T20 World Cup 2024: ದಕ್ಷಿಣ ಆಫ್ರಿಕಾ ವಿರುದ್ಧದ T20 ವಿಶ್ವಕಪ್ 2024ರ ಅಂತಿಮ ಪಂದ್ಯದಲ್ಲಿ ಭಾರತ ಬಲಿಷ್ಠ ತಂಡವನ್ನೇ ಕಣಕ್ಕಿಳಿಸುವ ಸಾಧ್ಯತೆ ಇದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ T20 ವಿಶ್ವಕಪ್ 2024 ರ ಅಂತಿಮ ಪಂದ್ಯ ಇಂದು ರಾತ್ರಿ 8 ಗಂಟೆಗೆ ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್ ಮೈದಾನದಲ್ಲಿ ನಡೆಯಲಿದೆ. 17 ವರ್ಷಗಳ ನಂತರ ಟೀಂ ಇಂಡಿಯಾಗೆ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುವ ಅವಕಾಶ ಸಿಕ್ಕಿದೆ. ಭಾರತ ಕೊನೆಯ ಬಾರಿಗೆ 2007 ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಗೆದ್ದಿತ್ತು. ಮತ್ತೊಂದೆಡೆ, ದಕ್ಷಿಣ ಆಫ್ರಿಕಾಕ್ಕೆ ಚೊಚ್ಚಲ ಬಾರಿಗೆ ಟಿ20 ವಿಶ್ವಕಪ್ ಪ್ರಶಸ್ತಿ ಗೆಲ್ಲುವ ಅವಕಾಶವಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಟೂರ್ನಿಯುದ್ದಕ್ಕೂ ಒಂದೇ ಒಂದು ಸೋಲು ಕಾಣದೆ ವಿಶ್ವಕಪ್ ಗೆದ್ದಿರುವುದು ಈ 2 ತಂಡಗಳು ಮಾತ್ರ: ಯಾವುವವು ಗೊತ್ತಾ?


ದಕ್ಷಿಣ ಆಫ್ರಿಕಾ ವಿರುದ್ಧ ಟಿ 20 ವಿಶ್ವಕಪ್‌’ನ ಅಂತಿಮ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಜೋಡಿಯು ಆರಂಭಿಕರಾಗಿ ಕಣಕ್ಕಿಳಿಯಲಿದೆ. ಕೊಹ್ಲಿ ಇಲ್ಲಿಯವರೆಗೆ ಆರಂಭಿಕರಾಗಿ ವಿಶೇಷವಾದ ಏನನ್ನೂ ಮಾಡಲು ಸಾಧ್ಯವಾಗಿಲ್ಲ. ಆದರೆ ಅಂತಿಮ ಪಂದ್ಯದಲ್ಲಿ ಉತ್ತಮ ಸ್ಕೋರ್ ಮಾಡಲಿದ್ದಾರೆ ಎಂದು ಈ ಹಿಂದೆ ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ಭರವಸೆ ವ್ಯಕ್ತಪಡಿಸಿದ್ದರು.


ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ವಿಶ್ವಕಪ್ 2024ರ ಅಂತಿಮ ಪಂದ್ಯದಲ್ಲಿ, ಸ್ಫೋಟಕ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ 3 ನೇ ಸ್ಥಾನದಲ್ಲಿ ಬ್ಯಾಟಿಂಗ್‌’ಗೆ ಬರಬಹುದು. ಇನ್ನುಳಿದಂತೆ ಸೂರ್ಯಕುಮಾರ್ ಯಾದವ್ 4ನೇ ಸ್ಥಾನದಲ್ಲಿ ಮೈದಾನಕ್ಕೆ ಬಂದರೆ, ಎದುರಾಳಿಗೆ ಸಂಕಷ್ಟ ಎದುರಾಗೋದು ಖಂಡಿತ. ಸೂರ್ಯಕುಮಾರ್ ಭಾರತದ ಅತ್ಯಂತ ಅಪಾಯಕಾರಿ ಬ್ಯಾಟ್ಸ್‌ಮನ್.  


ಇನ್ನು ಸಂಜು ಸ್ಯಾಮ್ಸನ್ 5 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸಾಧ್ಯತೆ ಇದೆ. ಇಂದಿನ ಫೈನಲ್ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಮಾಡಬಹುದಾದ ಬದಲಾವಣೆ ಎಂದರೆ ಸಂಜು ಸ್ಯಾಮ್ಸನ್. ಮಧ್ಯ ಮತ್ತು ಡೆತ್ ಓವರ್‌’ಗಳಲ್ಲಿ ಸಿಕ್ಸರ್ ಬಾರಿಸಲು ಶಿವಂ ದುಬೆ ಅವರನ್ನು ಪ್ಲೇಯಿಂಗ್ ಹನ್ನೊಂದರಲ್ಲಿ ಇರಿಸಲಾಗಿತ್ತು. ಆದರೆ ನಿರೀಕ್ಷೆಗೆ ತಕ್ಕಂತೆ ಆಡದ ಕಾರಣ, ಶಿವಂ ದುಬೆ ಬದಲಿಗೆ ಸಂಜು ಸ್ಯಾಮ್ಸನ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ.


ಹಾರ್ದಿಕ್ ಪಾಂಡ್ಯ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಹುದು. ಪಾಂಡ್ಯ ಸ್ಫೋಟಕ ಬ್ಯಾಟ್ಸ್‌ಮನ್, ಅಪಾಯಕಾರಿ ಬೌಲರ್ ಮತ್ತು ಚಾಣಾಕ್ಷ ಫೀಲ್ಡರ್. ಕೇವಲ ಒಂದೇ ಓವರ್‌’ನಲ್ಲಿ ಇಡೀ ಪಂದ್ಯದ ಫಲಿತಾಂಶವನ್ನೇ ಬದಲಿಸಬಲ್ಲ ಅಪಾಯಕಾರಿ ಆಟಗಾರರಲ್ಲಿ ಹಾರ್ದಿಕ್ ಪಾಂಡ್ಯ ಕೂಡ ಒಬ್ಬರು.


ಎಡಗೈ ಸ್ಪಿನ್ ಬೌಲಿಂಗ್ ಆಲ್ ರೌಂಡರ್ ರವೀಂದ್ರ ಜಡೇಜಾ 7 ನೇ ಸ್ಥಾನದಲ್ಲಿ ಬ್ಯಾಟ್ ಮಾಡಬಹುದು. ಇನ್ನೊಂದೆಡೆ ಬೌಲರ್ ಕುಲದೀಪ್ ಯಾದವ್ ಮತ್ತು ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ದಕ್ಷಿಣ ಆಫ್ರಿಕಾ ವಿರುದ್ಧದ T20 ವಿಶ್ವಕಪ್ 2024 ರ ಅಂತಿಮ ಪಂದ್ಯದ ಆಡುವ ಹನ್ನೊಂದರಲ್ಲಿ ಸೇರ್ಪಡೆಗೊಳ್ಳಲಿದ್ದಾರೆ. ಜಸ್ಪ್ರೀತ್ ಬುಮ್ರಾ ಮತ್ತು ಅರ್ಶ್ದೀಪ್ ಸಿಂಗ್ ಬೌಲಿಂಗ್’ನಲ್ಲಿ ಸದ್ದು ಮಾಡಲಿದ್ದು, ಇವರೂ ಸಹ ಪ್ಲೇಯಿಂಗ್ 11ನಲ್ಲಿ ಸ್ಥಾನ ಪಡೆಯಲಿದ್ದಾರೆ,


ಇದನ್ನೂ ಓದಿ: ಈ ತಂಡ ಟಿ20 ವಿಶ್ವಕಪ್ ಟ್ರೋಫಿ ಗೆಲಲ್ಲಿದೆ: ರಿಕಿ ಪಾಂಟಿಂಗ್ ಭವಿಷ್ಯ


ಭಾರತದ ಸಂಭಾವ್ಯ ಪ್ಲೇಯಿಂಗ್ 11:


ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ ಮತ್ತು ಅರ್ಶ್ದೀಪ್ ಸಿಂಗ್


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್