ಐದು ವರ್ಷಗಳ ಬಳಿಕ ಟೀಮ್ ಇಂಡಿಯಾ ಆಟಗಾರರೊಬ್ಬರು ರಣಜಿ ಟ್ರೋಪಿಗೆ ಆಡಲು ಮರಳುತ್ತಿದ್ದಾರೆ. 


COMMERCIAL BREAK
SCROLL TO CONTINUE READING

ಟೀಮ್ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಕರ್ನಾಟಕ ತಂಡಕ್ಕೆ ರಣಜಿ ಟ್ರೋಫಿ ಆಡಲಿದ್ದಾರೆ.  ಜನವರಿ 30ರಂದು ನಡೆಯಲಿರುವ ಹರಿಯಾಣ ವಿರುದ್ಧದ ಪಂದ್ಯದಲ್ಲಿ ಕೆ ಎಲ್ ರಾಹುಲ್ ಕರ್ನಾಟಕ ತಂಡದ ಪರ ಆಡುವ ಮೂಲಕ ಐದು ವರ್ಷಗಳ ಬಳಿಕ ರಣಜಿ ಟ್ರೋಫಿಯಲ್ಲಿ ಭಾಗಿಯಾಗುತ್ತಿದ್ದಾರೆ. 


ಕರ್ನಾಟಕ ತಂಡದಲ್ಲಿ ಕೆ ಎಲ್ ರಾಹುಲ್ 17ನೇ ಆಟಗಾರರಾಗಿ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಇದಕ್ಕೂ ಮುನ್ನ ಕೆ ಎಲ್ ರಾಹುಲ್ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ಹಾಗೂ ಕರ್ನಾಟಕ ಪಂದ್ಯದಲ್ಲಿ ಆಡುತ್ತಾರೆ ಎನ್ನಲಾಗಿತ್ತು ಆದರೆ ಆ ಪಂದ್ಯಕ್ಕೆ ಅವರು ಆಗಿರಲಿಲ್ಲ. ಇದೀಗ ಹರಿಯಾಣ ವಿರುದ್ಧ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಕೆ ಎಲ್ ರಾಹುಲ್ ಆಡಲಿದ್ದಾರೆ.


ತಂಡದ ನಾಯಕರಾಗಿ ಮಯಾಂಕ್ ಅಗರ್ವಾಲ್  ಹಾಗೂ ತಂಡದ ಉಪನಾಯಕರಾಗಿ ಕೆಎಲ್ ರಾಹುಲ್, ಶ್ರೇಯಸ್ ಗೋಪಾಲ್ ಕಾಣಿಸಿಕೊಳ್ಳುತ್ತಿರುವುದು ವಿಶೇಷವಾಗಿದೆ


ತಂಡ:


ಮಯಾಂಕ್ ಅಗರ್ವಾಲ್ (ಸಿ), ಕೆಎಲ್ ರಾಹುಲ್, ಶ್ರೇಯಸ್ ಗೋಪಾಲ್ (ವಿಸಿ), ದೇವದತ್ತ್ ಪಡಿಕ್ಕಲ್, ಕೆವಿ ಅನೀಶ್, ಆರ್ ಸ್ಮರಣ್, ಕೆಎಲ್ ಶ್ರೀಜಿತ್ (ವಾಕ್), ಅಭಿನವ್ ಮನೋಹರ್, ಹಾರ್ದಿಕ್ ರಾಜ್, ಪ್ರಸಿದ್ಧ್ ಕೃಷ್ಣ, ವಿದ್ವತ್ ಕಾವೇರಪ್ಪ, ವಾಸುಕಿ ಕೌಶಿಕ್, ಅಭಿಲಾಷ್ ಶೆಟ್ಟಿ ಯಶೋವರ್ಧನ್ ಪರಂತಪ್, ನಿಕಿನ್ ಜೋಸ್, ಸುಜಯ್ ಸಾತೇರಿ (ವಾರ), ಮೊಹ್ಸಿನ್ ಖಾನ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.