IPL 2025: ರೋಹಿತ್ ಶರ್ಮಾ ಬದಲಿಗೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದು... ಸಿಎಸ್‌ಕೆ ಬ್ಯಾಟರ್‌ಗಳಿಗೆ ಸಿಂಹಸ್ವಪ್ನವಾಗಿ ಕಾಡಿದ ವಿಘ್ನೇಶ್‌ ಪುತ್ತೂರು ಯಾರು?

Who is Vignesh Puttur: ವಿಘ್ನೇಶ್ ಪುತ್ತೂರ್ ತಮ್ಮ ಮೊದಲ ಓವರ್‌ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರಿತುರಾಜ್ ಗಾಯಕ್ವಾಡ್ ಅವರನ್ನು ಔಟ್‌ ಮಾಡಿದ್ದರು. ಇದಾದ ನಂತರ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಕ್ರಮಣಕಾರಿ ಬ್ಯಾಟ್ಸ್‌ಮನ್ ಶಿವಂ ದುಬೆ ಕೂಡ ಔಟಾಗಿದ್ದು ಇವರ ಬೌಲಿಂಗ್‌ನಿಂದಲೇ. ಈ ಮೂಲಕ ವಿಘ್ನೇಶ್ 10 ಎಸೆತಗಳಲ್ಲಿ ಎರಡು ವಿಕೆಟ್ ಪಡೆದರು.

Written by - Bhavishya Shetty | Last Updated : Mar 24, 2025, 07:07 PM IST
    • ಎಡಗೈ ಮಣಿಕಟ್ಟಿನ ಸ್ಪಿನ್ನರ್ ವಿಘ್ನೇಶ್ ಪುತ್ತೂರು
    • ರೋಹಿತ್ ಶರ್ಮಾ ಬದಲಿಗೆ ಇಂಪ್ಯಾಕ್ಟ್‌ ಆಟಗಾರ
    • ಚೆನ್ನೈ ಬ್ಯಾಟ್ಸ್‌ಮನ್‌ಗಳಿಗೆ ಸಿಂಹಸ್ವಪ್ನವಾಗಿ ಕಾಡಿದ್ದ ವಿಘ್ನೇಶ್ ಪುತ್ತೂರು
IPL 2025: ರೋಹಿತ್ ಶರ್ಮಾ ಬದಲಿಗೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದು... ಸಿಎಸ್‌ಕೆ ಬ್ಯಾಟರ್‌ಗಳಿಗೆ ಸಿಂಹಸ್ವಪ್ನವಾಗಿ ಕಾಡಿದ ವಿಘ್ನೇಶ್‌ ಪುತ್ತೂರು ಯಾರು?
File Photo

Who is Vignesh Puttur: ಮುಂಬೈ ಇಂಡಿಯನ್ಸ್ ತಂಡವು ತಮ್ಮ ಮೊದಲ ಪಂದ್ಯದಲ್ಲಿ 24 ವರ್ಷದ ವಿಘ್ನೇಶ್ ಪುತ್ತೂರ್ ಅವರ ಮೇಲೆ ನಂಬಿಕೆ ಇಟ್ಟು, ರೋಹಿತ್ ಶರ್ಮಾ ಬದಲಿಗೆ ಇಂಪ್ಯಾಕ್ಟ್‌ ಆಟಗಾರನಾಗಿ ಅವರಿಗೆ ಐಪಿಎಲ್ ಚೊಚ್ಚಲ ಪ್ರವೇಶವನ್ನು ನೀಡಿತು. ಈ ಯುವ ಬೌಲರ್ ಆ ನಂಬಿಕೆಯನ್ನು ಸಂಪೂರ್ಣವಾಗಿ ಉಳಿಸಿಕೊಂಡಿದ್ದ. ಎಡಗೈ ಮಣಿಕಟ್ಟಿನ ಸ್ಪಿನ್ನರ್ ವಿಘ್ನೇಶ್ ಪುತ್ತೂರು ಚೆನ್ನೈ ಬ್ಯಾಟ್ಸ್‌ಮನ್‌ಗಳಿಗೆ ಸಿಂಹಸ್ವಪ್ನವಾಗಿ ಕಾಡಿದ್ದು ಸುಳ್ಳಲ್ಲ.

Add Zee News as a Preferred Source

ಇದನ್ನೂ ಓದಿ: ಕರ್ಕಾಟಕ ರಾಶಿಗೆ ಮಂಗಳನ ಪ್ರವೇಶ; ಈ 3 ರಾಶಿಯ ಮೇಲೆ ಸಂಪತ್ತಿನ ಮಳೆ, ಬಯಸಿದ್ದೆಲ್ಲಾ ಕೈ ಸೇರಲಿದೆ!!

ವಿಘ್ನೇಶ್ ಪುತ್ತೂರ್ ತಮ್ಮ ಮೊದಲ ಓವರ್‌ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರಿತುರಾಜ್ ಗಾಯಕ್ವಾಡ್ ಅವರನ್ನು ಔಟ್‌ ಮಾಡಿದ್ದರು. ಇದಾದ ನಂತರ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಕ್ರಮಣಕಾರಿ ಬ್ಯಾಟ್ಸ್‌ಮನ್ ಶಿವಂ ದುಬೆ ಕೂಡ ಔಟಾಗಿದ್ದು ಇವರ ಬೌಲಿಂಗ್‌ನಿಂದಲೇ. ಈ ಮೂಲಕ ವಿಘ್ನೇಶ್ 10 ಎಸೆತಗಳಲ್ಲಿ ಎರಡು ವಿಕೆಟ್ ಪಡೆದರು.

ಇದಾದ ನಂತರ, 15 ಎಸೆತಗಳ ನಂತರ ವಿಘ್ನೇಶ್ ಮತ್ತೊಮ್ಮೆ ಚೆನ್ನೈ ತಂಡವನ್ನು ಅಚ್ಚರಿಗೊಳಿಸಿದರು. ತಮ್ಮ ಮೂರನೇ ಓವರ್‌ನ ನಾಲ್ಕನೇ ಎಸೆತದಲ್ಲಿ ವಿಘ್ನೇಶ್ ದೀಪಕ್ ಹೂಡಾ ಅವರನ್ನು ಸ್ಪಿನ್ ಬಲೆಗೆ ಸಿಲುಕಿಸಿದರು. ಒಟ್ಟಾರೆ ವಿಘ್ನೇಶ್‌ ಅವರು, 4 ಓವರ್‌ಗಳಲ್ಲಿ 32 ರನ್‌ಗಳಿಗೆ 3 ವಿಕೆಟ್‌ಗಳನ್ನು ಪಡೆದರು.

ವಿಘ್ನೇಶ್ ಪುತ್ತೂರು ಯಾರು?

24 ವರ್ಷದ ವಿಘ್ನೇಶ್ ಪುತ್ತೂರು ಎಡಗೈ ಮಣಿಕಟ್ಟಿನ ಸ್ಪಿನ್ನರ್. ಕೇರಳದ ಮಲಪ್ಪುರಂ ಮೂಲದ ಪುತ್ತೂರಿನಲ್ಲಿ ಜನಿಸಿದ ಅವರು, 11 ನೇ ವಯಸ್ಸಿನಲ್ಲಿ ಕ್ರಿಕೆಟ್ ಆಡಲು ಪ್ರಾರಂಭಿಸಿದರು. ಇವರ ತಂದೆ ಆಟೋ ರಿಕ್ಷಾ ಚಾಲಕ. ಕೇರಳ ಕ್ರಿಕೆಟ್ ಲೀಗ್‌ನ ಉದ್ಘಾಟನಾ ಋತುವಿನಲ್ಲಿ ಅಲೆಪ್ಪಿ ರಿಪ್ಪಲ್ಸ್ ತಂಡದ ಭಾಗವಾಗಿದ್ದರು. ಆ ಪಂದ್ಯಾವಳಿಯಲ್ಲಿ ಪುತೂರ್ ಕೇವಲ ಮೂರು ವಿಕೆಟ್‌ಗಳನ್ನು ಮಾತ್ರ ಪಡೆದಿದ್ದರು, ಆದರೆ ಮುಂಬೈ ಇಂಡಿಯನ್ಸ್ ಸ್ಕೌಟ್‌ಗಳ ಗಮನ ಸೆಳೆದಿದ್ದರು. ವಿಶೇಷವೆಂದರೆ, ವಿಘ್ನೇಶ್ ಪುತ್ತೂರು ಇನ್ನೂ ದೇಶೀಯ ಕ್ರಿಕೆಟ್‌ನಲ್ಲಿ ಕೇರಳವನ್ನು ಪ್ರತಿನಿಧಿಸಿಲ್ಲ. ಆದರೆ ಈಗಾಗಲೇ ಐಪಿಎಲ್ ಒಪ್ಪಂದವನ್ನು ಪಡೆದಿದ್ದಾರೆ.

ಇದನ್ನೂ ಓದಿ: ಖಾಲಿ ಹೊಟ್ಟೆಯಲ್ಲಿ ಶುಗರ್ ಲೆವೆಲ್ 250 mg/dl ಕ್ಕಿಂತ ಹೆಚ್ಚಿದ್ಯಾ... ಚಿಂತೆಬಿಡಿ, ಈ 2 ತರಕಾರಿಯನ್ನು ಹಸಿಯಾಗಿ ತಿನ್ನಿ ಕೂಡಲೇ ನಿಯಂತ್ರಣಕ್ಕೆ ಬರುತ್ತೆ ಬ್ಲಡ್ ಶುಗರ್

ಅವರನ್ನು ಐಪಿಎಲ್ ಪ್ರಸ್ತುತ ಸೀಸನ್‌ನಲ್ಲಿ ಮುಂಬೈ ಇಂಡಿಯನ್ಸ್ 30 ಲಕ್ಷ ಮೂಲ ಬೆಲೆಗೆ ಆಯ್ಕೆ ಮಾಡಿತು. ಚೆನ್ನೈ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ವಿಘ್ನೇಶ್ ಪುತ್ತೂರ್ ಅವರನ್ನು ಇಂಪ್ಯಾಕ್ಟ್‌ ಆಟಗಾರನಾಗಿ ಬಳಸಿಕೊಂಡಿತು. ಅನುಭವಿ ಬ್ಯಾಟ್ಸ್‌ಮನ್ ಮತ್ತು ಮುಂಬೈನ ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ಕೈಬಿಟ್ಟು ಪುತ್ತೂರು ಅವರನ್ನು ಮೈದಾನಕ್ಕೆ ಕಳುಹಿಸಲಾಯಿತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

 

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News