ಇಂಗ್ಲೆಂಡ್ ವಿರುದ್ಧ 4ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ ಟೀಂ ಇಂಡಿಯಾದ ಈ ಸ್ಟಾರ್ ಬ್ಯಾಟರ್!

India vs England, Playing 11: ಭಾರತ ತಂಡವು ಈಗ ODI ವಿಶ್ವಕಪ್‌’ನಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಅಕ್ಟೋಬರ್ 29 ಭಾನುವಾರದಂದು ಲಕ್ನೋದ ಎಕಾನಾ ಕ್ರೀಡಾಂಗಣದಲ್ಲಿ ನಡೆಯಲಿದೆ.

Written by - Bhavishya Shetty | Last Updated : Oct 27, 2023, 07:15 PM IST
    • ಏಕದಿನ ವಿಶ್ವಕಪ್’ನಲ್ಲಿ ಭಾರತ ತಂಡ ಇದುವರೆಗೆ ಅದ್ಭುತ ಪ್ರದರ್ಶನ ನೀಡಿದೆ
    • ಪ್ಲೇಯಿಂಗ್-11 ಆಯ್ಕೆ ಮಾಡುವುದೇ ರೋಹಿತ್ ಶರ್ಮಾಗೆ ಸವಾಲಾಗಿದೆ
    • ಹಾರ್ದಿಕ್ ಪಾಂಡ್ಯ ಇಲ್ಲದೆ ಭಾರತ ಕ್ರಿಕೆಟ್ ತಂಡ ಆಡಲಿದೆ ಎಂದು ಹೇಳಲಾಗುತ್ತಿದೆ
ಇಂಗ್ಲೆಂಡ್ ವಿರುದ್ಧ 4ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ ಟೀಂ ಇಂಡಿಯಾದ ಈ ಸ್ಟಾರ್ ಬ್ಯಾಟರ್! title=
Shreyas Iyer

India vs England, Playing 11: ಏಕದಿನ ವಿಶ್ವಕಪ್’ನಲ್ಲಿ ಭಾರತ ತಂಡ ಇದುವರೆಗೆ ಅದ್ಭುತ ಪ್ರದರ್ಶನ ನೀಡಿದೆ. ಇದುವರೆಗೆ ಆಡಿರುವ ಐದು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ರೋಹಿತ್ ಶರ್ಮಾ ನಾಯಕತ್ವದ ತಂಡ ತನ್ನ ಮುಂದಿನ ಪಂದ್ಯವನ್ನು ಇಂಗ್ಲೆಂಡ್ ವಿರುದ್ಧ ಅಕ್ಟೋಬರ್ 29 ರಂದು ಆಡಲಿದ್ದು, ಲಕ್ನೋದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ಮಧ್ಯೆ ಪ್ಲೇಯಿಂಗ್-11 ಆಯ್ಕೆ ಮಾಡುವುದೇ ರೋಹಿತ್ ಶರ್ಮಾಗೆ ಸವಾಲಾಗಿದೆ ಎಂದು ಹೇಳಲಾಗುತ್ತಿದೆ.

ಭಾರತ ತಂಡವು ಈಗ ODI ವಿಶ್ವಕಪ್‌’ನಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಅಕ್ಟೋಬರ್ 29 ಭಾನುವಾರದಂದು ಲಕ್ನೋದ ಎಕಾನಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಪ್ಲೇಯಿಂಗ್-11 ರಲ್ಲಿ ಯಾರಿಗೆ ಅವಕಾಶ ನೀಡಬೇಕು ಅಥವಾ ನ್ಯೂಜಿಲೆಂಡ್ ವಿರುದ್ಧ ಗೆದ್ದ ತಂಡದ ಅದೇ ಆಟಗಾರರನ್ನು ಉಳಿಸಿಕೊಳ್ಳಬೇಕೇ ಎಂಬ ದೊಡ್ಡ ಪ್ರಶ್ನೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮುಂದಿದೆ.

ಇನ್ನು ಮುಂದಿನ ಪಂದ್ಯದಲ್ಲೂ ಹಾರ್ದಿಕ್ ಪಾಂಡ್ಯ ಇಲ್ಲದೆ ಭಾರತ ಕ್ರಿಕೆಟ್ ತಂಡ ಆಡಲಿದೆ ಎಂದು ಹೇಳಲಾಗುತ್ತಿದೆ. ಕಳೆದ ಪಂದ್ಯದಲ್ಲೂ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಅಲಭ್ಯವಾಗಿದ್ದರು. ತಂಡದಲ್ಲಿ ಪ್ರಸ್ತುತ 14 ಆಟಗಾರರು ಉಳಿದಿದ್ದಾರೆ. ಧರ್ಮಶಾಲಾದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತವು ಸೂರ್ಯಕುಮಾರ್ ಯಾದವ್‌’ಗೆ ಅವಕಾಶ ನೀಡಿತು. ಆದರೆ ಅವರು 2 ರನ್ ಗಳಿಸಿ ಪೆವಿಲಿಯನ್’ಗೆ ಮರಳಿದರು. ಇದರ ಹೊರತಾಗಿಯೂ ರೋಹಿತ್ ಅವರಿಗೆ ಮತ್ತೊಂದು ಅವಕಾಶ ನೀಡುತ್ತಾರೋ ಎಂಬುದು ಸದ್ಯದ ಪ್ರಶ್ನೆ.

ಸೂರ್ಯಕುಮಾರ್ ಯಾದವ್’ಗೆ ಅವಕಾಶ ಸಿಗುತ್ತಾ?

ರೋಹಿತ್ ಶರ್ಮಾ ಜೊತೆಗೆ ಶುಭ್ಮನ್ ಗಿಲ್ ಓಪನಿಂಗ್ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಡೆಂಗ್ಯೂ ಜ್ವರದಿಂದಾಗಿ ಆರಂಭಿಕ ಪಂದ್ಯಗಳನ್ನು ಮಿಸ್ ಮಾಡಿಕೊಂಡಿದ್ದು, ಆ ಸ್ಥಾನದಲ್ಲಿ ಇಶಾನ್ ಕಿಶನ್ ಪಂದ್ಯವನ್ನಾಡಿದ್ದರು. ಇದೀಗ ಮುಂದಿನ ಪಂದ್ಯದಲ್ಲಿ  ಸೂರ್ಯಕುಮಾರ್ ಅವರನ್ನು ನಂಬರ್-4ರಲ್ಲಿ ಕಣಕ್ಕಿಳಿಸುವ ಮೂಲಕ ರೋಹಿತ್ ಹೊಸ ಪ್ರಯೋಗಕ್ಕೆ ಮುಂದಾಗಬಹುದು ಎಂದು ಹೇಳಲಾಗುತ್ತಿದೆ. ಹೀಗಾದಲ್ಲಿ ಶ್ರೇಯಸ್ ಅಯ್ಯರ್ ಸ್ಥಾನಕ್ಕೆ ಕುತ್ತು ಬರಲಿದೆ.

ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತದ ಮಿಸ್ಟರ್ 360 ಡಿಗ್ರಿ ಬ್ಯಾಟ್ಸ್‌’ಮನ್ ಸೂರ್ಯಕುಮಾರ್ ಯಾದವ್ ವಿಶ್ವಕಪ್‌’ಗೆ ಪಾದಾರ್ಪಣೆ ಮಾಡಿದರು.

3 ವೇಗಿಗಳು ಅಥವಾ 3 ಸ್ಪಿನ್ನರ್‌’ಗಳು?

ಲಕ್ನೋದ ಏಕಾನಾ ಕ್ರೀಡಾಂಗಣವು ಎರಡೂ ರೀತಿಯ ಪಿಚ್‌’ಗಳನ್ನು ಹೊಂದಿದೆ - ಒಂದು ದೃಢವಾದ ಮತ್ತು ಬ್ಯಾಟಿಂಗ್‌’ಗೆ ಉತ್ತಮವಾಗಿದೆ. ಇನ್ನೊಂದು ಕಪ್ಪು ಮಣ್ಣಿನ ಮೇಲ್ಮೈಯನ್ನು ಹೊಂದಿದೆ. ಇದುವರೆಗೆ ಏಕದಿನ ವಿಶ್ವಕಪ್‌’ನಲ್ಲಿ 3 ಪಂದ್ಯಗಳಲ್ಲಿ ಕೆಂಪು ಮಣ್ಣಿನ ಪಿಚ್‌’ಗಳನ್ನು ಬಳಸಲಾಗಿದೆ. ಭಾರತ-ಇಂಗ್ಲೆಂಡ್ ಪಂದ್ಯಕ್ಕೆ ಕಪ್ಪು ಮಣ್ಣಿನ ಪಿಚ್ ಸಾಧ್ಯತೆ ಇದೆ. ಹೀಗಾದರೆ ಪಿಚ್ ನಿಧಾನವಾಗಲಿದ್ದು, ಸ್ಪಿನ್ನರ್‌’ಗಳಿಗೆ ಕೊಂಚ ನೆರವು ಸಿಗಲಿದೆ. ಜೊತೆಗೆ ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್ ಅನುಭವಿ ರವಿಚಂದ್ರನ್ ಅಶ್ವಿನ್ ಅವರಿಗೆ ಈ ಪಂದ್ಯದಲ್ಲಿ ಅವಕಾಶ ನೀಡಬಹುದು. ಇವರ ಜೊತೆಗೆ ಇಬ್ಬರು ಸ್ಪಿನ್ನರ್‌’ಗಳಾಗಿ ರವೀಂದ್ರ ಜಡೇಜಾ ಮತ್ತು ಕುಲದೀಪ್ ಯಾದವ್ ಕಣಕ್ಕಿಳಿಯಲಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

Trending News