ಕ್ರಿಕೆಟರ್ ರೋಹಿತ್ ಶರ್ಮಾ ಸೇರಿ ಐವರು ಕ್ರೀಡಾಪಟುಗಳಿಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ

ಭಾರತದ ಸೀಮಿತ ಓವರ್‌ಗಳ ಉಪನಾಯಕ ಮತ್ತು ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅವರಿಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಇದನ್ನು ಕ್ರೀಡಾ ಕ್ಷೇತ್ರದಲ್ಲಿ ನಾಲ್ಕು ವರ್ಷಗಳ ಅವಧಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳಿಗೆ ನೀಡಲಾಗುತ್ತದೆ

Last Updated : Aug 21, 2020, 08:38 PM IST
ಕ್ರಿಕೆಟರ್ ರೋಹಿತ್ ಶರ್ಮಾ ಸೇರಿ ಐವರು ಕ್ರೀಡಾಪಟುಗಳಿಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ  title=
Photo Courtsey : Twitter

ನವದೆಹಲಿ: ಭಾರತದ ಸೀಮಿತ ಓವರ್‌ಗಳ ಉಪನಾಯಕ ಮತ್ತು ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅವರಿಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಇದನ್ನು ಕ್ರೀಡಾ ಕ್ಷೇತ್ರದಲ್ಲಿ ನಾಲ್ಕು ವರ್ಷಗಳ ಅವಧಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳಿಗೆ ನೀಡಲಾಗುತ್ತದೆ

ರೋಹಿತ್ ಗೂ ಮುನ್ನ ಮೂರು ಭಾರತೀಯ ಕ್ರಿಕೆಟಿಗರಾದ ಆಟಗಾರ ಸಚಿನ್ ತೆಂಡೂಲ್ಕರ್, ಇತ್ತೀಚೆಗೆ ನಿವೃತ್ತರಾದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಮಹೇಂದ್ರ ಸಿಂಗ್ ಧೋನಿ ಮತ್ತು ಹಾಲಿ ಭಾರತದ ನಾಯಕ ವಿರಾಟ್ ಕೊಹ್ಲಿ ಅವರಿಗೆ ದೇಶದ ಅತ್ಯುನ್ನತ ಕ್ರೀಡಾ ಗೌರವ ನೀಡಿ ಗೌರವಿಸಲಾಗಿದೆ.

ಕಳೆದ ವರ್ಷ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಏಕದಿನ ವಿಶ್ವಕಪ್‌ನಲ್ಲಿ ಐದು ಶತಕಗಳನ್ನು ಗಳಿಸಿದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದರು.

ಟೇಬಲ್ ಟೆನಿಸ್ ತಾರೆ ಮಾನಿಕಾ ಬಾತ್ರಾ, ಕುಸ್ತಿಪಟು ವಿನೇಶ್ ಫೋಗಾಟ್, ಭಾರತೀಯ ಮಹಿಳಾ ಹಾಕಿ ತಂಡದ ಆಟಗಾರ್ತಿ ರಾಣಿ, ಪ್ಯಾರಾ-ಅಥ್ಲೀಟ್ ಮರಿಯಪ್ಪನ್ ತಂಗವೇಲು ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ 2020 ರ ಆಯ್ಕೆ ಸಮಿತಿ ದೃಢಪಡಿಸಿದೆ.

ಏತನ್ಮಧ್ಯೆ, ಒಟ್ಟು 27 ಇತರ ಕ್ರೀಡಾಪಟುಗಳು ಅರ್ಜುನ ಪ್ರಶಸ್ತಿಯನ್ನು ಸ್ವೀಕರಿಸಲಿದ್ದು, 2020 ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳ ಸಂದರ್ಭದಲ್ಲಿ ಐದು ತರಬೇತುದಾರರಿಗೆ ದ್ರೋಣಾಚಾರ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.

ನ್ಯಾಯಮೂರ್ತಿ (ನಿವೃತ್ತ) ಮುಕುಂದಕಂ ಶರ್ಮಾ (ಭಾರತದ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರು) ಮತ್ತು ಪ್ರಖ್ಯಾತ ಕ್ರೀಡಾಪಟುಗಳನ್ನು ಒಳಗೊಂಡ ಇತರ ಸದಸ್ಯರು ನೇತೃತ್ವದ ಆಯ್ಕೆ ಸಮಿತಿಯು ಧ್ಯಾಂಚನ್ ಪ್ರಶಸ್ತಿಗಾಗಿ 15 ಕ್ರೀಡಾಪಟುಗಳನ್ನು ಮತ್ತು ಜೀವಮಾನದ ವಿಭಾಗದಲ್ಲಿ ದ್ರೋಣಾಚಾರ್ಯ ಪ್ರಶಸ್ತಿಗೆ ಎಂಟು ತರಬೇತುದಾರರನ್ನು ಆಯ್ಕೆ ಮಾಡಿತು.

Trending News