ಲೈವ್ ಪಂದ್ಯದಲ್ಲೇ ಮೋಸದಾಟವಾಡಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ರಿಷಬ್ ಪಂತ್!

IPL 2024, LSG vs DC: ಸದ್ಯ ಐಪಿಎಲ್ 2024ರ ಅಂಕಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 4 ಅಂಕಗಳೊಂದಿಗೆ ಒಂಬತ್ತನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು 6 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

Written by - Bhavishya Shetty | Last Updated : Apr 13, 2024, 03:51 PM IST
    • ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್‌’ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆಲುವು ಸಾಧಿಸಿದೆ
    • ಡೆಲ್ಲಿ ಕ್ಯಾಪಿಟಲ್ಸ್ ತಂಡ 4 ಅಂಕಗಳೊಂದಿಗೆ ಒಂಬತ್ತನೇ ಸ್ಥಾನದಲ್ಲಿದೆ
    • ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಬ್ ಪಂತ್ ಅಂಪೈರ್ ಜೊತೆ ವಾಗ್ವಾದ ಆರಂಭಿಸಿದ್ದರು
ಲೈವ್ ಪಂದ್ಯದಲ್ಲೇ ಮೋಸದಾಟವಾಡಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ರಿಷಬ್ ಪಂತ್! title=
Rishabh Pant Controversy

IPL 2024, LSG vs DC: ಶುಕ್ರವಾರ ನಡೆದ IPL ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್‌’ಗಳಿಂದ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಗೆಲುವು ಸಾಧಿಸಿದೆ. ಈ ಸೀಸನ್‌’ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇದು ಎರಡನೇ ಗೆಲುವಾಗಿದ್ದು, ಈ ಹಿಂದೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 20 ರನ್ ಗಳಿಂದ ಸೋಲಿಸಿತ್ತು.

ಇದನ್ನೂ ಓದಿ: 'IPL 2025 ರಲ್ಲಿ ಯಲ್ಲೊ ಜರ್ಸಿ ಧರಿಸಲಿದ್ದಾರೆ ರೋಹಿತ್ ಶರ್ಮಾ!'

ಸದ್ಯ ಐಪಿಎಲ್ 2024ರ ಅಂಕಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 4 ಅಂಕಗಳೊಂದಿಗೆ ಒಂಬತ್ತನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು 6 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ದೆಹಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಪಂದ್ಯದ ವೇಳೆ ವಿವಾದವೊಂದು ನಡೆದಿದ್ದು ಎಲ್ಲರನ್ನೂ ಅಚ್ಚರಿಗೊಳಿಸಿದೆ. ಲೈವ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಬ್ ಪಂತ್ ಅಂಪೈರ್ ಜೊತೆ ವಾಗ್ವಾದ ಆರಂಭಿಸಿದ್ದರು. ರಿಷಬ್ ಪಂತ್ DRS ತೆಗೆದುಕೊಳ್ಳಲು ನಿರ್ಧರಿಸಿದಾಗ ಮತ್ತು ಆನ್-ಫೀಲ್ಡ್ ಅಂಪೈರ್ ಅದನ್ನು ಥರ್ಡ್ ಅಂಪೈರ್‌’ಗೆ ಉಲ್ಲೇಖಿಸಿದಾಗ ಈ ಘಟನೆ ನಡೆದಿದೆ.

ದೆಹಲಿ ಕ್ಯಾಪಿಟಲ್ಸ್ ವೇಗದ ಬೌಲರ್ ಇಶಾಂತ್ ಶರ್ಮಾ ಲಕ್ನೋ ಸೂಪರ್ ಜೈಂಟ್ಸ್ ಇನ್ನಿಂಗ್ಸ್‌’ನ ನಾಲ್ಕನೇ ಓವರ್‌’ನಲ್ಲಿ ಬೌಲ್ ಮಾಡಲು ಬಂದರು. ಆ ಸಮಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ದೇವದತ್ ಪಡಿಕ್ಕಲ್ ಬ್ಯಾಟಿಂಗ್ ಮಾಡುತ್ತಿದ್ದರು. ಇಶಾಂತ್ ಶರ್ಮಾ ಈ ಓವರ್‌’ನ ನಾಲ್ಕನೇ ಎಸೆತವನ್ನು ಲೆಗ್ ಸೈಡ್‌’ನಲ್ಲಿ ಬೌಲ್ಡ್ ಮಾಡಿದರು. ಆದರೆ ಅದನ್ನು ಆನ್-ಫೀಲ್ಡ್ ಅಂಪೈರ್ ವೈಡ್ ಎಂದು ಘೋಷಿಸಿದರು. ಇದರ ನಂತರ, ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಬ್ ಪಂತ್  ತಂಡದ ಆಟಗಾರರೊಂದಿಗೆ ಮಾತನಾಡಲು ಪ್ರಾರಂಭಿಸಿ, ಕೈಸನ್ನೆ ಮಾಡಿದರು, ಇದು ಆನ್-ಫೀಲ್ಡ್ ಅಂಪೈರ್ ಅವರು ಡಿಆರ್ಎಸ್ ಕೇಳುತ್ತಿದ್ದಾರೆ ಎಂದು ಭಾವಿಸುವಂತೆ ಮಾಡಿತು. ಇದಾದ ನಂತರ ಮೈದಾನದ ಅಂಪೈರ್ ತಕ್ಷಣವೇ ನಿರ್ಧಾರವನ್ನು ಮೂರನೇ ಅಂಪೈರ್‌ಗೆ ವರ್ಗಾಯಿಸಿದರು.

ಥರ್ಡ್ ಅಂಪೈರ್ ರಿಪ್ಲೇ ನೋಡಿದಾಗ ವೈಡ್ ಬಾಲ್ ಎಂಬುದು ಗೊತ್ತಾಯಿತು. ಇದರಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ ತಮ್ಮ DRS ಅನ್ನು ವ್ಯರ್ಥ ಮಾಡಿತು. ಇದಾದ ಬಳಿಕ ರಿಷಬ್ ಪಂತ್ ತಮ್ಮ ತಪ್ಪನ್ನು ಮರೆಮಾಚಲು ಮೈದಾನದಲ್ಲಿದ್ದ ಅಂಪೈರ್ ಜೊತೆ ವಾಗ್ವಾದ ಆರಂಭಿಸಿದರು. ರಿಷಬ್ ಪಂತ್ ಅವರು ಡಿಆರ್‌ಎಸ್ ತೆಗೆದುಕೊಳ್ಳುವ ಯಾವುದೇ ಉದ್ದೇಶವಿಲ್ಲ ಎಂದು ಹೇಳಿದರು ಅಷ್ಟೇ ಅಲ್ಲದೆ, ಮೈದಾನದಲ್ಲಿರುವ ಅಂಪೈರ್ ತಪ್ಪಾಗಿ ಅರ್ಥೈಸಿಕೊಂಡರು ಎಂದು ಹೇಳಿದರು. ಆದರೆ, ರಿಪ್ಲೇಗಳಲ್ಲಿ ರಿಷಬ್ ಪಂತ್ ರಹಸ್ಯ ಬಯಲಾಯಿತು.

ಇದನ್ನೂ ಓದಿ: ಖಾಲಿ ಹೊಟ್ಟೆಗೆ ಒಂದು ಎಸಳು ಬೆಳ್ಳುಳ್ಳಿ ತಿನ್ನಿ: ಈ ಕಾಯಿಲೆಗಳು ಬುಡದಿಂದಲೇ ವಾಸಿಯಾಗುತ್ತೆ

ರಿಪ್ಲೇನಲ್ಲಿ ರಿಷಬ್ ಪಂತ್ ಡಿಆರ್‌ಎಸ್‌ಗೆ ಸೂಚಿಸಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ಇದಾದ ಬಳಿಕ ಡಗೌಟ್‌ನಲ್ಲಿ ರಿಕಿ ಪಾಂಟಿಂಗ್ ಮತ್ತು ಸೌರವ್ ಗಂಗೂಲಿ ಕೂಡ ಕೋಪಗೊಂಡಿದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News