ನವದೆಹಲಿ: ತಮಿಳುನಾಡಿನ ನಾರಾಯಣ ಜಗದೀಸನ್ ಸೋಮವಾರದಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ತಮಿಳುನಾಡು ಮತ್ತು ಅರುಣಾಚಲ ಪ್ರದೇಶ ನಡುವಿನ ಪಂದ್ಯದಲ್ಲಿ ಅಜೇಯ 277 ರನ್ ಗಳಿಸಿ ಕ್ರಿಕೆಟ್ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.


COMMERCIAL BREAK
SCROLL TO CONTINUE READING

ಈಗ ವಿಜಯ್ ಹಜಾರೆ ಟ್ರೋಫಿಯಲ್ಲಿ, ನಾರಾಯಣ್ ಜಗದೀಸನ್ 141 ಎಸೆತಗಳಲ್ಲಿ 196.45 ಸ್ಟ್ರೈಕ್ ರೇಟ್‌ನೊಂದಿಗೆ 277 ರನ್‌ಗಳನ್ನು ಸಿಡಿಸುವ ಮೂಲಕ ಪಂದ್ಯಾವಳಿಯಲ್ಲಿ ಐದನೇ ಸತತ ಶತಕವನ್ನು ಗಳಿಸಿದ್ದಾರೆ. ಆ ಮೂಲಕ ಲಿಸ್ಟ್ ಎ ಕ್ರಿಕೆಟ್‌ನ ಇತಿಹಾಸದಲ್ಲಿ ಶ್ರೀಲಂಕಾದ ದಂತಕಥೆ ಕುಮಾರ್ ಸಂಗಕರ ಅವರ ದಾಖಲೆಯನ್ನು ಜಗದೀಶನ್  ಹಿಂದಿಕ್ಕಿದ್ದಾರೆ.


ಇದನ್ನೂ ಓದಿ: ಚುಮು ಚುಮು ಚಳಿ ನಡುವೆ ರಾಜ್ಯದ ಜನತೆಗೆ ಮತ್ತೆ ವರುಣನ ಕಾಟ- ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ


ವರದಿಗಳ ಪ್ರಕಾರ, ಅವರು ವಿಜಯ್ ಹಜಾರೆ ಟ್ರೋಫಿಯ ಒಂದೇ ಋತುವಿನಲ್ಲಿ ಸತತವಾಗಿ ಅತಿ ಹೆಚ್ಚು ಶತಕಗಳನ್ನು ಹೊಂದಿದ್ದಾರೆ, ತಲಾ ನಾಲ್ಕು ಶತಕಗಳನ್ನು ಗಳಿಸಿದ ವಿರಾಟ್ ಕೊಹ್ಲಿ, ಪೃಥ್ವಿ ಶಾ, ರುತುರಾಜ್ ಗಾಯಕ್ವಾಡ್, ದೇವದತ್ ಪಡಿಕ್ಕಲ್ ಅವರಂತಹ ಆಟಗಾರರನ್ನು ಮೀರಿಸಿದ್ದಾರೆ.27 ಅಕ್ಟೋಬರ್ 2016 ರಂದು 2016-17 ರ ರಣಜಿ ಟ್ರೋಫಿಯಲ್ಲಿ ತಮಿಳುನಾಡಿಗೆ ಪ್ರಥಮ ದರ್ಜೆಯ ಚೊಚ್ಚಲ ಪಂದ್ಯದೊಂದಿಗೆ ತಮ್ಮ ಕ್ರಿಕೆಟ್ ಪ್ರಯಾಣವನ್ನು ಪ್ರಾರಂಭಿಸಿದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.