ಒಂದೇ ಓವರ್ ನಲ್ಲಿ 6,6,6,6,6,6,6,6,6 ಸಿಡಿಸಿದ ಭಾರತೀಯ ಬ್ಯಾಟ್ಸ್‌ಮನ್... ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ಅಸಾಧ್ಯ ದಾಖಲೆ ನಿರ್ಮಾಣ!

Unique Cricket Records: ಒಂದೇ ಓವರ್‌ನಲ್ಲಿ ಸತತ 7 ಸಿಕ್ಸರ್‌ಗಳನ್ನು ಬಾರಿಸಿ ವಿಶಿಷ್ಟ ವಿಶ್ವ ದಾಖಲೆಯನ್ನು ಭಾರತೀಯ ಬ್ಯಾಟ್ಸ್‌ಮನ್  ಸೃಷ್ಟಿಸಿದ್ದಾರೆ. 

Written by - Chetana Devarmani | Last Updated : Feb 7, 2025, 08:22 AM IST
  • ಕ್ರಿಕೆಟ್ ಇತಿಹಾಸದಲ್ಲಿ ಅಸಾಧ್ಯ ದಾಖಲೆ ನಿರ್ಮಾಣ!
  • ಒಂದೇ ಓವರ್‌ನಲ್ಲಿ 7 ಸಿಕ್ಸರ್‌ಗಳನ್ನು ಸಿಡಿಸಿದ ಬ್ಯಾಟ್ಸಮನ್‌
  • ಒಂದೇ ಓವರ್‌ನಲ್ಲಿ 7 ಸಿಕ್ಸರ್‌ ಬಾರಿಸಿದ ಕ್ರಿಕೆಟರ್ ಯಾರು?
ಒಂದೇ ಓವರ್ ನಲ್ಲಿ 6,6,6,6,6,6,6,6,6 ಸಿಡಿಸಿದ ಭಾರತೀಯ ಬ್ಯಾಟ್ಸ್‌ಮನ್... ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ಅಸಾಧ್ಯ ದಾಖಲೆ ನಿರ್ಮಾಣ!
Cricket Records

Cricket Records: ಯಾವುದೇ ಮಾದರಿಯ ಕ್ರಿಕೆಟ್‌ನ ನಿಯಮಗಳ ಪ್ರಕಾರ, ಒಂದು ಓವರ್‌ನಲ್ಲಿ 6 ಎಸೆತಗಳಿರುತ್ತವೆ ಮತ್ತು ಪ್ರತಿ ಚೆಂಡಿನಲ್ಲಿ ಕೇವಲ ಒಂದು ಸಿಕ್ಸರ್ ಮಾತ್ರ ಹೊಡೆಯಬಹುದು. ಆದ್ದರಿಂದ ಒಂದು ಓವರ್‌ನಲ್ಲಿ ಗರಿಷ್ಠ 6 ಸಿಕ್ಸರ್‌ಗಳನ್ನು ಹೊಡೆಯಬಹುದು. ಆದರೆ, ಭಾರತದ ಒಬ್ಬ ಬ್ಯಾಟ್ಸ್‌ಮನ್ ಒಂದೇ ಓವರ್‌ನಲ್ಲಿ ಸತತ 7 ಸಿಕ್ಸರ್‌ಗಳನ್ನು ಬಾರಿಸಿ ವಿಶಿಷ್ಟ ವಿಶ್ವ ದಾಖಲೆಯನ್ನು ಸೃಷ್ಟಿಸಿದ್ದಾರೆ. ವಿಶ್ವದ ಯಾವುದೇ ಬ್ಯಾಟ್ಸ್‌ಮನ್ ಒಂದೇ ಓವರ್‌ನಲ್ಲಿ 7 ಸಿಕ್ಸರ್‌ಗಳನ್ನು ಬಾರಿಸುವುದು ಅಸಾಧ್ಯ. ಆದರೆ, ಭಾರತೀಯ ಬ್ಯಾಟ್ಸ್‌ಮನ್‌ ಒಬ್ಬರು ಈ ಅಸಾಧ್ಯವಾದ ಸಾಧನೆಯನ್ನೇ ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಿದರು.

Add Zee News as a Preferred Source

ನವೆಂಬರ್ 28, 2022 ರಂದು ಭಾರತದ ಡ್ಯಾಶಿಂಗ್ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ಅವರು ಕ್ರಿಕೆಟ್ ಜಗತ್ತನ್ನು ಅಚ್ಚರಿಗೊಳಿಸುವ ಒಂದು ಸಾಧನೆ ಮಾಡಿದರು. ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಬ್ಯಾಟ್ಸ್‌ಮನ್ ಒಂದೇ ಓವರ್‌ನಲ್ಲಿ ಸತತ 7 ಸಿಕ್ಸರ್‌ಗಳನ್ನು ಬಾರಿಸಿದರು. ದೇಶೀಯ ಕ್ರಿಕೆಟ್‌ನಲ್ಲಿ ಮಹಾರಾಷ್ಟ್ರ ಪರ ಆಡುವಾಗ, ವಿಜಯ್ ಹಜಾರೆ ಟ್ರೋಫಿ ಪಂದ್ಯಾವಳಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ಈ ವಿಶಿಷ್ಟ ವಿಶ್ವ ದಾಖಲೆಯನ್ನು ಬರೆದರು. ವಿಜಯ್ ಹಜಾರೆ ಟ್ರೋಫಿಯ ಕ್ವಾರ್ಟರ್-ಫೈನಲ್ ಪಂದ್ಯವು ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶ ನಡುವೆ 28 ನವೆಂಬರ್ 2022 ರಂದು ನಡೆಯಿತು.

ಇದನ್ನೂ ಓದಿ: ಗಿಲ್, ಅಯ್ಯರ್, ಅಕ್ಷರ್ ಬೊಂಬಾಟ್ ಆಟಕ್ಕೆ ಮಣಿದ ಇಂಗ್ಲೆಂಡ್: ಟೀಂ ಇಂಡಿಯಾಗೆ ಗೆಲುವಿನ ಶುಭಾರಂಭ

ಮಹಾರಾಷ್ಟ್ರ ಪರ ಆಡುವಾಗ ರುತುರಾಜ್ ಗಾಯಕ್ವಾಡ್ ಒಂದೇ ಓವರ್‌ನಲ್ಲಿ ಸತತ 7 ಸಿಕ್ಸರ್‌ಗಳನ್ನು ಬಾರಿಸಿದರು. ಈ ಓವರ್‌ನಲ್ಲಿ ರುತುರಾಜ್ ಗಾಯಕ್ವಾಡ್ ಸತತ 7 ಸಿಕ್ಸರ್‌ಗಳನ್ನು ಬಾರಿಸಲು ಸಾಧ್ಯವಾಗಲು ಒಂದು ಮಹತ್ವದ ಕಾರಣವಿದೆ. ರುತುರಾಜ್ ಗಾಯಕ್ವಾಡ್ ಉತ್ತರ ಪ್ರದೇಶದ ಎಡಗೈ ಸ್ಪಿನ್ನರ್ ಶಿವ ಸಿಂಗ್ ಅವರ ಎಲ್ಲ ಬಾಲ್‌ಗಳನ್ನೂ ಸಿಕ್ಸರ್‌ ಬಾರಿಸಿದರು. ಈ ಓವರ್‌ನಲ್ಲಿ ಶಿವ ಸಿಂಗ್ ಒಟ್ಟು 7 ಎಸೆತಗಳನ್ನು ಎಸೆದರು. ಅದರಲ್ಲಿ ಒಂದು ನೋ ಬಾಲ್ ಕೂಡ ಸೇರಿತ್ತು. ಈ ಎಲ್ಲಾ 7 ಎಸೆತಗಳಲ್ಲಿ ರುತುರಾಜ್ ಗಾಯಕ್ವಾಡ್ ಸತತ 7 ಸಿಕ್ಸರ್‌ಗಳನ್ನು ಬಾರಿಸಿದರು. ಶಿವ ಸಿಂಗ್ ಅವರ ಈ ಓವರ್‌ನಲ್ಲಿ ರುತುರಾಜ್ ಗಾಯಕ್ವಾಡ್ ಒಟ್ಟು 43 ರನ್ ನೀಡಿದರು.

ಉತ್ತರ ಪ್ರದೇಶ ವಿರುದ್ಧದ ಈ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ 159 ಎಸೆತಗಳಲ್ಲಿ 220 ರನ್ ಗಳಿಸಿ ಅಜೇಯರಾಗುಳಿದರು. ಈ ಅವಧಿಯಲ್ಲಿ ರುತುರಾಜ್ ಗಾಯಕ್ವಾಡ್ ಅವರ ಬ್ಯಾಟ್‌ನಿಂದ 10 ಬೌಂಡರಿಗಳು ಮತ್ತು 16 ಸಿಕ್ಸರ್‌ಗಳು ಬಂದವು. ರುತುರಾಜ್ ಗಾಯಕ್ವಾಡ್ ಭಾರತ ಪರ 6 ಏಕದಿನ ಮತ್ತು 23 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ರುತುರಾಜ್ ಗಾಯಕ್ವಾಡ್ ಏಕದಿನ ಪಂದ್ಯಗಳಲ್ಲಿ 115 ರನ್ ಮತ್ತು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 633 ರನ್ ಗಳಿಸಿದ್ದಾರೆ. ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿದ್ದಾರೆ. ರುತುರಾಜ್ ಗಾಯಕ್ವಾಡ್ 66 ಐಪಿಎಲ್ ಪಂದ್ಯಗಳಲ್ಲಿ 2 ಶತಕ ಮತ್ತು 18 ಅರ್ಧಶತಕಗಳು ಸೇರಿದಂತೆ 2380 ರನ್ ಗಳಿಸಿದ್ದಾರೆ.

ಇದನ್ನೂ ಓದಿ: Champions Trophy 2025 India Squad: ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾದ ಅಂತಿಮ ತಂಡ ಇಂತಿದೆ: ಯಾರು ಇನ್?‌ ಯಾರು ಔಟ್?‌

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

About the Author

Chetana Devarmani

" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ...Read More

Trending News