ಮುಂಬೈ: ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಶನಿವಾರ ರಾತ್ರಿ ನಡೆದ 18ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 7 ವಿಕೆಟ್‍ಗಳ ಭರ್ಜರಿ ಗೆಲುವು ಸಾಧಿಸಿದೆ. ಅಂಜು ರಾವತ್ ಮತ್ತು ವಿರಾಟ್ ಕೊಹ್ಲಿ ಅಬ್ಬರದ ಬ್ಯಾಟಿಂಗ್, RCB ಬೌಲರ್ ಗಳ ಮಾರಕ ಬೌಲಿಂಗ್ ದಾಳಿಗೆ ನಲುಗಿ ಹೋದ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಮತ್ತೊಂದು ಹೀನಾಯ ಸೋಲು ಅನುಭವಿಸಿತು. 


COMMERCIAL BREAK
SCROLL TO CONTINUE READING

ಟಾಸ್ ಗೆದ್ದಆರ್​ಸಿಬಿ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಮುಂಬೈ ನಿಗದಿತ 20 ಓವರ್‍ಗಳಲ್ಲಿ 6 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿತು. ಮುಂಬೈ ಪರ ಸೂರ್ಯಕುಮಾರ್ ಯಾದವ್(68) ಸ್ಫೋಟಕ ಆಟವಾಡಿ ಭರ್ಜರಿ ಅರ್ಧಶತಕ ಗಳಿಸಿದರು. ಇನ್ನುಳಿದಂತೆ ಆರಂಭಿಕ ಆಟಗಾರ ಇಶಾನ್ ಕಿಶನ್(26), ನಾಯಕ ರೋಹಿತ್ ಶರ್ಮಾ(26) ಹಾಗೂ ಉನದ್ಕತ್(11) ರನ್ ಗಳಿಸಿದರು. ಆರ್​ಸಿಬಿ ಪರ ವನಿಂದು ಹಸರಂಗ ಮತ್ತು ಹರ್ಷಲ್ ಪಟೇಲ್ ತಲಾ 2 ವಿಕೆಟ್ ಗಳಿಸಿದರೆ, ಆಕಾಶ್ ದೀಪ್ 1 ವಿಕೆಟ್ ಕಬಳಿಸಿದರು. 


ರಾವತ್ & ಕೊಹ್ಲಿ ಅಬ್ಬರ ಬ್ಯಾಟಿಂಗ್!


152 ರನ್‍ಗಳ ಗೆಲುವಿನ ಗುರಿ ಬೆನ್ನತ್ತಿದ ಆರ್​ಸಿಬಿ ಪರ ಅನುಜ್ ರಾವತ್ (66) ಸ್ಫೋಟಕ ಆಟವಾಡಿ ಆಕರ್ಷಕ ಅರ್ಧಶತಕ ಗಳಿಸಿದರು. ವಿರಾಟ್ ಕೊಹ್ಲಿ (48) ರನ್ ಗಳಿಸಿ ತಂಡದ ಗೆಲುವಿಗೆ ನೆರವಾದರು. ಇನ್ನುಳಿದಂತೆ ನಾಯಕ ಫಾಫ್ ಡು ಪ್ಲೆಸಿಸ್(16) ರನ್ ಗಳಿಸಿದರು.


ಮುಂಬೈಗೆ ಸತತ 4 ಹೀನಾಯ ಸೋಲು!


ಇಂದಿನ ಪಂದ್ಯವು ಮುಂಬೈಗೆ ಅತ್ಯಂತ ಮಹತ್ವದ್ದಾಗಿತ್ತು. ಏಕೆಂದರೆ ರೋಹಿತ್ ಶರ್ಮಾ ನೇತೃತ್ವದ ತಂಡ ತನ್ನ ಆರಂಭಿಕ 3 ಪಂದ್ಯಗಳಲ್ಲಿ  ಹೀನಾಯ ಸೋಲು ಕಂಡಿತ್ತು. 5 ಬಾರಿ ಐಪಿಎಲ್ ಚಾಂಪಿಯನ್ ಆಗಿರುವ ಮುಂಬೈಗೆ ಗೆಲುವು ಅತ್ಯವಶ್ಯಕವಾಗಿತ್ತು. ಡು ಪ್ಲೆಸಿಸ್ ನೇತೃತ್ವದಲ್ಲಿ ಆರ್​ಸಿಬಿ ತಂಡವು ಸತತ 3ನೇ ಗೆಲುವು ದಾಖಲಿಸಿ ಪಾಯಿಂಟ್ಸ್ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದೆ. ಆದರೆ ಸತತ 4 ಹೀನಾಯ ಸೋಲು ಕಂಡಿರುವ ಮುಂಬೈಗೆ ಭಾರಿ ಮುಖಭಂಗವಾಗಿದೆ. ಐಪಿಎಲ್‍ನಲ್ಲಿ ಗರಿಷ್ಠ ಚಾಂಪಿಯನ್ ಪಟ್ಟ ಹೊಂದಿರುವ ಮುಂಬೈ(5 ಬಾರಿ) ಮತ್ತು ಚೆನ್ನೈ ಸೂಪರ್ ಕಿಂಗ್ಸ್(4 ಬಾರಿ) ಪ್ರಸಕ್ತ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆಯದೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿವೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.