VVS Laxman Cricket News: ಟೀಮ್ ಇಂಡಿಯಾದ ಪ್ರಸ್ತುತ ಕೋಚ್ ರಾಹುಲ್ ದ್ರಾವಿಡ್ ಬದಲಿಗೆ ಹೊಸ ಮುಖ್ಯ ಕೋಚ್ ಯಾರು ಎಂಬ ಬಗ್ಗೆ ದೊಡ್ಡ ಮತ್ತು ಆಘಾತಕಾರಿ ಅಪ್ಡೇಟ್ ಹೊರಬಿದ್ದಿದೆ. ಈ ವರ್ಷ ಅಕ್ಟೋಬರ್ ಮತ್ತು ನವೆಂಬರ್ 2023 ರಲ್ಲಿ ಭಾರತದ ನೆಲದಲ್ಲಿ ನಡೆಯಲಿರುವ 2023 ರ ವಿಶ್ವಕಪ್ ನಂತರ ರಾಹುಲ್ ದ್ರಾವಿಡ್ ಅವರ ಒಪ್ಪಂದವು ಕೊನೆಗೊಳ್ಳುತ್ತಿದೆ, ಆದರೆ ಬಿಸಿಸಿಐ ಈಗಾಗಲೇ ಟೀಮ್ ಇಂಡಿಯಾದ ಹೊಸ ಮುಖ್ಯ ಕೋಚ್ ಅನ್ನು ಆಯ್ಕೆ ಮಾಡಿದೆ. ರಾಹುಲ್ ದ್ರಾವಿಡ್ ನಿರ್ಗಮನಕ್ಕೂ ಮುನ್ನವೇ ಬಿಸಿಸಿಐ ಅನುಭವಿ ಆಟಗಾರರನ್ನು ಮುಖ್ಯ ಕೋಚ್ ಆಗಿ ನೇಮಿಸುವ ಮೂಲಕ ಭವಿಷ್ಯದ ತಯಾರಿ ಆರಂಭಿಸಿದೆ.
ಇದನ್ನೂ ಓದಿ: “ಭಾರತ ಇಲ್ಲದಿದ್ದರೆ ಪಾಕ್ ಇಲ್ಲ… ಮತ್ತೆ ಒಂದಾಗೋಣ” ಎಂದು ಕಣ್ಣೀರಾದ ಪಾಕ್ ಕ್ರಿಕೆಟಿಗ!
ರವಿಶಾಸ್ತ್ರಿ ಕಾಲದಲ್ಲಿ ಬಿಸಿಸಿಐ ಯಾವ ರೀತಿ ಟೀಂ ಇಂಡಿಯಾಗೆ ಸಣ್ಣ ಕ್ರಿಕೆಟ್ ಸರಣಿಗಳಲ್ಲಿ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರನ್ನು ಪ್ರಯೋಗಿಸಿತೋ ಅದೇ ರೀತಿ ರಾಹುಲ್ ದ್ರಾವಿಡ್ ಇರುವಾಗಲೇ ವಿವಿಎಸ್ ಲಕ್ಷ್ಮಣ್ ಅವರಿಗೆ ಟೀಂ ಇಂಡಿಯಾ ಜವಾಬ್ದಾರಿ ನೀಡಲಾಗುತ್ತಿದೆ. ವಿವಿಎಸ್ ಲಕ್ಷ್ಮಣ್ ಅವರನ್ನು ಟೀಂ ಇಂಡಿಯಾ ಕೋಚ್ ಮಾಡುವ ಮೂಲಕ ಬಿಸಿಸಿಐ ಭವಿಷ್ಯದ ತಯಾರಿ ನಡೆಸುತ್ತಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಕ್ರಿಕೆಟ್ ಸರಣಿ ಮುಗಿದ ತಕ್ಷಣ, ಭಾರತವು ಆಗಸ್ಟ್ 18 ರಿಂದ ಆಗಸ್ಟ್ 23 ರವರೆಗೆ ಐರ್ಲೆಂಡ್ಗೆ ಪ್ರವಾಸ ಮಾಡಬೇಕಾಗಿದೆ. ಅಲ್ಲಿ ಮೂರು ಪಂದ್ಯಗಳ T20 ಸರಣಿಯನ್ನು ಆಡಬೇಕಾಗಿದೆ. ಈ ಸರಣಿಗೆ ಬಿಸಿಸಿಐ ವಿವಿಎಸ್ ಲಕ್ಷ್ಮಣ್ ಅವರನ್ನು ಟೀಂ ಇಂಡಿಯಾ ಕೋಚ್ ಆಗಿ ನೇಮಿಸಿದೆ. ಡಬ್ಲಿನ್ನಲ್ಲಿ ಐರ್ಲೆಂಡ್ ವಿರುದ್ಧದ ಟಿ20 ಸರಣಿಯ ಎಲ್ಲಾ ಮೂರು ಪಂದ್ಯಗಳನ್ನು ಭಾರತ ಆಡಬೇಕಿದೆ. ಕ್ರಿಕ್ಬಜ್ ವರದಿ ಪ್ರಕಾರ, ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ವಿವಿಎಸ್ ಲಕ್ಷ್ಮಣ್ ಭಾರತ ತಂಡದ ಮುಖ್ಯ ಕೋಚ್ ಆಗಲಿದ್ದಾರೆ.
ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್, ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಮುಂಬರುವ ಏಷ್ಯಾ ಕಪ್ 2023 ಮತ್ತು 2023 ವಿಶ್ವಕಪ್ಗೆ ಮೊದಲು ವಿಶ್ರಾಂತಿ ಪಡೆಯಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವಿವಿಎಸ್ ಲಕ್ಷ್ಮಣ್ ಅವರನ್ನು ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾದ ಮುಖ್ಯ ಕೋಚ್ ಮಾಡಲಾಗಿದೆ. 2022 ರ ಆರಂಭದಲ್ಲಿ, ರಾಹುಲ್ ದ್ರಾವಿಡ್ ಅನುಪಸ್ಥಿತಿಯಲ್ಲಿ, ಐರ್ಲೆಂಡ್ ಮತ್ತು ನ್ಯೂಜಿಲೆಂಡ್ ಪ್ರವಾಸದಲ್ಲಿ ವಿವಿಎಸ್ ಲಕ್ಷ್ಮಣ್ ಮುಖ್ಯ ಕೋಚ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಇದನ್ನೂ ಓದಿ: ಅಳಿಯ ಕೆಎಲ್ ರಾಹುಲ್’ಗೆ ಖಡಕ್ ಎಚ್ಚರಿಕೆ ಕೊಟ್ಟ ಮಾವ ಸುನಿಲ್ ಶೆಟ್ಟಿ!
ನವೆಂಬರ್ 2021 ರಲ್ಲಿ ರವಿಶಾಸ್ತ್ರಿ ಅವರಿಂದ ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಂಡಾಗಿನಿಂದ, ಭಾರತ ತಂಡವು 2022 ರ ಟಿ 20 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತಿತು. ಭಾರತ ತಂಡ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಮತ್ತು ಏಕದಿನ ಸರಣಿಯನ್ನು ಕಳೆದುಕೊಂಡಿತ್ತು. ಇದಲ್ಲದೆ, 2022 ರ ಟಿ 20 ಏಷ್ಯಾ ಕಪ್ನ ಫೈನಲ್ ತಲುಪಲಿಲ್ಲ ಮತ್ತು 2022 ರಲ್ಲಿ ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಐದನೇ ಟೆಸ್ಟ್ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಬರ್ಮಿಂಗ್ಹ್ಯಾಮ್ನಲ್ಲಿ ಐದನೇ ಟೆಸ್ಟ್ನಲ್ಲಿ ಸೋತ ನಂತರ, ಭಾರತವು 2007 ರ ನಂತರ ಇಂಗ್ಲೆಂಡ್ನಲ್ಲಿ ಮೊದಲ ಬಾರಿಗೆ ಟೆಸ್ಟ್ ಸರಣಿಯನ್ನು ಗೆಲ್ಲುವ ಅವಕಾಶವನ್ನು ಕಳೆದುಕೊಂಡಿತು. ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು 2-2ರಲ್ಲಿ ಸಮಬಲಗೊಳಿಸಿದೆ. ಇದಲ್ಲದೆ, 2023 ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಅಂತಿಮ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಸೋತಿತ್ತು ಮತ್ತು ಟ್ರೋಫಿ ಗೆಲ್ಲುವ ಅವಕಾಶವನ್ನೂ ಕಳೆದುಕೊಂಡಿತ್ತು
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ