ಸೆಮಿಫೈನಲ್’ಗೂ ಮುನ್ನ ಟೀಂ ಇಂಡಿಯಾಗೆ 4 ಆಲ್’ರೌಂಡರ್ಸ್ ಎಂಟ್ರಿ! ಒಬ್ಬರಿಂದ ಒಬ್ಬರು ಚತುರರೇ-ರೋಹಿತ್ ಪಡೆಗೆ ಆನೆಬಲ

Team India Semi Final: ಭಾರತ ತಂಡ ಈ ಪಂದ್ಯದಲ್ಲಿ ಹೆಚ್ಚಿನ ಪ್ರಯೋಗಗಳನ್ನೇ ಮಾಡಿತ್ತು. ಒಂಬತ್ತನೇ ಪಂದ್ಯದಲ್ಲಿ ಒಂಬತ್ತು ಬೌಲರ್’ಗಳನ್ನು ಕಣಕ್ಕಿಳಿಸಿದ ರೋಹಿತ್ ಶರ್ಮಾ ತಂಡದ ಭವಿಷ್ಯವನ್ನು ರೂಪಿಸುವ ಅದ್ಭುತ ಪ್ಲ್ಯಾನ್ ಮಾಡಿದ್ದರು. ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದರು.

Written by - Bhavishya Shetty | Last Updated : Nov 13, 2023, 03:28 PM IST
    • ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್ ಟೂರ್ನಿ ಅಂತಿಮ ಹಂತಕ್ಕೆ ಬಂದು ತಲುಪಿದೆ
    • ಲೀಗ್ ಹಂತದ ಕೊನೆಯ ಪಂದ್ಯ ಭಾರತ ಮತ್ತು ನೆದರ್ಲ್ಯಾಂಡ್ ವಿರುದ್ಧ ನಡೆದಿತ್ತು
    • ಭಾರತ ತಂಡ ಈ ಪಂದ್ಯದಲ್ಲಿ ಹೆಚ್ಚಿನ ಪ್ರಯೋಗಗಳನ್ನೇ ಮಾಡಿತ್ತು
ಸೆಮಿಫೈನಲ್’ಗೂ ಮುನ್ನ ಟೀಂ ಇಂಡಿಯಾಗೆ 4 ಆಲ್’ರೌಂಡರ್ಸ್ ಎಂಟ್ರಿ! ಒಬ್ಬರಿಂದ ಒಬ್ಬರು ಚತುರರೇ-ರೋಹಿತ್ ಪಡೆಗೆ ಆನೆಬಲ title=
Team India

Team India Semi Final: ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್ ಟೂರ್ನಿ ಅಂತಿಮ ಹಂತಕ್ಕೆ ಬಂದು ತಲುಪಿದೆ. ಕಳೆದ ದಿನ ಟೂರ್ನಿಯ ಲೀಗ್ ಹಂತದ ಕೊನೆಯ ಪಂದ್ಯ ಭಾರತ ಮತ್ತು ನೆದರ್ಲ್ಯಾಂಡ್ ವಿರುದ್ಧ ನಡೆದಿತ್ತು. ಈ ಪಂದ್ಯದಲ್ಲಿ ಭಾರತ ತಂಡ 160 ರನ್’ಗಳ ಭರ್ಜರಿ ಜಯ ಸಾಧಿಸಿದೆ.

ಇದನ್ನೂ ಓದಿ:  ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ಪಾಕಿಸ್ತಾನಕ್ಕೆ ಸಿಕ್ಕ ದುಡ್ಡು ಎಷ್ಟು ಕೋಟಿ ಗೊತ್ತಾ? ಕೇಳಿದ್ರೆ ದಂಗಾಗೋದು ಗ್ಯಾರಂಟಿ

ಅಂದಹಾಗೆ ಭಾರತ ತಂಡ ಈ ಪಂದ್ಯದಲ್ಲಿ ಹೆಚ್ಚಿನ ಪ್ರಯೋಗಗಳನ್ನೇ ಮಾಡಿತ್ತು. ಒಂಬತ್ತನೇ ಪಂದ್ಯದಲ್ಲಿ ಒಂಬತ್ತು ಬೌಲರ್’ಗಳನ್ನು ಕಣಕ್ಕಿಳಿಸಿದ ರೋಹಿತ್ ಶರ್ಮಾ ತಂಡದ ಭವಿಷ್ಯವನ್ನು ರೂಪಿಸುವ ಅದ್ಭುತ ಪ್ಲ್ಯಾನ್ ಮಾಡಿದ್ದರು. ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದರು.

ನೆದರ್ಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಅದ್ಭುತ ಪ್ರದರ್ಶನ ನೀಡಿತ್ತು. ಇನ್ನು ಈ ಪಂದ್ಯದಲ್ಲಿ ಟೀಂ ಇಂಡಿಯಾದ ಅಗ್ರಕ್ರಮಾಂಕದ 5 ಮಂದಿ ಬ್ಯಾಟ್ಸ್’ಮನ್ ಗಳು ಕೂಡ ಅರ್ಧಶತಕ ಅಥವಾ ಅದಕ್ಕಿಂತ ಹೆಚ್ಚಿನ ಸ್ಕೋರ್ ಮಾಡಿದ್ದಾರೆ. ಇದು ವಿಶ್ವಕಪ್ ಇತಿಹಾಸದಲ್ಲಿ ಯಾವೊಂದು ತಂಡವೂ ಮಾಡಿರದ ಸಾಧನೆಯಾಗಿದೆ.

ಇನ್ನು ಟೀಂ ಇಂಡಿಯಾದ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ ಹಾಗೂ ರವೀಂದ್ರ ಜಡೇಜಾ ಇದ್ದಾರೆ. ಇವರ ಹೊರತಾಗಿ ಕಳೆದ ದಿನ ಬೌಲಿಂಗ್ ಮಾಡಿದ್ದು, ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್, ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್.

ಇದನ್ನೂ ಓದಿ: ವಿರಾಟ್ ಕೊಹ್ಲಿಯನ್ನು ಕ್ಲೀನ್ ಬೌಲ್ಡ್ ಮಾಡಿದ ನೆದರ್ಲ್ಯಾಂಡ್’ನ ಆ ಬೌಲರ್ ಯಾರು ಗೊತ್ತಾ? ಈತನಿಗಿದೆ RCB ನಂಟು

ಇದರಲ್ಲಿ ವಿರಾಟ್ ಮತ್ತು ರೋಹಿತ್ ಶರ್ಮಾ ವಿಕೆಟ್ ಕಿತ್ತು ಟೀಂ ಇಂಡಿಯಾಗೆ ಕೊಡುಗೆ ನೀಡಿದ್ದರು. ಆದರೆ ಈ ಪಂದ್ಯವನ್ನು ವೀಕ್ಷಿಸಿದ ಬಳಿಕ ಕ್ರಿಕೆಟ್ ಅಭಿಮಾನಿಗಳಿಗೆ ಅನಿಸಿದ್ದು, ಸೆಮಿಫೈನಲ್’ಗೂ ಮುನ್ನ ಟೀಂ ಇಂಡಿಯಾಗೆ ನಾಲ್ವರು ಆಲ್’ರೌಂಡರ್ಸ್ ಸಿಕ್ಕೇಬಿಟ್ಟರು ಎಂದು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News