ಮುಂಬೈ ಇಂಡಿಯನ್ಸ್’ಗೆ ಆಘಾತ… IPLಗೆ ಸೂರ್ಯಕುಮಾರ್ ಅಲಭ್ಯ! ಮಿಸ್ಟರ್ 360 ಹೊರಗುಳಿಯಲು ಕಾರಣ ಇದುವೇ!

Suryakumar Yadav, IPL 2024: ಮುಂಬೈ ತನ್ನ ಮೊದಲ ಪಂದ್ಯವನ್ನು ಗುಜರಾತ್ ಟೈಟಾನ್ಸ್ ವಿರುದ್ಧ ಮಾರ್ಚ್ 24 ರಂದು ಆಡಲಿದ್ದು, ಇತ್ತೀಚೆಗಷ್ಟೇ ತಂಡದ ಆಡಳಿತ ಮಂಡಳಿ ಹಾರ್ದಿಕ್ ಪಾಂಡ್ಯ ಅವರಿಗೆ ತಂಡದ ನಾಯಕತ್ವವನ್ನು ಹಸ್ತಾಂತರಿಸಿತ್ತು.

Written by - Bhavishya Shetty | Last Updated : Mar 12, 2024, 04:48 PM IST
    • ಐಪಿಎಲ್ 2024ರ ಆರಂಭಕ್ಕೆ ಕೇವಲ 10 ದಿನವಷ್ಟೇ ಬಾಕಿ ಉಳಿದಿದೆ
    • ಸೂರ್ಯಕುಮಾರ್ ಯಾದವ್ ಮೊದಲ ಎರಡು ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆ ಇದೆ
    • ಮುಂಬೈ ಇಂಡಿಯನ್ಸ್ ತಂಡಕ್ಕೆ ಆರಂಭಿಕ ಪಂದ್ಯಗಳಲ್ಲಿ ಹಿನ್ನಡೆಯಾಗಬಹುದು
ಮುಂಬೈ ಇಂಡಿಯನ್ಸ್’ಗೆ ಆಘಾತ… IPLಗೆ ಸೂರ್ಯಕುಮಾರ್ ಅಲಭ್ಯ! ಮಿಸ್ಟರ್ 360 ಹೊರಗುಳಿಯಲು ಕಾರಣ ಇದುವೇ! title=
Suryakumar Yadav

Suryakumar Yadav, IPL 2024: ಐಪಿಎಲ್ 2024ರ ಆರಂಭಕ್ಕೆ ಕೇವಲ 10 ದಿನವಷ್ಟೇ ಬಾಕಿ ಉಳಿದಿದೆ. 17ನೇ ಆವೃತ್ತಿಯ ಟೂರ್ನಿ ಮಾರ್ಚ್ 22ರಿಂದ ಆರಂಭವಾಗಲಿದ್ದು, ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡಕ್ಕೆ ಸಂಕಷ್ಟ ಎದುರಾಗಿದೆ. ಸ್ಟಾರ್ ಬ್ಯಾಟ್ಸ್‌’ಮನ್ ಸೂರ್ಯಕುಮಾರ್ ಯಾದವ್ ಮೊದಲ ಎರಡು ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ವರದಿಗಳಲ್ಲಿ ಹೇಳಲಾಗುತ್ತಿದೆ.

ಮುಂಬೈ ತನ್ನ ಮೊದಲ ಪಂದ್ಯವನ್ನು ಗುಜರಾತ್ ಟೈಟಾನ್ಸ್ ವಿರುದ್ಧ ಮಾರ್ಚ್ 24 ರಂದು ಆಡಲಿದ್ದು, ಇತ್ತೀಚೆಗಷ್ಟೇ ತಂಡದ ಆಡಳಿತ ಮಂಡಳಿ ಹಾರ್ದಿಕ್ ಪಾಂಡ್ಯ ಅವರಿಗೆ ತಂಡದ ನಾಯಕತ್ವವನ್ನು ಹಸ್ತಾಂತರಿಸಿತ್ತು.

ಇದನ್ನೂ ಓದಿ: ಒಂದು ತುಂಡು ಇದ್ದಿಲು ಸಾಕು… 5 ನಿಮಿಷದಲ್ಲಿ ಬಿಳಿ ಕೂದಲನ್ನು ಪರ್ಮನೆಂಟ್ ಆಗಿ ಕಡು ಕಪ್ಪಾಗಿಸಬಹುದು!

ಐದು ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಆರಂಭಿಕ ಪಂದ್ಯಗಳಲ್ಲಿ ಹಿನ್ನಡೆಯಾಗಬಹುದು. ತಂಡದ ದಿಗ್ಗಜ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಮೊದಲೆರಡು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (NCA)ಯಲ್ಲಿದ್ದು, ಪುನರ್ವಸತಿ ಪ್ರಕ್ರಿಯೆಯಲ್ಲಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಮುಂಬರುವ ಪಂದ್ಯಾವಳಿಯ ಮೊದಲ ಎರಡು ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್‌’ನ ಪ್ರಮುಖ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ಸೂರ್ಯಕುಮಾರ್ ಯಾದವ್ ಲಭ್ಯತೆ ಅನುಮಾನ ಎಂದು ಪರಿಗಣಿಸಲಾಗಿದೆ. ಮುಂಬೈ ತನ್ನ ಮೊದಲ ಪಂದ್ಯವನ್ನು ಗುಜರಾತ್ ಟೈಟಾನ್ಸ್ ವಿರುದ್ಧ ಮಾರ್ಚ್ 24 ರಂದು ಮತ್ತು ಎರಡನೇ ಪಂದ್ಯವನ್ನು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ (ಮಾರ್ಚ್ 27) ಆಡಲಿದೆ. ಈ ಎರಡು ಪಂದ್ಯಗಳಿಗೂ ಮುನ್ನ ಎನ್‌’ಸಿಎ ವೈದ್ಯಕೀಯ ತಂಡ ಸೂರ್ಯ ಅವರಿಗೆ ಫಿಟ್‌ನೆಸ್ ಸರ್ಟಿಫಿಕೇಟ್ ನೀಡಲಿದೆಯೇ ಎಂಬ ಅನುಮಾನ ಮೂಡಿದೆ.

ಇದನ್ನೂ ಓದಿ: ಈ ತರಕಾರಿ ಬೇಯಿಸಿದ ನೀರನ್ನು ಕೂದಲಿಗೆ ಹಚ್ಚಿ: 5 ದಿನದಲ್ಲಿ ಬಿಳಿಕೂದಲು ಬುಡದಿಂದಲೇ ಕಪ್ಪು ಬಣ್ಣಕ್ಕೆ ತಿರುಗುತ್ತದೆ!

ಕಳೆದ ವರ್ಷ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ವೇಳೆ ಟೀಂ ಇಂಡಿಯಾದ ಬ್ಯಾಟ್ಸ್‌ಮನ್ ಗಾಯಗೊಂಡಿದ್ದರು. ಪಾದದ ಗಾಯದಿಂದಾಗಿ ಅವರು ಅಫ್ಘಾನಿಸ್ತಾನ ವಿರುದ್ಧದ T-20 ಸರಣಿಯನ್ನು ಸಹ ಆಡಲು ಸಾಧ್ಯವಾಗಲಿಲ್ಲ. ಸದ್ಯ ಸೂರ್ಯ ಅವರ ಸ್ಥಿತಿ ಸುಧಾರಿಸಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News