ಧರ್ಮಶಾಲಾದಲ್ಲಿ ನೆಟ್ ಪ್ರಾಕ್ಟೀಸ್ ಮಾಡುತ್ತಿದ್ದ ಇಶಾನ್ ಕಿಶನ್’ಗೆ ಜೇನುನೊಣ ಕಡಿತ!

Ishan Kishan Bee Attack: ಧರ್ಮಶಾಲಾದಲ್ಲಿ ನ್ಯೂಜಿಲೆಂಡ್ ವಿರುದ್ಧದ ಐಸಿಸಿ ಏಕದಿನ ವಿಶ್ವಕಪ್ ಪಂದ್ಯ ನಾಳೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನೆಟ್ ಪ್ರಾಕ್ಟೀಸ್ ಮಾಡುತ್ತಿದ್ದಾಗ ಇಶಾನ್ ಕಿಶನ್ ಅವರ ಕುತ್ತಿಗೆಗೆ ಜೇನುನೊಣ ಕಚ್ಚಿದೆ. ಈ ಕಾರಣದಿಂದಾಗಿ ಅಭ್ಯಾಸವನ್ನು ಮಧ್ಯದಲ್ಲಿಯೇ ತೊರೆದಿದ್ದಾರೆ.

Written by - Bhavishya Shetty | Last Updated : Oct 21, 2023, 08:22 PM IST
    • ನ್ಯೂಜಿಲೆಂಡ್ ವಿರುದ್ಧದ ಐಸಿಸಿ ಏಕದಿನ ವಿಶ್ವಕಪ್ ಪಂದ್ಯ ನಾಳೆ ನಡೆಯಲಿದೆ
    • ಇಶಾನ್ ಕಿಶನ್ ನೆಟ್ ಪ್ರಾಕ್ಟೀಸ್ ಮಾಡುತ್ತಿದ್ದ ವೇಳೆ ಜೇನುನೊಣ ಕಚ್ಚಿದೆ
    • ಜೇನುನೊಣ ಕಚ್ಚಿದ ತಕ್ಷಣ ನೋವಿನಿಂದ ಬ್ಯಾಟ್ ಅನ್ನು ಎಸೆದಿದ್ದಾರೆ
ಧರ್ಮಶಾಲಾದಲ್ಲಿ ನೆಟ್ ಪ್ರಾಕ್ಟೀಸ್ ಮಾಡುತ್ತಿದ್ದ ಇಶಾನ್ ಕಿಶನ್’ಗೆ ಜೇನುನೊಣ ಕಡಿತ!  title=
ishan kishan

Ishan Kishan Bee Attack: ಭಾರತ ಕ್ರಿಕೆಟ್ ತಂಡ ಭಾನುವಾರ ನ್ಯೂಜಿಲೆಂಡ್ ವಿರುದ್ಧ ಏಕದಿನ ವಿಶ್ವಕಪ್ ಪಂದ್ಯವನ್ನು ಆಡಲಿದೆ. ಅದ್ಭುತ ಓಪನರ್ ರೋಹಿತ್ ಶರ್ಮಾ ಸಾರಥ್ಯದ ತಂಡ ಈ ಟೂರ್ನಿಯಲ್ಲಿ ಇದುವರೆಗೆ ಯಾವುದೇ ಪಂದ್ಯವನ್ನು ಸೋತಿಲ್ಲ. ಆದರೆ ಇದೀಗ ಸುದ್ದಿಯೊಂದು ಹೊರಬಿದ್ದಿದ್ದು, ತಂಡದ ಯುವ ಆಟಗಾರ ಇಶಾನ್ ಕಿಶನ್ ನೆಟ್ ಪ್ರಾಕ್ಟೀಸ್ ಮಾಡುತ್ತಿದ್ದ ವೇಳೆ ಜೇನುನೊಣ ಕಚ್ಚಿದೆ.

ಇದನ್ನೂ ಓದಿ: ಕೀವೀಸ್ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ 11 ಪ್ರಕಟ: ಪಾಂಡ್ಯ ಬದಲಿಗೆ ಆಡಲಿದ್ದಾರೆ ಈ ವೇಗಿ

ಧರ್ಮಶಾಲಾದಲ್ಲಿ ನ್ಯೂಜಿಲೆಂಡ್ ವಿರುದ್ಧದ ಐಸಿಸಿ ಏಕದಿನ ವಿಶ್ವಕಪ್ ಪಂದ್ಯ ನಾಳೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನೆಟ್ ಪ್ರಾಕ್ಟೀಸ್ ಮಾಡುತ್ತಿದ್ದಾಗ ಇಶಾನ್ ಕಿಶನ್ ಅವರ ಕುತ್ತಿಗೆಗೆ ಜೇನುನೊಣ ಕಚ್ಚಿದೆ. ಈ ಕಾರಣದಿಂದಾಗಿ ಅಭ್ಯಾಸವನ್ನು ಮಧ್ಯದಲ್ಲಿಯೇ ತೊರೆದಿದ್ದಾರೆ.

ಕಿಶನ್‌’ಗೆ ಜೇನುನೊಣ ಕಚ್ಚಿದ ತಕ್ಷಣ ನೋವಿನಿಂದ ಬ್ಯಾಟ್ ಅನ್ನು ಎಸೆದಿದ್ದಾರೆ. ಕೆಲವು ನಿಮಿಷಗಳಲ್ಲಿ ಫಿಸಿಯೋ ಕೂಡ ಆಗಮಿಸಿ ತಪಾಸಣೆ ಮಾಡಿದ್ದಾರೆ.

ಇನ್ನು ಗಾಯಾಳು ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ತಂಡದಲ್ಲಿ ಸ್ಥಾನಕ್ಕಾಗಿ ಆಕಾಂಕ್ಷಿಗಳಾಗಿದ್ದಾರೆ.

ಇನ್ನೊಂದೆಡೆ ಅಭ್ಯಾಸದ ಸಮಯದಲ್ಲಿ ಸೂರ್ಯಕುಮಾರ್ ಯಾದವ್ ಅವರ ಬಲ ಮಣಿಕಟ್ಟಿನ ಮೇಲೆ ಚೆಂಡು ಬಡಿದ ಕಾರಣ ಅವರೂ ಸಹ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. 

ಇದನ್ನೂ ಓದಿ: ಮುಂದಿನ ಒಂದೂವರೆ ವರ್ಷ ಈ ರಾಶಿಗೆ ಅದೃಷ್ಟದ ಕಾಲ: ಉಕ್ಕಿಬರಲಿದೆ ಧನಸಂಪತ್ತು, ಕಷ್ಟವೇ ಇಲ್ಲದ ಸುಖೀಜೀವನ ಪ್ರಾಪ್ತಿ

ಭಾರತ ತಂಡವು ಅಕ್ಟೋಬರ್ 22 ರಂದು ಧರ್ಮಶಾಲಾದ HPCA ಸ್ಟೇಡಿಯಂನಲ್ಲಿ ನ್ಯೂಜಿಲೆಂಡ್ ವಿರುದ್ಧ ಪಂದ್ಯವನ್ನು ಆಡಲಿದೆ. ಭಾರತ ಇದುವರೆಗೆ ಟೂರ್ನಿಯಲ್ಲಿ ಆಡಿದ ನಾಲ್ಕೂ ಪಂದ್ಯಗಳನ್ನು ಗೆದ್ದಿದೆ. ಮತ್ತೊಂದೆಡೆ ನ್ಯೂಜಿಲೆಂಡ್ ಕೂಡ ಆಡಿರುವ ಎಲ್ಲಾ ನಾಲ್ಕು ಪಂದ್ಯಗಳನ್ನು ಗೆದ್ದಿದೆ. ಪ್ರಸ್ತುತ ಉತ್ತಮ ನೆಟ್ ರನ್ ರೇಟ್‌’ನಿಂದ ನ್ಯೂಜಿಲೆಂಡ್ ತಂಡ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News