ಬ್ಲಡ್ ಕ್ಯಾನ್ಸರ್‌ನೊಂದಿಗೆ ಹೋರಾಡುತ್ತಿರುವ ಟೀಂ ಇಂಡಿಯಾದ ಮಾಜಿ ಬ್ಯಾಟ್ಸ್‌ಮನ್, ಕೋಚ್ ಇವರು!

 Anshuman Gaekwad: ನಾಲ್ಕು ದಿನಗಳ ಹಿಂದೆಯಷ್ಟೇ ಭಾರತ ತಂಡ 17 ವರ್ಷಗಳ ನಂತರ ಟಿ-20 ವಿಶ್ವಕಪ್ ಪ್ರಶಸ್ತಿ ಜಯಿಸುವಲ್ಲಿ ಯಶಸ್ವಿಯಾಗಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಮಣಿಸಿ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. 

Written by - Savita M B | Last Updated : Jul 4, 2024, 07:17 PM IST
  • ನಾಲ್ಕು ದಿನಗಳ ಹಿಂದೆಯಷ್ಟೇ ಭಾರತ ತಂಡ 17 ವರ್ಷಗಳ ನಂತರ ಟಿ-20 ವಿಶ್ವಕಪ್ ಪ್ರಶಸ್ತಿ ಜಯಿಸುವಲ್ಲಿ ಯಶಸ್ವಿಯಾಗಿದೆ.
  • ಈ ನಡುವೆ ಭಾರತ ತಂಡದ ಆಟಗಾರಗೆ ಕೆಟ್ಟ ಸುದ್ದಿಯೊಂದು ಎದುರಾಗಿದೆ
ಬ್ಲಡ್ ಕ್ಯಾನ್ಸರ್‌ನೊಂದಿಗೆ ಹೋರಾಡುತ್ತಿರುವ ಟೀಂ ಇಂಡಿಯಾದ ಮಾಜಿ ಬ್ಯಾಟ್ಸ್‌ಮನ್, ಕೋಚ್ ಇವರು!  title=

Team India: ನಾಲ್ಕು ದಿನಗಳ ಹಿಂದೆಯಷ್ಟೇ ಭಾರತ ತಂಡ 17 ವರ್ಷಗಳ ನಂತರ ಟಿ-20 ವಿಶ್ವಕಪ್ ಪ್ರಶಸ್ತಿ ಜಯಿಸುವಲ್ಲಿ ಯಶಸ್ವಿಯಾಗಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಮಣಿಸಿ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಈ ನಡುವೆ ಭಾರತ ತಂಡದ ಆಟಗಾರಗೆ ಕೆಟ್ಟ ಸುದ್ದಿಯೊಂದು ಎದುರಾಗಿದೆ. ವಾಸ್ತವವಾಗಿ, ಭಾರತ ತಂಡದ ಮಾಜಿ ಬ್ಯಾಟ್ಸ್‌ಮನ್ ಮತ್ತು ಕೋಚ್ ಅಂಶುಮಾನ್ ಗಾಯಕ್ವಾಡ್ ರಕ್ತದ ಕ್ಯಾನ್ಸರ್ ನಿಂದ ಬಳಲುತ್ತಿರುವ ಸುದ್ದಿಯೊಂದು ಹೊರಬಿದ್ದಿದೆ. 

 ಅಂಶುಮಾನ್ ಗಾಯಕ್ವಾಡ್ 1975 ರಿಂದ 1987 ರವರೆಗೆ ಭಾರತಕ್ಕಾಗಿ ಕ್ರಿಕೆಟ್ ಆಡಿದ್ದರು. ಈ ಅವಧಿಯಲ್ಲಿ ಅವರು 40 ಟೆಸ್ಟ್ ಮತ್ತು 15 ಏಕದಿನ ಪಂದ್ಯಗಳಲ್ಲಿ ಭಾಗವಹಿಸಿದ್ದಾರೆ. ಇದಲ್ಲದೆ, ಅವರು 1997 ರಿಂದ 1999 ರವರೆಗೆ ತಂಡದ ಕೋಚಿಂಗ್ ಅನ್ನು ಸಹ ನಿರ್ವಹಿಸಿದ್ದಾರೆ. ಅವರು ತಮ್ಮ ವೃತ್ತಿಜೀವನದಲ್ಲಿ ಎರಡು ಬಾರಿ ಭಾರತ ತಂಡದ ಮುಖ್ಯ ಕೋಚ್ ಆದರು. 2000ನೇ ಇಸವಿಯಲ್ಲೂ ಮತ್ತೊಮ್ಮೆ ಕೋಚ್ ಆಗಿ ತಂಡದ ಜವಾಬ್ದಾರಿ ವಹಿಸಿಕೊಂಡರು.

ಇದನ್ನೂ ಓದಿ-ನಂ.1 ಆಲ್ ರೌಂಡರ್ ಆಗಿ ಟೀಂ ಇಂಡಿಯಾ ಸ್ಟಾರ್ ಆಟಗಾರ!!! ಯಾರು?

 ಅಂಶುಮಾನ್ ಗಾಯಕ್ವಾಡ್ ಲಂಡನ್ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಭಾರತದ ಮಾಜಿ ಆಟಗಾರ ಸಂದೀಪ್ ಪಾಟೀಲ್ ಅವರು ಮಿಡ್-ಡೇನಲ್ಲಿ ಪ್ರಕಟವಾದ ತಮ್ಮ ಅಂಕಣದಲ್ಲಿ ಅವರ ಬಗ್ಗೆ ಕೆಲವು ವಿಷಯಗಳನ್ನು ಉಲ್ಲೇಖಿಸಿದ್ದಾರೆ. ಚಿಕಿತ್ಸೆಗೆ ಹಣ ಬೇಕು ಎಂದು ಅಂಶು ಹೇಳಿರುವುದಾಗಿ ಬರೆದುಕೊಂಡಿದ್ದಾರೆ. ಈ ಬಗ್ಗೆ ನಾನು ಮತ್ತು ದಿಲೀಪ್ ಬಿಸಿಸಿಐ ಜತೆ ಮಾತನಾಡಿದ್ದೇವೆ. ಅಂಶುಮಾನ್ ಅವರನ್ನು ಭೇಟಿಯಾದ ಬಳಿಕ ಇತರ ಕ್ರಿಕೆಟಿಗರ ಗಮನವನ್ನೂ ಈ ಬಗ್ಗೆ ಸೆಳೆದಿದ್ದೇವೆ.

 ಅಂಶುಮಾನ್ ತಮ್ಮ ಕ್ರಿಕೆಟ್ ಜೀವನದಲ್ಲಿ ಪಾಕಿಸ್ತಾನದ ವಿರುದ್ಧ ಐತಿಹಾಸಿಕ ಇನ್ನಿಂಗ್ಸ್ ಆಡಿದ್ದರು. ಅವರು 1983 ರಲ್ಲಿ ಪಾಕಿಸ್ತಾನದ ವಿರುದ್ಧ ಜಲಂಧರ್ ಟೆಸ್ಟ್ ಪಂದ್ಯದಲ್ಲಿ 201 ರನ್ ಗಳಿಸುವಲ್ಲಿ ಯಶಸ್ವಿಯಾಗಿದ್ದರು.. ಆ ಸಮಯದಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಇದು ನಿಧಾನಗತಿಯ ದ್ವಿಶತಕವಾಗಿತ್ತು. ಈ ಇನ್ನಿಂಗ್ಸ್‌ನಿಂದಾಗಿ ಭಾರತ ತಂಡ ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಪಾಕ್ ತಂಡದ ಎಲ್ಲಾ ಬೌಲರ್‌ಗಳು ಅಂಶುಮಾನ್ ಅವರನ್ನು ಔಟ್ ಮಾಡಲು ಪ್ರಯತ್ನಿಸಿದರು. ಆದರೆ ಮೈದಾನದಲ್ಲಿ ಏಕಾಂಗಿಯಾಗಿ ನಿಂತು ಪಂದ್ಯವನ್ನು ಭಾರತಕ್ಕೆ ಡ್ರಾ ಮಾಡಿಸಿದರು.

ಇದನ್ನೂ ಓದಿ-ಭಾರತಕ್ಕೆ ಮರಳಿದ ಟೀಂ ಇಂಡಿಯಾ: ಅದ್ದೂರಿ ಆಚರಣೆಗೆ ರೆಡಿಯಾಯ್ತು ಸ್ಪೆಷಲ್‌ ಕೇಕ್‌..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ..

 

Trending News