Indian Premier League 2024: 2024ನೇ ಸಾಲಿನ ಐಪಿಎಲ್ ಟೂರ್ನಿಯ ಎಲಿಮಿನೇಟರ್‌ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಕ್ವಾಲಿಫೈಯರ್‌ಗೆ ಅರ್ಹತೆ ಪಡೆದಿರುವ ರಾಜಸ್ಥಾನ್‌ ರಾಯಲ್ಸ್‌ ಶುಕ್ರವಾರ ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ ಮುಖಾಮುಖಿಯಾಗುತ್ತಿದೆ.


COMMERCIAL BREAK
SCROLL TO CONTINUE READING

RCB ವಿರುದ್ಧ ಗೆದ್ದ ಸಂಭ್ರಮದ ಮಧ್ಯೆಯೇ ರಾಜಸ್ಥಾನ್‌ ಕ್ಯಾಪ್ಟನ್‌ ಸಂಜು ಸ್ಯಾಮ್ಸನ್‌ ಶಾಕಿಂಗ್‌ ವಿಚಾರವೊಂದನ್ನು ಹೇಳಿದ್ದಾರೆ. ಚೆನ್ನೈನ ಎಂ.ಚಿದಂಬರಂ ಕ್ರೀಡಾಂಗಣದಲ್ಲಿ ಹೈದರಾಬಾದ್‌ ವಿರುದ್ಧ ನಡೆಯಲಿರುವ ಮಹತ್ವದ ಪಂದ್ಯಕ್ಕೆ ರಾಜಸ್ಥಾನ್‌ ತಂಡದ ಯಾರೊಬ್ಬ ಆಟಗಾರರು ಆರಾಮವಾಗಿಲ್ಲವೆಂದು ಹೇಳಿದ್ದಾರೆ. 


ಇದನ್ನೂ ಓದಿRemal Cyclone : 'ಮೇ 26ರ ವೇಳೆಗೆ ಪಶ್ಚಿಮ ಬಂಗಾಳ, ಬಾಂಗ್ಲಾದೇಶ ಕರಾವಳಿಯ ಮೇಲೆ ತೀವ್ರ ಪರಿಣಾಮ ಸಾಧ್ಯತೆ


ನಿಜ ಹೇಳಬೇಕೆಂದರೆ ನಾನು ಸಹ ಮುಂದಿನ ಪಂದ್ಯಕ್ಕೆ ಶೇ.100ರಷ್ಟು ಫಿಟ್ ಆಗಿಲ್ಲ. ಮಹತ್ವದ ಪಂದ್ಯಕ್ಕೆ ನಾವು ಸಿದ್ಧವಾಗಬೇಕಿದೆ. ಆದರೆ ನಮ್ಮ ಇಡೀ ಡ್ರೆಸ್ಸಿಂಗ್ ರೂಂನಲ್ಲಿ ಯಾರಿಗೂ ಆರಾಮವಿಲ್ಲ. ಹಲವರು ಕೆಮ್ಮುತ್ತಿದ್ದಾರೆ, ಕೆಲವರಿಗೆ ಆರೋಗ್ಯ ಸರಿಯಿಲ್ಲವೆಂದು ಹೇಳಿದ್ದಾರೆ. 


ಪಂದ್ಯದ ಬಳಿಕ ಮಾತನಾಡಿದ ರವಿಚಂದ್ರನ್ ಅಶ್ವಿನ್, ʼಕೆಲವು ದಿನಗಳಿಂದ ನನಗೆ ಕೆಳ ಹೊಟ್ಟೆನೋವು ಸಮಸ್ಯೆ ಕಾಡುತ್ತಿತ್ತು. ಇದರ ನಡುವೆಯೂ ಈ ವಯಸ್ಸಿನಲ್ಲಿ ಟಿ-20 ಕ್ರಿಕೆಟ್‌ಗೆ ಒಗ್ಗಿಕೊಳ್ಳುವುದು ಅಷ್ಟು ಸುಲಭವಲ್ಲ ಅಂತಾ ಹೇಳಿದ್ದಾರೆ.   


ಇದನ್ನೂ ಓದಿ: Tamilnadu : ಪಿಕ್ಸೆಲ್ ಸ್ಮಾರ್ಟ್‌ಫೋನ್‌ಗಳ ಉತ್ಪಾದನೆಗೆ ಗೂಗಲ್ ಫಾಕ್ಸ್‌ಕಾನ್‌ನೊಂದಿಗೆ ಪಾಲುದಾರಿಕೆ : ಮುಖ್ಯಮಂತ್ರಿ ಎಂಕೆ ಸ್ಟಾಲಿನ್


ಆರ್‌ಸಿಬಿಯನ್ನು ಸೋಲಿಸಿ ಸಂಭ್ರಮದಲ್ಲಿರುವ ರಾಜಸ್ಥಾನ್‌ ತಂಡಕ್ಕೆ ಇದೀಗ ಫೈನಲ್‌ ತಲುಪಲು ಒಂದೇ ಹಂತ ಬಾಕಿ ಇದೆ. ನಾಳೆ ನಡೆಯುವ ಪಂದ್ಯದಲ್ಲಿ ಹೈದರಾಬಾದ್‌ ತಂಡವನ್ನು ಸೋಲಿಸಲೇಬೇಕಾದ ಕಠಿಣ ಸವಾಲು ಎದುರಾಗಿದೆ. ಆದರೆ ತಂಡದ ಸದಸ್ಯರಿಗೆ ಅನಾರೋಗ್ಯ ಕಾಡುತ್ತಿದ್ದು, ಚಿಂತೆಗೆ ಕಾರಣವಾಗಿದೆ. ಹೀಗಾಗಿ ಮಹತ್ವದ ಪಂದ್ಯದಲ್ಲಿ ರಾಜಸ್ಥಾನ್‌ ತಂಡವು ಯಾವ ರೀತಿಯ ಪ್ರದರ್ಶನ ನೀಡಲಿದೆ ಅನ್ನೋದರ ಬಗ್ಗೆ ತೀವ್ರ ಕುತೂಹಲ ಮೂಡಿಸಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.