ರಾಹುಲ್ ದ್ರಾವಿಡ್ ಭಾರತ ತಂಡದ ಕೋಚ್ ಆಗಿದ್ದಕ್ಕೆ ಗರಂ ಆದ್ರಾ ವಿರಾಟ್ ಕೊಹ್ಲಿ...!

ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಿರಿಯ ಆಟಗಾರರ ಜೊತೆ ಉತ್ತಮ ಸಂಬಂಧವನ್ನು ಹೊಂದಿಲ್ಲ ಎನ್ನುವ ಮಾತುಗಳು ಆಗಾಗ ಕೇಳಿಬರುತ್ತಿವೆ.ಇದಕ್ಕೆ ಪೂರಕ ಎನ್ನುವಂತೆ ಈ ಹಿಂದೆ ರಹಾನೆ ಹಾಗೂ ರೋಹಿತ್ ಶರ್ಮಾ ರಂತಹ ಆಟಗಾರರು ಕೊಹ್ಲಿ ಅವರ ಕಾರ್ಯಶೈಲಿ ಬಗ್ಗೆ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

Written by - Zee Kannada News Desk | Last Updated : Oct 16, 2021, 07:49 PM IST
  • ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಿರಿಯ ಆಟಗಾರರ ಜೊತೆ ಉತ್ತಮ ಸಂಬಂಧವನ್ನು ಹೊಂದಿಲ್ಲ ಎನ್ನುವ ಮಾತುಗಳು ಆಗಾಗ ಕೇಳಿಬರುತ್ತಿವೆ.
  • ಇದಕ್ಕೆ ಪೂರಕ ಎನ್ನುವಂತೆ ಈ ಹಿಂದೆ ರಹಾನೆ ಹಾಗೂ ರೋಹಿತ್ ಶರ್ಮಾ ರಂತಹ ಆಟಗಾರರು ಕೊಹ್ಲಿ ಅವರ ಕಾರ್ಯಶೈಲಿ ಬಗ್ಗೆ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು ಎನ್ನಲಾಗಿದೆ.
 ರಾಹುಲ್ ದ್ರಾವಿಡ್ ಭಾರತ ತಂಡದ ಕೋಚ್ ಆಗಿದ್ದಕ್ಕೆ ಗರಂ ಆದ್ರಾ ವಿರಾಟ್ ಕೊಹ್ಲಿ...! title=

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಿರಿಯ ಆಟಗಾರರ ಜೊತೆ ಉತ್ತಮ ಸಂಬಂಧವನ್ನು ಹೊಂದಿಲ್ಲ ಎನ್ನುವ ಮಾತುಗಳು ಆಗಾಗ ಕೇಳಿಬರುತ್ತಿವೆ.ಇದಕ್ಕೆ ಪೂರಕ ಎನ್ನುವಂತೆ ಈ ಹಿಂದೆ ರಹಾನೆ ಹಾಗೂ ರೋಹಿತ್ ಶರ್ಮಾ ರಂತಹ ಆಟಗಾರರು ಕೊಹ್ಲಿ ಅವರ ಕಾರ್ಯಶೈಲಿ ಬಗ್ಗೆ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವ ಕೊಹ್ಲಿ ಕೂಡ ಇದುವರೆಗೂ ತಂಡದ ನಾಯಕನಾಗಿ ಅಂತರಾಷ್ಟ್ರೀಯ ಪ್ರಮುಖ ಟೂರ್ನಿಗಳಲ್ಲಿ ಪ್ರಶಸ್ತಿಯನ್ನು ಗೆಲ್ಲುವಲ್ಲಿ ವಿಫಲರಾಗಿದ್ದಾರೆ. ಇದೆಲ್ಲವನ್ನು ಚೆನ್ನಾಗಿ ತಿಳಿದಿರುವ ಬಿಸಿಸಿಐ ಮಾತ್ರ ಈ ವಿಚಾರದಲ್ಲಿ ಸ್ಪಷ್ಟ ನಿರ್ಧಾರವನ್ನು ತೆಗೆದುಕೊಳ್ಳಲು ಮುಂದಾಗಿದೆ. ಇದೆ ಕಾರಣಕ್ಕಾಗಿ ಕೊಹ್ಲಿ ಇತ್ತೀಚಿಗೆ ಟಿ-20 ವಿಶ್ವಕಪ್ ನಂತರ ನಾಯಕತ್ವವನ್ನು ತ್ಯಜಿಸುವುದಾಗಿ ಘೋಷಿಸಿದ್ದರು.

ಇದನ್ನೂ ಓದಿ: Rahul Dravid: ಟಿ-20 ವಿಶ್ವಕಪ್ ನಂತರ ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಕೋಚ್

ಈಗ ತಂಡದಲ್ಲಿ ಸಮತೋಲನವನ್ನು ತರುವ ನಿಟ್ಟಿನಲ್ಲಿ ಬಿಸಿಸಿಐ ಈಗ ರಾಹುಲ್ ದ್ರಾವಿಡ್ (Rahul Dravid) ರಂತಹ ಆಟಗಾರರನ್ನು ಭಾರತ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಿದೆ.ಈಗಾಗಲೇ ರಾಷ್ಟ್ರೀಯ ಕ್ರಿಕೆಟ್ ಆಕಾಡೆಮಿ ಹಾಗೂ ಅಂಡರ್ 19 ನಲ್ಲಿ ತರಬೇತಿ ನೀಡುವ ಮೂಲಕ ಭಾರತ ತಂಡಕ್ಕೆ ಹೊಸ ಪ್ರತಿಭೆಗಳನ್ನು ತರುವಲ್ಲಿ ರಾಹುಲ್ ದ್ರಾವಿಡ್ ಪ್ರಮುಖ ಪಾತ್ರವಹಿಸಿದ್ದಾರೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಈಗ ಅವರನ್ನು ಭಾರತ ತಂಡಕ್ಕೆ ಕೋಚ್ ಆಗಿ ನೇಮಕ ಮಾಡಲಾಗುತ್ತಿದೆ.

ಈಗ ವಿಚಾರದ ಬಗ್ಗೆ ವಿರಾಟ್ ಕೊಹ್ಲಿ ಅವರನ್ನು ಕೇಳಿದಾಗ 'ಆ ಮುಂಭಾಗದಲ್ಲಿ ಏನಾಗುತ್ತಿದೆ ಎಂದು ನಿಖರವಾಗಿ ತಿಳಿದಿಲ್ಲ. ಯಾರೊಂದಿಗೂ ಇನ್ನೂ ವಿವರವಾದ ಚರ್ಚೆಯಿಲ್ಲ" ಎಂದು ದ್ರಾವಿಡ್ ನೇಮಕದ ಬಗ್ಗೆ ಕೊಹ್ಲಿ ಹೇಳಿದರು. 

ಯುಎಇ ಮತ್ತು ಒಮಾನ್‌ನಲ್ಲಿ ಭಾನುವಾರ ಆರಂಭವಾಗಲಿರುವ ಟಿ 20 ವಿಶ್ವಕಪ್‌ಗೂ ಮುನ್ನ ಕ್ಯಾಪ್ಟನ್‌ಗಳ ಮಾಧ್ಯಮ ಅಧಿವೇಶನದಲ್ಲಿ ಭಾರತ ತಂಡದ ನಾಯಕ ಕೊಹ್ಲಿ ಮಾತನಾಡುತ್ತಿದ್ದರು.

48 ವರ್ಷದ ದ್ರಾವಿಡ್, ಭಾರತದ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾಗಿದ್ದು, ಕಳೆದ ಆರು ವರ್ಷಗಳಿಂದ ರಾಷ್ಟ್ರೀಯ 'ಎ' ಮತ್ತು U-19 ಸೆಟಪ್‌ನ ಉಸ್ತುವಾರಿ ವಹಿಸಿಕೊಂಡಿದ್ದಾರೆ ಮತ್ತು ರಿಷಭ್ ಪಂತ್, ಅವೇಶ್ ಖಾನ್, ಪೃಥ್ವಿ ಶಾ, ಹನುಮ ವಿಹಾರಿ ಮತ್ತು ಶುಭಮನ್ ಗಿಲ್ ಅವರಂತಹ ಆಟಗಾರರು ರಾಹುಲ್ ದ್ರಾವಿಡ್ ಅಡಿಯಲ್ಲಿ ಪಳಗಿದ ಯುವ ಕ್ರಿಕೆಟಿಗರಾಗಿದ್ದಾರೆ.

ಇದನ್ನೂ ಓದಿ: T20 World Cup 2021: ಭಾರತಕ್ಕೆ ಟೂರ್ನಾಮೆಂಟ್ ಗೆಲ್ಲುವ ಪ್ರಬುದ್ಧತೆ ಬೇಕು-ಸೌರವ್ ಗಂಗೂಲಿ

ಅವರು ಪ್ರಸ್ತುತ ಬೆಂಗಳೂರಿನಲ್ಲಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿದ್ದಾರೆ ಮತ್ತು ದುಬೈನಲ್ಲಿ ತಮ್ಮ ಐಪಿಎಲ್ ಸಮಯದಲ್ಲಿ ತಮ್ಮ ಮಾಜಿ ಸಹ ಆಟಗಾರ ಮತ್ತು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಮಂಡಳಿಯ ಕಾರ್ಯದರ್ಶಿ ಜಯ್ ಶಾ ಅವರನ್ನು ಭೇಟಿ ಮಾಡಿ ವಿಸ್ತೃತ ಚರ್ಚೆ ನಡೆಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News