“ಭಾರತವನ್ನು ಸೋಲಿಸಿದ್ರೆ ನಿಮ್ಮ ಜೊತೆ ಡೇಟ್ ಮಾಡ್ತೇನೆ”… ಬಾಂಗ್ಲಾ ಆಟಗಾರರಿಗೆ ಪಾಕ್ ನಟಿಯ ಬಂಪರ್ ಆಫರ್

Pakistani actress Sehar Shinwari: ಅಕ್ಟೋಬರ್ 19 ರಂದು ಪುಣೆಯಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯ ನಡೆಯಲಿದೆ. ಭಾರತ ತಂಡ ಆಡಿದ ಮೂರೂ ಪಂದ್ಯಗಳನ್ನು ಗೆದ್ದಿದೆ. ಇದೀಗ ಭಾರತಕ್ಕೆ ಸೆಮಿಫೈನಲ್ ಹಾದಿ ಸುಲಭವಾಗುತ್ತಿದೆ.

Written by - Bhavishya Shetty | Last Updated : Oct 18, 2023, 07:33 PM IST
    • ಪಾಕಿಸ್ತಾನಿ ನಟಿ ಸೆಹರ್ ಶಿನ್ವಾರಿ ಪೋಸ್ಟ್
    • “ಭಾರತವನ್ನು ಸೋಲಿಸಿದ್ರೆ ನಿಮ್ಮ ಜೊತೆ ಡೇಟ್ ಮಾಡ್ತೇನೆ”
    • ಅಕ್ಟೋಬರ್ 19 ರಂದು ಪುಣೆಯಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯ
“ಭಾರತವನ್ನು ಸೋಲಿಸಿದ್ರೆ ನಿಮ್ಮ ಜೊತೆ ಡೇಟ್ ಮಾಡ್ತೇನೆ”… ಬಾಂಗ್ಲಾ ಆಟಗಾರರಿಗೆ ಪಾಕ್ ನಟಿಯ ಬಂಪರ್ ಆಫರ್ title=
Sehar Shinwari offer to Bangaldesh Players

Pakistani actress Sehar Shinwari: ಪಾಕಿಸ್ತಾನಿ ನಟಿ ಸೆಹರ್ ಶಿನ್ವಾರಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಶೇರ್ ಮಾಡಿಕೊಂಡಿದ್ದಾರೆ. ಭಾರತ ತಂಡದ ಮುಂದಿನ ಪಂದ್ಯವು ಬಾಂಗ್ಲಾದೇಶ ತಂಡದೊಂದಿಗೆ ಅಕ್ಟೋಬರ್ 19 ರಂದು ನಡೆಯಲಿದೆ. ಅದಕ್ಕೂ ಮುನ್ನ ಪಾಕಿಸ್ತಾನಿ ನಟಿ ಸೆಹರ್ ಶಿನ್ವಾರಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ವಿರಾಟ್ ಕೊಹ್ಲಿ ಪ್ರಕಾರ ಈ ಶ್ರೇಷ್ಠ ಆಟಗಾರನೇ ವಿಶ್ವದ ಅತ್ಯಂತ ಅಪಾಯಕಾರಿ ಕ್ರಿಕೆಟಿಗ

"ಇನ್ಶಾ ಅಲ್ಲಾಹ್.. ನನ್ನ ಬಂಗಾಳಿ ಸಹೋದರರು ಮುಂದಿನ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳುತ್ತಾರೆ…ಅವರ ತಂಡ ಭಾರತವನ್ನು ಸೋಲಿಸುವಲ್ಲಿ ಯಶಸ್ವಿಯಾದರೆ ನಾನು ಢಾಕಾಕ್ಕೆ ಹೋಗಿ ಬೆಂಗಾಲಿ ಹುಡುಗನೊಂದಿಗೆ ಫಿಶ್ ಡಿನ್ನರ್ ಡೇಟ್ ಮಾಡುತ್ತೇನೆ" ಎಂದು ಬರೆದಿದ್ದಾರೆ. ಸೆಹರ್ ಶಿನ್ವಾರಿ ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅಕ್ಟೋಬರ್ 19 ರಂದು ಪುಣೆಯಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯ ನಡೆಯಲಿದೆ. ಭಾರತ ತಂಡ ಆಡಿದ ಮೂರೂ ಪಂದ್ಯಗಳನ್ನು ಗೆದ್ದಿದೆ. ಇದೀಗ ಭಾರತಕ್ಕೆ ಸೆಮಿಫೈನಲ್ ಹಾದಿ ಸುಲಭವಾಗುತ್ತಿದೆ. ಬಾಂಗ್ಲಾದೇಶದ ವಿರುದ್ಧವೂ ಭಾರತ ಗೆದ್ದರೆ ಭಾರತಕ್ಕೆ ಸೆಮಿಫೈನಲ್ ಹಾದಿ ತೆರೆದುಕೊಳ್ಳಲಿದೆ. ವಿಶ್ವಕಪ್‌’ನ ಸೆಮಿಫೈನಲ್‌’ಗೆ ತಲುಪಲು, ಯಾವುದೇ ತಂಡವು ಕನಿಷ್ಠ 7 ಪಂದ್ಯಗಳನ್ನು ಗೆಲ್ಲಬೇಕು.

ಇನ್ನು ಉಭಯ ತಂಡಗಳ ನಡುವೆ 40 ಪಂದ್ಯಗಳು ನಡೆದಿವೆ. ಇದರಲ್ಲಿ ಭಾರತ 31 ಗೆದ್ದಿದ್ದು, ಬಾಂಗ್ಲಾದೇಶ ತಂಡ 8 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಒಂದು ಪಂದ್ಯದಲ್ಲಿ ಫಲಿತಾಂಶ ಬಂದಿಲ್ಲ.

ಇದನ್ನೂ ಓದಿ:  ICC Ranking ಪಟ್ಟಿ ರಿಲೀಸ್: 11 ರಿಂದ 6ನೇ ಸ್ಥಾನಕ್ಕೆ ಜಿಗಿದ ರೋಹಿತ್

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಲೋಕೇಶ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್, ಸೂರ್ಯಕುಮಾರ್ ಯಾದವ್.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

 

 

Trending News