ವಿಶ್ವಕಪ್ 2023

ತವರಿನಲ್ಲಿ ನಡೆಯಲಿರುವ ODI ವಿಶ್ವಕಪ್ 2023 ಗಾಗಿ ಟೀಮ್ ಇಂಡಿಯಾ ತಂಡವನ್ನು ಬಿಸಿಸಿಐ ಸಮಿತಿ ಸೆಪ್ಟೆಂಬರ್ 5ರಂದು ಪ್ರಕಟಿಸಿದೆ. ಈ ಪಂದ್ಯದಲ್ಲಿ ಪ್ರಮುಖ 7 ಮಂದಿ ಆಟಗಾರರನ್ನು ಕೈಬಿಡಲಾಗಿದ್ದು, ಅನೇಕರ ಅಸಮಾಧಾನಕ್ಕೆ ಕಾರಣವಾಗಿದೆ.

Bhavishya Shetty
Sep 06,2023

ಅವಕಾಶ ಪಡೆಯದ ಕ್ರಿಕೆಟಿಗರು

ನಾವಿಂದು ಈ ವರದಿಯಲ್ಲಿ ಅರ್ಹತೆ ಇದ್ದರೂ ವಿಶ್ವಕಪ್ ಭಾರತ ತಂಡದಲ್ಲಿ ಅವಕಾಶ ಪಡೆಯದ 7 ಸ್ಟಾರ್ ಕ್ರಿಕೆಟಿಗರ ಬಗ್ಗೆ ಮಾಹಿತಿ ನೀಡಲಿದ್ದೇವೆ.

ಯುಜ್ವೇಂದ್ರ ಚಹಲ್:

ಕುಲದೀಪ್ ಯಾದವ್ ಇತ್ತೀಚಿನ ದಿನಗಳಲ್ಲಿ ಒಡಿಐ ಸ್ವರೂಪದಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ಕಾರಣ ಯುಜ್ವೇಂದ್ರ ಚಹಲ್ ಕೈಬಿಟ್ಟು, ಅವರಿಗೆ ಅವಕಾಶ ನೀಡಲಾಗಿದೆ.

ಸಂಜು ಸ್ಯಾಮ್ಸನ್:

ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ್ದರೂ ಸಹ ಕೆ.ಎಲ್ ರಾಹುಲ್ ಹಾಗೂ ಇಶಾನ್ ಕಿಶನ್’ಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಅನೇಕ ಕ್ರಿಕೆಟ್ ಅಭಿಮಾನಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಶಿಖರ್ ಧವನ್:

ಶಿಖರ್ ಧವನ್: ಕಳೆದ 2015 ಹಾಗೂ 2019ರ ಏಕದಿನ ವಿಶ್ವಕಪ್ ಭಾರತ ತಂಡದಲ್ಲಿ ಕಾಣಿಸಿಕೊಂಡಿದ್ದ ಶಿಖರ್ ಧವನ್’ಗೆ ಈ ಬಾರಿ ಅವಕಾಶ ನೀಡಲಾಗಿಲ್ಲ.

ತಿಲಕ್ ವರ್ಮಾ:

ತಿಲಕ್ ವರ್ಮಾ: ವೆಸ್ಟ್ ಇಂಡೀಸ್ ಪ್ರವಾಸದ ಟಿ20 ಸರಣಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ್ದ ತಿಲಕ್ ವರ್ಮಾರಿಗೂ ಅವಕಾಶ ಕೈ ತಪ್ಪಿದೆ.

ಪ್ರಸಿಧ್ ಕೃಷ್ಣ:

ಕನ್ನಡಿಗ ಪ್ರಸಿಧ್ ಕೃಷ್ಣ ಅವರಿಗೂ ವಿಶ್ವಕಪ್ ತಂಡದಲ್ಲಿ ಸ್ಥಾನ ಕೈ ತಪ್ಪಿದೆ. ಐರ್ಲೆಂಡ್ ವಿರುದ್ದದ ಟಿ20 ಸರಣಿಯ ಎರಡು ಪಂದ್ಯಗಳಲ್ಲಿ 4 ವಿಕೆಟ್ ಕಬಳಿಸಿದ್ದ ಅವರಿಗೆ ಏಷ್ಯಾಕಪ್’ನಲ್ಲಿ ಸ್ಥಾನ ಸಿಕ್ಕಿದ್ದರೂ ಪ್ಲೇಯಿಂಗ್ 11ನಲ್ಲಿ ಅವಕಾಶ ಸಿಕ್ಕಿಲ್ಲ.

ಆರ್ ಅಶ್ವಿನ್:

ಟೀಂ ಇಂಡಿಯಾದ ಸ್ಟಾರ್ ಆಫ್ ಸ್ಪಿನ್ನರ್ ಆರ್ ಅಶ್ವಿನ್ ಅವರಿಗೂ ತಂಡದಲ್ಲಿ ಅವಕಾಶ ಸಿಕ್ಕಿಲ್ಲ. ಚೈನಾಮನ್ ಖ್ಯಾತಿಯ ಕುಲದೀಪ್ ಯಾದವ್ ಮಾತ್ರ ತಂಡದಲ್ಲಿ ಸ್ಪಿನ್ನರ್ ಆಗಿ ಅವಕಾಶ ಪಡೆದಿದ್ದಾರೆ.

ವಾಷಿಂಗ್ಟನ್ ಸುಂದರ್:

ವಾಷಿಂಗ್ಟನ್ ಸುಂದರ್ ಬದಲು ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅಶ್ವಿನ್ ಬೇಡ, ಕನಿಷ್ಟ ಪಕ್ಷ ವಾಷಿಂಗ್ಟನ್ ಸುಂದರ್ ಅವರಿಗಾದರೂ ತಂಡದಲ್ಲಿ ಸ್ಥಾನ ನೀಡಬೇಕಿತ್ತು ಎಂಬುದು ಅನೇಕರ ಅಭಿಪ್ರಾಯವಾಗಿದೆ.

VIEW ALL

Read Next Story