KL Rahul Vice Captain: ವಿಶ್ವಕಪ್ ಮಧ್ಯೆಯೇ ಗಾಯದ ಕಾರಣದಿಂದಾಗಿ ಟೀಂ ಇಂಡಿಯಾದ ಉಪನಾಯಕ ಹಾರ್ದಿಕ್ ಪಾಂಡ್ಯ ಟೂರ್ನಿಯಿಂದ ಹೊರಗುಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಕೆಎಲ್ ರಾಹುಲ್ ಅವರನ್ನು ಉಪನಾಯಕರನ್ನಾಗಿ ನೇಮಿಸಿದೆ. ಪ್ರಸ್ತುತ ICC ಪುರುಷರ ಕ್ರಿಕೆಟ್ ವಿಶ್ವಕಪ್ 2023ಕ್ಕಾಗಿ ಮಾತ್ರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ:  ಬಾಳೆ ಎಲೆಯಲ್ಲಿ ಊಟ ಮಾಡಿದ್ರೆ ಈ ಮಾರಕ ಕಾಯಿಲೆಗೆ ಸಿಗುತ್ತೆ ಪರ್ಮನೆಂಟ್ ಪರಿಹಾರ!


ಏಕದಿನ ವಿಶ್ವಕಪ್‌’ನ ಉಳಿದ ಪಂದ್ಯಗಳಿಂದ ಪಾಂಡ್ಯ ಹೊರಗುಳಿದಿದ್ದಾರೆ ಎಂಬುದನ್ನು ಶನಿವಾರದಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಖಚಿತಪಡಿಸಿದೆ. ಅಕ್ಟೋಬರ್ 19 ರಂದು ಬಾಂಗ್ಲಾದೇಶ ವಿರುದ್ಧದ ಲೀಗ್ ಪಂದ್ಯದಲ್ಲಿ ಎಡ ಪಾದದ ಗಾಯಕ್ಕೆ ತುತ್ತಾಗಿದ್ದರು.


ಮಾಧ್ಯಮ ವರದಿಯ ಪ್ರಕಾರ, ರಾಹುಲ್ ಇನ್ಮುಂದೆ ಉಪನಾಯಕನಾಗಿ ಬೌಲರ್‌’ಗಳು ಮತ್ತು ಬ್ಯಾಟ್ಸ್‌ಮನ್‌’ಗಳ ಎಲ್ಲಾ ತಂಡದ ಸಭೆಗಳಿಗೆ ಹಾಜರಾಗುತ್ತಾರೆ ಮತ್ತು ತಂಡದ ಆಡಳಿತವು ಎಲ್ಲಾ ಪ್ರಮುಖ ನಿರ್ಧಾರಗಳಲ್ಲಿ ಅವರನ್ನು ಸಂಪರ್ಕಿಸುತ್ತದೆ. ತಂಡದೊಂದಿಗೆ ಪ್ರಯಾಣಿಸುತ್ತಿರುವ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಅವರು ಶನಿವಾರ ಬೆಳಗ್ಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ವರದಿ ತಿಳಿಸಿದೆ.


ಇದನ್ನೂ ಓದಿ: ದ.ಆಫ್ರಿಕಾ ವಿರುದ್ಧ ಭಾರತ ಗೆಲ್ಲಲು ಕಾರಣ ಈ ಆಟಗಾರ ಎಂದು ಕೊಂಡಾಡಿದ ನಾಯಕ ರೋಹಿತ್ ಶರ್ಮಾ


ಸ್ಟಂಪ್‌’ಗಳ ಹಿಂದೆ ರಾಹುಲ್ ಅವರ ಪ್ರದರ್ಶನ ಅತ್ಯುತ್ತಮವಾಗಿದೆ. ಧೋನಿ ಕಾಲವನ್ನೇ ನೆನಪಿಸುವಂತೆ ರಾಹುಲ್ ವಿಕೆಟ್ ಕೀಪಿಂಗ್ ಮಾಡುತ್ತಿದ್ದಾರೆ.  


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ