ದದ್ದ ಪಂದ್ಯದಲ್ಲಿ ಅತ್ಯುತ್ತಮ ಫೀಲ್ಡಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದರು. ನಂತರ ಗಾಯಗೊಂಡಿದ್ದರು.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.