T20 World Cup 2022: ಟೀಂ ಇಂಡಿಯಾ ಮೋಸದಿಂದ ಗೆದ್ದಿದೆ ಎಂದ ಪಾಕಿಸ್ತಾನ..!

ಟಿ-20 ವಿಶ್ವಕಪ್‍ನ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಗೆಲ್ಲುತ್ತಿದ್ದ ಪಂದ್ಯದಲ್ಲಿ ಸೋಲು ಕಂಡಿದ್ದು ಪಾಕಿಸ್ತಾನಕ್ಕೆ ತೀವ್ರ ಹತಾಶೆ ಮೂಡಿಸಿದೆ.

Written by - Puttaraj K Alur | Last Updated : Oct 24, 2022, 03:37 PM IST
  • ಟೀಂ ಇಂಡಿಯಾ ಮೋಸದಿಂದ ಗೆಲುವು ಸಾಧಿಸಿದೆ ಎಂದು ಪಾಕಿಸ್ತಾನ ಆರೋಪ
  • ನಾಟಕೀಯ ಸನ್ನಿವೇಶಕ್ಕೆ ಸಾಕ್ಷಿಯಾದ ಹೈವೋಲ್ಟೇಜ್ ಪಂದ್ಯದ ಕೊನೆ ಓವರ್‍
  • ನವಾಜ್ ಎಸೆತ ನೋಬಾಲ್ ಆಗಿರಲಿಲ್ಲ, ಯಾರ್ಕರ್ ಆಗಿತ್ತು ಎಂದು ಪಾಕ್ ವಾದ
T20 World Cup 2022: ಟೀಂ ಇಂಡಿಯಾ ಮೋಸದಿಂದ ಗೆದ್ದಿದೆ ಎಂದ ಪಾಕಿಸ್ತಾನ..! title=
ನಾಟಕೀಯ ಸನ್ನಿವೇಶಕ್ಕೆ ಸಾಕ್ಷಿಯಾದ ಪಂದ್ಯ

ನವದೆಹಲಿ: ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ವಿರೋಚಿತ ಗೆಲುವು ಸಾಧಿಸಿದ ಟೀಂ ಇಂಡಿಯಾ ಕಳೆದ ಟೂರ್ನಿ ಸೋಲಿನ ಸೇಡು ತೀರಿಸಿಕೊಂಡಿದೆ. ಭಾನುವಾರದ ನಡೆದ ಮಹತ್ವದ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಕೊನೆ ಎಸೆತದಲ್ಲಿ ಗೆಲುವು ಸಾಧಿಸುವ ಮೂಲಕ ಭಾರತ ತಂಡ ಜಯಭೇರಿ ಬಾರಿಸಿತು.  

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಪಾಕಿಸ್ತಾನ ನಿಗದಿತ 20 ಓವರ್‍ಗಳಲ್ಲಿ 159 ರನ್ ಗಳಿಸಿತು. ಸವಾಲಿನ ಟಾರ್ಗೆಟ್ ಬೆನ್ನುಹತ್ತಿದ ಭಾರತ ವಿರಾಟ್ ಕೊಹ್ಲಿ(ಅಜೇಯ 82) ಮತ್ತು ಹಾರ್ದಿಕ್ ಪಾಂಡ್ಯ (40) ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 4 ವಿಕೆಟ್‍ಗಳ ಭರ್ಜರಿ ಗೆಲುವು ಸಾಧಿಸಿತು.

ವಿರಾಟ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುವ ಮೂಲಕ ಭಾರತಕ್ಕೆ ಗೆಲುವು ತಂದುಕೊಟ್ಟರು. ಈ ಪಂದ್ಯದ ಕೊನೆಯ ಓವರ್ ನಾಟಕೀಯ ಸನ್ನಿವೇಶಕ್ಕೆ ಕಾರಣವಾಯಿತು. ಅಂತಿಮ ಓವರ್ ನಲ್ಲಿ ಭಾರತದ ಗೆಲುವಿಗೆ 16 ರನ್‍ ಬೇಕಿತ್ತು. ನವಾಜ್ ಎಸೆದ ಈ ಓವರ್‍ನ ಮೊದಲ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಕ್ಯಾಚ್ ನೀಡಿ ಔಟಾದರು. ಬಳಿಕ ಕ್ರೀಸ್‍ಗೆ ಬಂದ ದಿನೇಶ್ ಕಾರ್ತಿಕ್ 2ನೇ ಎಸೆತದಲ್ಲಿ 1 ರನ್ ಬಾರಿಸಿ ಕೊಹ್ಲಿಗೆ ಸ್ಟ್ರೈಕ್ ನೀಡಿದರು. 3ನೇ ಎಸೆತದಲ್ಲಿ ಕೊಹ್ಲಿ 2 ರನ್ ಕದ್ದರು.

ಇದನ್ನೂ ಓದಿ: Sunil Gavaskar: ಪಾಕ್ ವಿರುದ್ಧ ಟೀಂ ಇಂಡಿಯಾದ ಗೆಲುವನ್ನು ಮಗುವಿನಂತೆ ಕುಣಿದು ಸಂಭ್ರಮಿಸಿದ ಸುನಿಲ್ ಗವಾಸ್ಕರ್

ಕೊನೆಯ 3 ಎಸೆತದಲ್ಲಿ 13 ರನ್‌ ಬೇಕಿತ್ತು. 4ನೇ ಎಸೆತವನ್ನು ಕೊಹ್ಲಿ ಸಿಕ್ಸರ್‌ ಸಿಡಿಸಿದರು. ಈ ಎಸೆತವನ್ನು ಅಂಪೈರ್ ನೋಬಾಲ್ ಎಂದು ಘೋಷಿಸಿದರು. ಆಗ 3 ಎಸೆತಗಳಲ್ಲಿ 6 ರನ್‌ ಬೇಕಿದ್ದಾಗ ನವಾಜ್‌ ವೈಡ್‌ ಎಸೆದರು. ಆ ನಂತರ ಫ್ರೀ ಹಿಟ್‌ನಲ್ಲಿ ಕೊಹ್ಲಿ ಬೌಲ್ಡ್‌ ಆದರೂ ಬೈ ಮೂಲಕ 3 ರನ್‌ ಕದ್ದರು. ಈ ಎಸೆತವನ್ನು ಡೆಡ್ ಬಾಲ್ ಎಂದು ಘೋಷಿಸುವಂತೆ ಪಾಕಿಸ್ತಾನ ಆಟಗಾರರು ಅಂಪೈರ್ ಬಳಿ ಮನವಿ ಮಾಡಿಕೊಂಡರು. ಆದರೂ ಅದನ್ನು ಅಂಪೈರ್ ಪುರಸ್ಕರಿಸಲಿಲ್ಲ. 5ನೇ ಎಸೆತದಲ್ಲಿ ಕಾರ್ತಿಕ್‌ ಕ್ರೀಸ್ ಔಟ್ ಆದರು. ಆಗ ಭಾರತಕ್ಕೆ 1 ಎಸೆತದಲ್ಲಿ 2 ರನ್‌ ಬೇಕಿತ್ತು. ನವಾಜ್‌ ಮತ್ತೊಂದು ವೈಡ್‌ ಎಸೆದರು. ಕೊನೆ ಎಸೆತದಲ್ಲಿ ಆರ್.ಅಶ್ವಿನ್ 1 ಕದ್ದು ತಂಡಕ್ಕೆ ಗೆಲುವು ತಂದುಕೊಟ್ಟರು.

 ಟೀಂ ಇಂಡಿಯಾ ಮೋಸದಿಂದ ಗೆದ್ದಿದೆ!

ಟಿ-20 ವಿಶ್ವಕಪ್‍ನ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಗೆಲ್ಲುತ್ತಿದ್ದ ಪಂದ್ಯದಲ್ಲಿ ಸೋಲು ಕಂಡಿದ್ದು ಪಾಕಿಸ್ತಾನಕ್ಕೆ ತೀವ್ರ ಹತಾಶೆ ಮೂಡಿಸಿದೆ. ಕೊಹ್ಲಿ ಸಿಕ್ಸರ್ ಅಟ್ಟಿದ ನವಾಜ್‍ನ 4ನೇ ಎಸೆತವನ್ನು ಅಂಪೈರ್ ನೋಬಾಲ್ ಅಂತಾ ಹೇಳಿದ್ದು ತಂಪು ಅಂತಾ ಪಾಕ್ ವಾದಿಸಿದೆ. ಈ ಬಗ್ಗೆ ನಮ್ಮ ಆಟಗಾರರು ಮೈದಾನದಲ್ಲಿಯೇ ಪ್ರಶ್ನಿಸಿದ್ದರು. ಆದರೆ ಇದಕ್ಕೆ ಅಂಪೈರ್ ತಪ್ಪು ತೀರ್ಪು ನೀಡಿದರು ಅಂತಾ ಬೇಸರ ವ್ಯಕ್ತಪಡಿಸಿದೆ.    

ಇದನ್ನೂ ಓದಿ: ಟೀಂ ಇಂಡಿಯಾ ಗೆಲುವಿನ ರೂವಾರಿಗಳ ಮನದಾಳದ ಮಾತು: Hardik-Virat ಸಂದರ್ಶನದಲ್ಲಿದೆ ರೋಚಕ ಮಾಹಿತಿ

ಪಂದ್ಯದ ಬಳಿಕ ಪಾಕಿಸ್ತಾನದ ಮಾಜಿ ಆಟಗಾರರು, ಅಭಿಮಾನಿಗಳು ಭಾರತ ತಂಡವು ಮೋಸದಿಂದ ಗೆದ್ದಿದೆ ಎಂದು ಆರೋಪಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ಆ ಎಸೆತ ನೋ ಬಾಲ್ ಆಗಿರಲಿಲ್ಲ, ಅದು ಯಾರ್ಕರ್ ಎಸೆತವಾಗಿತ್ತು ಅಂತಾ ಹೇಳಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News