"ಪಹಲ್ಗಾಮ್‌ ದಾಳಿಗೆ ಭಾರತೀಯ ಸೇನೆಯೇ ಕಾರಣ; ಪಾಕ್‌ ಅನ್ನೋದಕ್ಕೆ ಏನಿದೆ ಸಾಕ್ಷಿ?"- ಮಾಜಿ ಕ್ರಿಕೆಟಿಗನ ಶಾಕಿಂಗ್‌ ಹೇಳಿಕೆ

Shahid Afridi: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತೀಯ ಸೇನೆಯೇ ಕಾರಣ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ ಈ ದಾಳಿ ಮಾಡಿದ್ದು ಪಾಕಿಸ್ತಾನವೇ ಅನ್ನುವುದಕ್ಕೆ ಪುರಾವೆ ಏನಿದೆ ಎಂದು ಪ್ರಶ್ನಿಸಿದ್ದಾರೆ.  

Written by - Bhavishya Shetty | Last Updated : Apr 27, 2025, 04:30 PM IST
    • ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ
    • ವಿವಾದಾತ್ಮಕ ಹೇಳಿಕೆಯೊಂದಿಗೆ ಬೆಂಕಿಗೆ ತುಪ್ಪ ಸುರಿಯುವ ಕೆಲಸ
    • ಭಯೋತ್ಪಾದಕ ದಾಳಿಗೆ ಭಾರತೀಯ ಸೇನೆಯೇ ಕಾರಣ ಎಂದ ಶಾಹಿದ್ ಅಫ್ರಿದಿ
"ಪಹಲ್ಗಾಮ್‌ ದಾಳಿಗೆ ಭಾರತೀಯ ಸೇನೆಯೇ ಕಾರಣ; ಪಾಕ್‌ ಅನ್ನೋದಕ್ಕೆ ಏನಿದೆ ಸಾಕ್ಷಿ?"- ಮಾಜಿ ಕ್ರಿಕೆಟಿಗನ ಶಾಕಿಂಗ್‌ ಹೇಳಿಕೆ
Shahid Afridi

Shahid Afridi statement on Indian Army: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು 26 ಅಮಾಯಕ ಜನರನ್ನು ಹತ್ಯೆ ಮಾಡಿದ್ದರು. ಈ ಭಯೋತ್ಪಾದಕ ದಾಳಿಯ ನಂತರ ಭಾರತದಾದ್ಯಂತ  ಸೇಡಿನ ವಾತಾವರಣ ನಿರ್ಮಾಣವಾಗಿದೆ. ಈ ಮಧ್ಯೆ, ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ತಮ್ಮ ವಿವಾದಾತ್ಮಕ ಹೇಳಿಕೆಯೊಂದಿಗೆ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ.

Add Zee News as a Preferred Source

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತೀಯ ಸೇನೆಯೇ ಕಾರಣ ಎಂದು ಶಾಹಿದ್ ಅಫ್ರಿದಿ ಆರೋಪಿಸಿದ್ದಲ್ಲದೆ, ಸೇನೆಯನ್ನು 'ನಿಷ್ಪ್ರಯೋಜಕ' ಎಂದು ಕರೆದಿದ್ದಾರೆ.

ಇದನ್ನೂ ಓದಿ: ದುಬಾರಿ ಟ್ರೀಟ್‌ಮೆಂಟ್‌ ಬೇಡ.. ಈ ಎಲೆಗೆ ನಿಂಬೆರಸ ಹಚ್ಚಿ ಉಜ್ಜಿದ್ರೆ ಸೆಕೆಂಡಿನಲ್ಲಿ ಮಾಯವಾಗುವುದು ಹಲ್ಲಿಗಂಟಿದ ಹಳದಿ ಕಲೆ!  

ಶಾಹಿದ್ ಅಫ್ರಿದಿ ಸಮ ಟಿವಿಯಲ್ಲಿ ಮಾತನಾಡಿದ್ದ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದಾರೆ. "ಅಲ್ಲಿ (ಜಮ್ಮು ಮತ್ತು ಕಾಶ್ಮೀರ) ಪಟಾಕಿ ಸಿಡಿದರೆ, ಅದಕ್ಕೂ ಪಾಕಿಸ್ತಾನವೇ ಕಾರಣನಾ? ಕಾಶ್ಮೀರದಲ್ಲಿ 8,00,000 ಸೈನಿಕರಿದ್ದರೂ ಈ ದಾಳಿ ಸಂಭವಿಸಿದೆ. ಇದರರ್ಥ ನೀವು ನಿಷ್ಪ್ರಯೋಜಕರು. ನೀವು ಜನರಿಗೆ ಭದ್ರತೆಯನ್ನು ಒದಗಿಸಲು ಸಾಧ್ಯವಾಗಲಿಲ್ಲ" ಎಂದು ಹೇಳಿಕೆ ನೀಡಿದ್ದಾರೆ.

ಇದಲ್ಲದೆ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ವರದಿಗಾಗಿ ಶಾಹಿದ್ ಅಫ್ರಿದಿ ಭಾರತೀಯ ಮಾಧ್ಯಮಗಳನ್ನು ಟೀಕಿಸಿದ್ದಾರೆ. "ದಾಳಿಯ ಒಂದು ಗಂಟೆಯೊಳಗೆ ಅವರ ಮಾಧ್ಯಮ ಬಾಲಿವುಡ್ ಆಗಿ ಬದಲಾಯಿತು ಎಂಬುದು ಆಶ್ಚರ್ಯಕರವಾಗಿದೆ. ಎಲ್ಲವನ್ನೂ ಬಾಲಿವುಡ್ ಮಾಡಬೇಡಿ. ನನಗೆ ಆಘಾತವಾಯಿತು, ಆದರೆ ಅವನು ಮಾತನಾಡುತ್ತಿದ್ದ ರೀತಿ ನನಗೆ ಇಷ್ಟವಾಗುತ್ತಿತ್ತು. ನಾನು ಹೇಳುತ್ತಿದ್ದೆ, ಅವರ ಆಲೋಚನೆಯನ್ನು ನೋಡಿ, ತಮ್ಮನ್ನು ತಾವು ವಿದ್ಯಾವಂತ ಜನರು ಎಂದು ಕರೆದುಕೊಳ್ಳುತ್ತಾರೆ"

ಪಾಕಿಸ್ತಾನದ ವಿರುದ್ಧ ಹೆಸರಿಸದೆ ಆರೋಪ ಮಾಡಿದ್ದ ಭಾರತದ ಮಾಜಿ ಕ್ರಿಕೆಟಿಗನ ವಿರುದ್ಧ ಶಾಹಿದ್ ಅಫ್ರಿದಿ ಕಿಡಿಕಾರಿದ್ದಾರೆ. "ಭಾರತಕ್ಕಾಗಿ ಇಷ್ಟೊಂದು ಕ್ರಿಕೆಟ್ ಆಡಿದ ಇಬ್ಬರು ಕ್ರಿಕೆಟಿಗರು... ಮಾಜಿ ರಾಯಭಾರಿ, ಮಾಜಿ ಉನ್ನತ ಕ್ರಿಕೆಟಿಗ... ಅವರು ನೇರವಾಗಿ ಪಾಕಿಸ್ತಾನವನ್ನು ದೂಷಿಸುತ್ತಾರೆ. ಸಹೋದರ, ಪಾಕಿಸ್ತಾನ ಏಕೆ? ಗೆಳೆಯ, ನನಗೆ ಸ್ವಲ್ಪ ಪುರಾವೆ ತೋರಿಸಿ" ಎಂದು ಉದ್ಧಟತನ ಮೆರೆದಿದ್ದಾರೆ.

ಇನ್ನು ಪಾಕಿಸ್ತಾನದ ಜೈಲಿನಲ್ಲಿರುವ ಕುಲಭೂಷಣ್ ಜಾಧವ್ ಮತ್ತು ಪಾಕಿಸ್ತಾನ ಸೇನೆಯಿಂದ ಸೆರೆಹಿಡಿಯಲ್ಪಟ್ಟ ನಂತರ ಭಾರತಕ್ಕೆ ಹಿಂತಿರುಗಿಸಲಾದ ಅಭಿನಂದನ್ ವರ್ತಮಾನ್ ಅವರ ಉದಾಹರಣೆಯನ್ನು ತೆಗೆದುಕೊಂಡ ಶಾಹಿದ್ ಅಫ್ರಿದಿ, "ನಾವು ನಿಮಗೆ ಪುರಾವೆ ನೀಡಿದ್ದೇವೆ. ನಮ್ಮಲ್ಲಿ ಇನ್ನೂ ಒಂದು ಇದೆ. ಚಹಾ ಕೊಟ್ಟ ನಂತರ ಒಂದನ್ನು ಹಿಂತಿರುಗಿಸಿದೆವು. ನಮಗೆ ಪುರಾವೆ ತೋರಿಸಿ, ಕಾರಣವಿಲ್ಲದೆ ನಮ್ಮನ್ನು ದೂಷಿಸಬೇಡಿ" ಎಂದಿದ್ದಾರೆ.

ಇದನ್ನೂ ಓದಿ:  ಇಂದಿರಾಗಾಂಧಿ ವಿಶ್ವವಿದ್ಯಾಲಯದಿಂದ ಪದವಿ ಪಡೆಯುತ್ತಿದ್ದ ವಿದ್ಯಾರ್ಥಿಯೇ ಪಹಲ್ಗಾಮ್ ದಾಳಿಯ ಉಗ್ರ..!

ಬಲೂಚಿಸ್ತಾನದ ಅಶಾಂತಿಗೆ ಭಾರತವೇ ಕಾರಣ

ಬಲೂಚಿಸ್ತಾನದಲ್ಲಿನ ಅಶಾಂತಿಗೆ ಭಾರತವೇ ಕಾರಣ ಎಂದು ಶಾಹಿದ್ ಆಫ್ರಿದಿ ದೂಷಿಸಿದರು. "ನಮ್ಮ ದೇಶದಲ್ಲಿ ಏನಾಗುತ್ತಿದೆ?' ಬಲೂಚಿಸ್ತಾನದಲ್ಲಿ ಏನಾಗುತ್ತಿದೆ? ಇದರ ಹಿಂದೆ ಯಾರಿದ್ದಾರೆಂದು ನಮಗೆಲ್ಲರಿಗೂ ತಿಳಿದಿದೆ. ನಾವು ಎಂದಿಗೂ ಯಾವುದೇ ಆರೋಪಗಳನ್ನು ಮಾಡಿಲ್ಲ. ನಾವು ಭಾರತ ಮತ್ತು ಜಗತ್ತಿಗೆ ಪುರಾವೆಗಳನ್ನು ನೀಡಿದ್ದೇವೆ" ಎಂದು ದೂರಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News