ನವದೆಹಲಿ: ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ವಿರೋಚಿತ ಗೆಲುವು ಸಾಧಿಸಿತು. ಸ್ಫೋಟಕ ಬ್ಯಾಟಿಂಗ್ ಮಾಡಿದ ವಿರಾಟ್ ಕೊಹ್ಲಿ ಕ್ರಿಕೆಟ್ ಲೋಕಕ್ಕೆ ತಾನು ಕಿಂಗ್ ಅನ್ನೋದನ್ನ ಮತ್ತೊಮ್ಮೆ ತೋರಿಸಿದರು.


COMMERCIAL BREAK
SCROLL TO CONTINUE READING

ಈ ಪಂದ್ಯದ ಕೊನೆಯ ಓವರ್ ನಾಟಕೀಯ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಮೊಹಮ್ಮದ್ ನವಾಜ್ ಎಸೆದ ಈ ಓವರ್‍ನ 4ನೇ ಎಸೆತವನ್ನು ವಿರಾಟ್ ಕೊಹ್ಲಿ ಸಿಕ್ಸರ್‍ಗೆ ಅಟ್ಟಿದ್ದರು. ಆದರೆ ಈ ಎಸೆತವನ್ನು ಅಂಪೈರ್ ನೋಬಾಲ್ ಎಂದು ಘೋಷಿಸಿದ್ದರು. ಈ ಬಗ್ಗೆ ಪಾಕ್ ಆಟಗಾರರು ಮೈದಾನದಲ್ಲಿಯೇ ಅಂಪೈರ್ ತೀರ್ಪನ್ನು ಪ್ರಶ್ನಿಸಿದ್ದರು. ಅಂತಿಮವಾಗಿ ಗೆಲ್ಲುವ ಪಂದ್ಯದಲ್ಲಿ ಪಾಕಿಸ್ತಾನ ವಿರೋಚಿತ ಸೋಲು ಕಾಣಬೇಕಾಯಿತು. ಇದು ಪಾಕಿಸ್ತಾನದ ಮಾಜಿ ಆಟಗಾರರು ಮತ್ತು ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿಸಿದೆ.


ಇದನ್ನೂ ಓದಿ: ಟೀಂ ಇಂಡಿಯಾ ಗೆಲುವಿನ ರೂವಾರಿಗಳ ಮನದಾಳದ ಮಾತು: Hardik-Virat ಸಂದರ್ಶನದಲ್ಲಿದೆ ರೋಚಕ ಮಾಹಿತಿ


ಟೀಂ ಇಂಡಿಯಾ ಈ ಪಂದ್ಯವನ್ನು ಮೋಸದಿಂದ ಗೆದ್ದಿದೆ ಅಂತಾ ಪಾಕಿಸ್ತಾನದ ಮಾಜಿ ಆಟಗಾರರು ಸೇರಿದಂತೆ ಅಭಿಮಾನಿಗಳು ಆರೋಪಿಸಿದ್ದಾರೆ. ಈ ಪಂದ್ಯದ ಸೋಲಿನಿಂದ ಪಾಕಿಸ್ತಾನಕ್ಕೆ ದೊಡ್ಡ ಅನ್ಯಾಯವಾಗಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ರಮೀಝ್ ರಾಜಾ ಬೇಸರ ವ್ಯಕ್ತಪಡಿಸಿದ್ದಾರೆ.


T20 World Cup 2022: ಟೀಂ ಇಂಡಿಯಾ ಮೋಸದಿಂದ ಗೆದ್ದಿದೆ ಎಂದ ಪಾಕಿಸ್ತಾನ..!


ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಪಾಕಿಸ್ತಾನ ನಿಗದಿತ 20 ಓವರ್‍ಗಳಲ್ಲಿ 159 ರನ್ ಗಳಿಸಿತು. ಸವಾಲಿನ ಟಾರ್ಗೆಟ್ ಬೆನ್ನುಹತ್ತಿದ ಭಾರತ ವಿರಾಟ್ ಕೊಹ್ಲಿ(ಅಜೇಯ 82) ಮತ್ತು ಹಾರ್ದಿಕ್ ಪಾಂಡ್ಯ (40) ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 4 ವಿಕೆಟ್‍ಗಳ ಭರ್ಜರಿ ಗೆಲುವು ಸಾಧಿಸಿತು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ