Gautam Gambhir: ರೋಹಿತ್ ಶರ್ಮಾ-ರಾಹುಲ್ ದ್ರಾವಿಡ್ ಭಾರತಕ್ಕೆ ಐಸಿಸಿ ಪ್ರಶಸ್ತಿ ಗೆಲ್ಲುತ್ತಾರೆ- ಗೌತಮ್ ಗಂಭೀರ್

2013ರ ಚಾಂಪಿಯನ್ಸ್ ಟ್ರೋಫಿ ಗೆದ್ದ ನಂತರ ಭಾರತ ಐಸಿಸಿ ಪ್ರಶಸ್ತಿ ಗೆದ್ದಿಲ್ಲ.

Written by - Yashaswini V | Last Updated : Nov 8, 2021, 02:47 PM IST
  • ಕಳೆದ 8 ವರ್ಷಗಳಿಂದ ಯಾವುದೇ ಐಸಿಸಿ ಪ್ರಶಸ್ತಿ ಗೆಲ್ಲಲು ಭಾರತಕ್ಕೆ ಸಾಧ್ಯವಾಗಿಲ್ಲ
  • ಭಾರತದ ವರ್ಚಸ್ವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಇಂದು ನಾಯಕನಾಗಿ ಕೊನೆಯ ಪಂದ್ಯವನ್ನು ಆಡಲಿದ್ದಾರೆ
  • ಇದಲ್ಲದೆ ಟೀಮ್ ಇಂಡಿಯಾದ ಮುಖ್ಯ ಕೋಚ್ ರವಿಶಾಸ್ತ್ರಿ ಅವರ ಅಧಿಕಾರಾವಧಿ ಇಂದಿಗೆ ಕೊನೆಗೊಳ್ಳಲಿದೆ
Gautam Gambhir: ರೋಹಿತ್ ಶರ್ಮಾ-ರಾಹುಲ್ ದ್ರಾವಿಡ್ ಭಾರತಕ್ಕೆ ಐಸಿಸಿ ಪ್ರಶಸ್ತಿ ಗೆಲ್ಲುತ್ತಾರೆ- ಗೌತಮ್ ಗಂಭೀರ್ title=
Rohit Sharma and Rahul Dravid will win ICC trophy for India: Gautam Gambhir

ನವದೆಹಲಿ: 2021ರ ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ ಇಂದು ಕೊನೆಯ ಪಂದ್ಯವಾಗಿದೆ. ಇದರ ನಂತರ ಟೀಂ ಇಂಡಿಯಾ ಹೊಸ ನಾಯಕ ಮತ್ತು ಹೊಸ ಕೋಚ್‌ನೊಂದಿಗೆ ಈ ಸ್ವರೂಪದಲ್ಲಿ ಕಾಣಿಸಿಕೊಳ್ಳಲಿದೆ. ಭಾರತದ ವರ್ಚಸ್ವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಇಂದು ನಾಯಕನಾಗಿ ಕೊನೆಯ ಪಂದ್ಯವನ್ನು ಆಡಲಿದ್ದು, ಟೀಮ್ ಇಂಡಿಯಾದಲ್ಲಿ ತಂಡದ ಮುಖ್ಯ ಕೋಚ್ ರವಿಶಾಸ್ತ್ರಿ ಅವರ ಅಧಿಕಾರಾವಧಿ ಇಂದಿಗೆ ಕೊನೆಗೊಳ್ಳಲಿದೆ. ಕಳೆದ 8 ವರ್ಷಗಳಿಂದ ಯಾವುದೇ ಐಸಿಸಿ ಪ್ರಶಸ್ತಿ ಗೆಲ್ಲಲು ಭಾರತಕ್ಕೆ ಸಾಧ್ಯವಾಗಿಲ್ಲ. ಇದೀಗ ಟೀಂ ಇಂಡಿಯಾದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್, ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್ ಜೋಡಿ ಭಾರತಕ್ಕೆ ಐಸಿಸಿ ಪ್ರಶಸ್ತಿಯನ್ನು ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಲವು ಕ್ರಿಕೆಟಿಗರು ಮತ್ತು ತಜ್ಞರಂತೆ ಗೌತಮ್ ಗಂಭೀರ್ (Gautam Gambhir) ಕೂಡ ರೋಹಿತ್ ಶರ್ಮಾ (Rohit Sharma) ಟೀಮ್ ಇಂಡಿಯಾದ ಹೊಸ ನಾಯಕರಾಗುತ್ತಾರೆ ಎಂದು ನಿರೀಕ್ಷಿಸಿದ್ದಾರೆ. ಈ ಅನುಭವಿ ಮುಂಬೈ ಬ್ಯಾಟ್ಸ್‌ಮನ್ ತಂಡದಲ್ಲಿ ಬಹಳ ಸಮಯದಿಂದ ಉಪನಾಯಕನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಅವರು ಐಪಿಎಲ್‌ನ ಅತ್ಯಂತ ಯಶಸ್ವಿ ನಾಯಕರಾಗಿದ್ದಾರೆ ಮತ್ತು ವಿರಾಟ್ ಟಿ 20 ಸ್ವರೂಪದಿಂದ ಕೆಳಗಿಳಿಯುವ ಘೋಷಣೆಯ ನಂತರ, ಅವರು ಟೀಂ ಇಂಡಿಯಾದ (Team India) ನಾಯಕರಗಲಿದ್ದಾರೆ ಎಂಬ ಊಹಾಪೋಹಗಳು ಹೆಚ್ಚಾಗಿ ಕೇಳಿಬರುತ್ತಿವೆ. ಏತನ್ಮಧ್ಯೆ, ಬಿಸಿಸಿಐ ಮುಖ್ಯ ಕೋಚ್ ಆಗಿ ಆಯ್ಕೆಯನ್ನು ಅನ್ವೇಷಿಸಿದೆ. ಭಾರತದ ಮಾಜಿ ಸ್ಟಾರ್ ಬ್ಯಾಟ್ಸ್‌ಮನ್ ಮತ್ತು ಮಾಜಿ ನಾಯಕ ರಾಹುಲ್ ದ್ರಾವಿಡ್ ಭಾರತ ತಂಡದ ನೂತನ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ. 

ಇದನ್ನೂ ಓದಿ- T20 World Cup 2021: ಇಂದು ಕೊನೆಗೊಳ್ಳಲಿದೆ ವಿರಾಟ್ ಕೊಹ್ಲಿಯ ಟಿ20 ನಾಯಕತ್ವ, ಯಾರಾಗಲಿದ್ದಾರೆ ಮುಂದಿನ ಕ್ಯಾಪ್ಟನ್!

ಕ್ರೀಡಾ ಚಾನೆಲ್ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನಡೆದ ಚರ್ಚೆಯಲ್ಲಿ ಗೌತಮ್ ಗಂಭೀರ್ (Gautam Gambhir), 'ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್ (Rahul Dravid) ಜೋಡಿಯು ಈ ಮಾದರಿಯಲ್ಲಿ ಭಾರತೀಯ ಕ್ರಿಕೆಟ್ ಅನ್ನು ಮುನ್ನಡೆಸುತ್ತದೆ ಮತ್ತು ಇಂಗ್ಲೆಂಡ್‌ನ ಪ್ರವೃತ್ತಿಯನ್ನು ಅನುಸರಿಸಿ ಶೀಘ್ರದಲ್ಲೇ ಭಾರತಕ್ಕೆ ಐಸಿಸಿ ಪ್ರಶಸ್ತಿಯನ್ನು ನೀಡಲಿದೆ ಎಂದು ನಾನು ಭಾವಿಸುತ್ತೇನೆ' ಎಂದು ಹೇಳಿದರು.

ರಾಹುಲ್ ದ್ರಾವಿಡ್ (Rahul Dravid) ಇತ್ತೀಚೆಗೆ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ. ನವೆಂಬರ್ 17 ರಿಂದ ಟಿ 20 ವಿಶ್ವಕಪ್ ಮುಗಿದ ತಕ್ಷಣ ಭಾರತವು ನ್ಯೂಜಿಲೆಂಡ್ ವಿರುದ್ಧ ಸ್ವದೇಶಿ ಸರಣಿಯನ್ನು ಆಡಬೇಕಾಗಿದೆ. ಇಲ್ಲಿ ಉಭಯ ತಂಡಗಳು 3 ಪಂದ್ಯಗಳ ಟಿ20ಐ ಸರಣಿ ಮತ್ತು 2 ಟೆಸ್ಟ್‌ಗಳ ಸರಣಿಯನ್ನು ಆಡಲಿವೆ. ಪ್ರಸಕ್ತ ಟಿ20 ವಿಶ್ವಕಪ್‌ನಿಂದ ಭಾರತ ತಂಡ ಈಗಾಗಲೇ ಹೊರಬಿದ್ದಿದೆ. ಸೋಮವಾರ ನಡೆಯಲಿರುವ ಈ ಟೂರ್ನಿಯಲ್ಲಿ ನಮೀಬಿಯಾ ವಿರುದ್ಧ ಕೊನೆಯ ಲೀಗ್ ಪಂದ್ಯ ಆಡಲಿದ್ದು, ಇಲ್ಲಿಂದ ಬರಿಗೈಯಲ್ಲಿ ಭಾರತಕ್ಕೆ ಮರಳಬೇಕಿದೆ.

ಇದನ್ನೂ ಓದಿ- ಧೋನಿಯ ನಂತರ CSK ನಾಯಕತ್ವದ ರೇಸ್ ನಲ್ಲಿದ್ದಾರೆ ಈ ಮೂವರು ಆಟಗಾರರು

ವಿರಾಟ್ ಕೊಹ್ಲಿ (Virat Kohli) ಟಿ20 ಮಾದರಿಯ ನಾಯಕತ್ವದಿಂದ ಕೆಳಗಿಳಿಯುವುದಾಗಿ ಘೋಷಿಸಿದ ನಂತರ ರೋಹಿತ್ ಶರ್ಮಾ ಅವರನ್ನು ಹೊಸ ನಾಯಕನಾಗಿ  ನೋಡಲಾಗುತ್ತಿದೆ ಎಂದು ಹಲವು ಕ್ರಿಕೆಟ್ ಪಂಡಿತರು ಭವಿಷ್ಯ ನುಡಿದಿದ್ದಾರೆ. ಆದರೆ ಸದ್ಯಕ್ಕೆ ಬಿಸಿಸಿಐ ನೂತನ ಟಿ20 ನಾಯಕನ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಆಯ್ಕೆ ಸಮಿತಿಯು ನ್ಯೂಜಿಲೆಂಡ್ ವಿರುದ್ಧದ ತವರಿನಲ್ಲಿ ನಡೆಯಲಿರುವ ಸರಣಿಗೆ ತಂಡವನ್ನು ಶೀಘ್ರದಲ್ಲೇ ಪ್ರಕಟಿಸಲಿದೆ. ಈ ವೇಳೆ ಟೀಂ ಇಂಡಿಯಾದ ನೂತನ ಟಿ20 ನಾಯಕನ ಘೋಷಣೆಯಾಗಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News