ಟೀಂ ಇಂಡಿಯಾಗೆ ಗೆಲುವು ತಂದುಕೊಟ್ಟಿದ್ದು ರೋಹಿತ್ ಅಲ್ಲ, ಈ ಆಟಗಾರ-ಈತನಿಗೇ ಸೇರಬೇಕು ಪಂದ್ಯಶ್ರೇಷ್ಠ ಪ್ರಶಸ್ತಿ!

India vs England, cricket news in kannada: ಭಾರತ ತಂಡ ನಿಗದಿತ 50 ಓವರ್‌’ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 229 ರನ್ ಗಳಿಸಿತ್ತು. ಸುಲಭ ಗುರಿಯನ್ನು ಬೆನ್ನತ್ತಿದ್ದ ಇಂಗ್ಲೆಂಡ್ ತಂಡಕ್ಕೆ ಭಾರತದ ಬೌಲರ್’ಗಳು ಸಿಂಹಸ್ವಪ್ನವಾಗಿ ಕಾಡಿದ್ದಂತು ಸುಳ್ಳಲ್ಲ. ಒಟ್ಟಾರೆಯಾಗಿ ಆಂಗ್ಲರು 34.5 ಓವರ್‌’ಗಳಲ್ಲಿ 129 ರನ್‌ ಗಳಿಸಿ ಆಲೌಟ್ ಆದರು.

Written by - Bhavishya Shetty | Last Updated : Oct 29, 2023, 11:38 PM IST
    • ವಿಶ್ವಕಪ್’ನಲ್ಲಿ ಸತತ ಆರನೇ ಗೆಲುವು ದಾಖಲಿಸಿದ ಭಾರತ
    • ಭಾರತ ಪಾಯಿಂಟ್ಸ್ ಟೇಬಲ್’ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ
    • ಭಾರತ ತಂಡ ನಿಗದಿತ 50 ಓವರ್‌’ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 229 ರನ್ ಗಳಿಸಿತ್ತು
ಟೀಂ ಇಂಡಿಯಾಗೆ ಗೆಲುವು ತಂದುಕೊಟ್ಟಿದ್ದು ರೋಹಿತ್ ಅಲ್ಲ, ಈ ಆಟಗಾರ-ಈತನಿಗೇ ಸೇರಬೇಕು ಪಂದ್ಯಶ್ರೇಷ್ಠ ಪ್ರಶಸ್ತಿ!  title=
rohit sharma

India vs England: ಟೀಂ ಇಂಡಿಯಾ ಐಸಿಸಿ ಏಕದಿನ ವಿಶ್ವಕಪ್’ನಲ್ಲಿ ಸತತ ಆರನೇ ಗೆಲುವು ದಾಖಲಿಸಿದೆ. ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು 100 ರನ್‌’ಗಳಿಂದ ಸೋಲಿಸಿದ ಭಾರತ ಪಾಯಿಂಟ್ಸ್ ಟೇಬಲ್’ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.

ಇದನ್ನೂ ಓದಿ: ವಿಶ್ವಕಪ್ 2023ರ ಸೆಮಿಫೈನಲ್ ಪ್ರವೇಶಕ್ಕೆ ಟೀಂ ಇಂಡಿಯಾ ಇನ್ನೆಷ್ಟು ಪಂದ್ಯ ಗೆಲ್ಲಬೇಕು ಗೊತ್ತೇ?

ಭಾರತ ತಂಡ ನಿಗದಿತ 50 ಓವರ್‌’ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 229 ರನ್ ಗಳಿಸಿತ್ತು. ಸುಲಭ ಗುರಿಯನ್ನು ಬೆನ್ನತ್ತಿದ್ದ ಇಂಗ್ಲೆಂಡ್ ತಂಡಕ್ಕೆ ಭಾರತದ ಬೌಲರ್’ಗಳು ಸಿಂಹಸ್ವಪ್ನವಾಗಿ ಕಾಡಿದ್ದಂತು ಸುಳ್ಳಲ್ಲ. ಒಟ್ಟಾರೆಯಾಗಿ ಆಂಗ್ಲರು 34.5 ಓವರ್‌’ಗಳಲ್ಲಿ 129 ರನ್‌ ಗಳಿಸಿ ಆಲೌಟ್ ಆದರು. ಇನ್ನು ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಪಂದ್ಯ ಶ್ರೇಷ್ಠರಾಗಿ ಆಯ್ಕೆಯಾದರು.

20 ವರ್ಷಗಳ ಬಳಿಕ ಟೀಂ ಇಂಡಿಯಾ ವಿಶ್ವಕಪ್‌’ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದೆ. ಇದಕ್ಕೂ ಮುನ್ನ 2003ರ ವಿಶ್ವಕಪ್‌’ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಗೆಲುವು ಸಾಧಿಸಿತ್ತು. ಇನ್ನು ಇಂದು ಸಾಧಿಸಿದ ವಿಜಯದಲ್ಲಿ ರೋಹಿತ್ ಶರ್ಮಾ, ವೇಗಿ ಮೊಹಮ್ಮದ್ ಶಮಿ ಮತ್ತು ಜಸ್ಪ್ರೀತ್ ಬುಮ್ರಾ ಅವರ ಕೊಡುಗೆ ಅಪಾರವಾಗಿದೆ.

ಶಮಿ 4 ವಿಕೆಟ್ ಪಡೆದರೆ, ಜಸ್ಪ್ರೀತ್ ಬುಮ್ರಾ 3 ವಿಕೆಟ್ ಕಬಳಿಸಿದ್ದರು, ಇನ್ನು ಸ್ಪಿನ್ನರ್ ಕುಲದೀಪ್ ಯಾದವ್ 2 ವಿಕೆಟ್ ಪಡೆದಿದ್ದರು. ಬ್ಯಾಟಿಂಗ್’ನಲ್ಲಿ ನಾಯಕ ರೋಹಿತ್ ಶರ್ಮಾ 87 ರನ್‌’ಗಳ ಗರಿಷ್ಠ ಕೊಡುಗೆ ನೀಡಿದರು. ಇವರಲ್ಲದೆ ಸೂರ್ಯಕುಮಾರ್ ಯಾದವ್ 49 ರನ್ ಮತ್ತು ಕೆಎಲ್ ರಾಹುಲ್ 39 ರನ್ ಗಳಿಸಿದರು. ಇಂಗ್ಲೆಂಡ್ ಪರ ಡೇವಿಡ್ ವಿಲ್ಲಿ 3 ವಿಕೆಟ್ ಪಡೆದರೆ, ಕ್ರಿಸ್ ವೋಕ್ಸ್ ಮತ್ತು ಆದಿಲ್ ರಶೀದ್ ತಲಾ 2 ವಿಕೆಟ್ ಪಡೆದರು.

ಈತನಿಗೇ ಸೇರಬೇಕು ಪಂದ್ಯಶ್ರೇಷ್ಠ ಪ್ರಶಸ್ತಿ!

ನಾಯಕ ಮತ್ತು ಆರಂಭಿಕ ರೋಹಿತ್ ಶರ್ಮಾ ಟೀಂ ಇಂಡಿಯಾ ಸಂಕಷ್ಟದಲ್ಲಿದ್ದಾಗ, ಜವಾಬ್ದಾರಿಯುವ ಬ್ಯಾಟಿಂಗ್ ಮಾಡಿದ್ದರು. 40 ರನ್‌’ಗಳಿಗೆ 3 ವಿಕೆಟ್‌’ಗಳನ್ನು ಕಳೆದುಕೊಂಡಿದ್ದ ಭಾರತಕ್ಕೆ ಆಸರೆಯಾಗಿದ್ದು ರೋಹಿತ್ ಶರ್ಮಾ. ಕ್ರೀಸ್’ನಲ್ಲಿ ಭದ್ರವಾಗಿ ನಿಂತ ಅವರು 101 ಎಸೆತಗಳಲ್ಲಿ 10 ಬೌಂಡರಿ ಮತ್ತು 3 ಸಿಕ್ಸರ್‌ ಒಳಗೊಂಡಂತೆ 87 ರನ್ ಕಲೆ ಹಾಕಿದರು. ಈ ಮೂಲಕ ಭಾರತ 229 ರನ್ ಗಳಿಸಲು ಶಕ್ತವಾಯಿತು. ಆದರೆ, ಈ ಪಂದ್ಯದಲ್ಲಿ ವೇಗಿ ಮೊಹಮ್ಮದ್ ಶಮಿ ಅವರನ್ನು ಪಂದ್ಯಶ್ರೇಷ್ಠ ಆಟಗಾರನನ್ನಾಗಿ ಆಯ್ಕೆ ಮಾಡಬೇಕಿತ್ತು ಎಂದು ಸಾಮಾಜಿಕ ಮಾಧ್ಯಮದಲ್ಲಿ ಫ್ಯಾನ್ಸ್ ಅಭಿಪ್ರಾಯ ಹೊರಹಾಕಿದ್ದಾರೆ.

ಇದನ್ನೂ ಓದಿ: ಕಳಪೆ ದಾಖಲೆ ಬರೆದ ವಿರಾಟ್! ತಾಳ್ಮೆ ಕಳೆದುಕೊಂಡು ಡ್ರೆಸ್ಸಿಂಗ್ ರೂಂನಲ್ಲಿ ಕೋಪ ಹೊರಹಾಕಿದ್ದು ಹೀಗೆ…

ಟೀಂ ಇಂಡಿಯಾ ಪರ ವೇಗಿ ಜಸ್ಪ್ರೀತ್ ಬುಮ್ರಾ ಮೊದಲ ವಿಕೆಟ್ ಕಬಳಿಸಿದರು. ಇನ್ನಿಂಗ್ಸ್‌’ನ 5 ನೇ ಓವರ್‌’ನ ಸತತ ಎಸೆತಗಳಲ್ಲಿ ಡೇವಿಡ್ ಮಲಾನ್ ಮತ್ತು ಜೋ ರೂಟ್ ಅವರನ್ನು ಔಟ್ ಮಾಡಿದರು. ಆ ಬಳಿಕ ಬೌಲಿಂಗ್ ಶುರು ಮಾಡಿದ ಶಮಿ 4 ವಿಕೆಟ್ ಕಿತ್ತು ಆಂಗ್ಲರಿಗೆ ಸೋಲಿನ ರುಚಿ ತೋರಿಸಲು ಮುಂದಾದರು. ಬೆನ್ ಸ್ಟೋಕ್ಸ್, ಆರಂಭಿಕ ಜಾನಿ ಬೈರ್‌ಸ್ಟೋವ್, ಮೊಯಿನ್ ಅಲಿ ಮತ್ತು ಆದಿಲ್ ರಶೀದ್’ಗೆ ಪೆವಿಲಿಯನಗ ದಾರಿ ತೋರಿಸಿದ್ದು ಶಮಿ. ತಮ್ಮ 7 ಓವರ್’ನಲ್ಲಿ 2 ಮೇಡನ್ ಓವರ್ ಬೌಲ್ ಮಾಡಿ, ಕೇವಲ 22 ರನ್ ನೀಡಿ 4 ವಿಕೆಟ್ ಪಡೆದಿದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News