Yuzvendra Chahal T-shirt: ಕ್ರಿಕೆಟಿಗ ಯುಜುವೇಂದ್ರ ಚಹಾಲ್ ಮತ್ತು ಧನಶ್ರೀ ವರ್ಮಾ ವಿಚ್ಛೇದನ ಪಡೆದಿದ್ದಾರೆ. ಬಾಂದ್ರಾ ಕೌಟುಂಬಿಕ ನ್ಯಾಯಾಲಯ ಇಬ್ಬರ ವಿಚ್ಛೇದನ ಅರ್ಜಿಗೆ ಅನುಮೋದನೆ ನೀಡಿದೆ. ವಿಚ್ಛೇದನವನ್ನು ದೃಢಪಡಿಸಿದ ಚಾಹಲ್ ವಕೀಲರು ಮಾಧ್ಯಮಗಳಿಗೆ ಧನಶ್ರೀ ಜೊತೆಗಿನ ಚಾಹಲ್ ಸಂಬಂಧ ಕೊನೆಗೊಂಡಿದೆ ಎಂದು ತಿಳಿಸಿದರು. ಧನಶ್ರೀಗೆ ಚಾಹಲ್ ಜೀವನಾಂಶವಾಗಿ 4.75 ಕೋಟಿ ರೂ.ಗಳನ್ನು ನೀಡಿದ್ದು, ಅದರಲ್ಲಿ 2.37 ಕೋಟಿ ರೂ.ಗಳನ್ನು ಈಗಾಗಲೇ ಪಾವತಿಸಲಾಗಿದೆ.
ವಿಚ್ಛೇದನ ಪ್ರಕ್ರಿಯೆ ಪೂರ್ಣಗೊಂಡ ನಂತರ, ಚಾಹಲ್ ಮತ್ತು ಧನಶ್ರೀ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ಹೊರಟು ಹೋಗಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಚಾಹಲ್ ಧರಿಸಿದ್ದ ಟೀ-ಶರ್ಟ್ ಗಮನ ಸೆಳೆದಿದೆ.
ಚಾಹಲ್ ಧರಿಸಿದ್ದ ಟಿ-ಶರ್ಟ್ ಮೇಲೆ "Be Your Own Sugar Daddy..." ಎಂದು ಬರೆದಿತ್ತು. ಇದರಿಂದಾಗಿಯೇ ಚಾಹಲ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಅನೇಕ ಬಳಕೆದಾರರು ಅವರು ಬೇಕು ಬೇಕೆಂದೇ ಈ ಟಿ-ಶರ್ಟ್ ಧರಿಸಿ ಬಂದಿದ್ದಾರೆಂದು ಹೇಳುತ್ತಿದ್ದಾರೆ.
ಯುಜ್ವೇಂದ್ರ ಚಹಾಲ್ ಅವರ ಪರ ವಕೀಲ ನಿತಿನ್ ಗುಪ್ತಾ ಅವರು, ಇಬ್ಬರ ಮದುವೆ ಕೊನೆಯಾಗಿದೆ ಎಂದು ಹೇಳಿದ್ದಾರೆ. ನ್ಯಾಯಾಲಯವು ವಿಚ್ಛೇದನ ಅರ್ಜಿಯನ್ನು ಸ್ವೀಕರಿಸಿದ್ದು, ಈಗ ಇಬ್ಬರೂ ವಿಚ್ಛೇದನ ಪಡೆದಿದ್ದಾರೆ. 'ಕೂಲಿಂಗ್-ಆಫ್ ಅವಧಿಯನ್ನು ಮನ್ನಾ' ಕೋರಿ ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ ಮತ್ತು ಧನಶ್ರೀ ವರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಸ್ವೀಕರಿಸಿತ್ತು. ಐಪಿಎಲ್ನಲ್ಲಿ ಚಾಹಲ್ ಭಾಗವಹಿಸುವುದನ್ನು ಗಮನದಲ್ಲಿಟ್ಟುಕೊಂಡು ಗುರುವಾರ ವಿಚ್ಛೇದನ ಅರ್ಜಿಯನ್ನು ನಿರ್ಧರಿಸುವಂತೆ ನ್ಯಾಯಮೂರ್ತಿ ಮಾಧವ್ ಜಾಮ್ದಾರ್ ಅವರ ಪೀಠವು ಕುಟುಂಬ ನ್ಯಾಯಾಲಯಕ್ಕೆ ನಿರ್ದೇಶನ ನೀಡಿತು. ಐಪಿಎಲ್ 2025 ರ ಹರಾಜಿನಲ್ಲಿ ಪಂಜಾಬ್ ಕಿಂಗ್ಸ್ ಈ ಲೆಗ್-ಸ್ಪಿನ್ನರ್ ಅನ್ನು 18 ಕೋಟಿ ರೂ.ಗೆ ಖರೀದಿಸಿತು.
ಕಕ್ಷಿದಾರರು ಎರಡೂವರೆ ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಮತ್ತು ಮಧ್ಯಸ್ಥಿಕೆ ಪ್ರಕ್ರಿಯೆಯ ಸಮಯದಲ್ಲಿ ಜೀವನಾಂಶ ಪಾವತಿಗೆ ಸಂಬಂಧಿಸಿದಂತೆ ಒಪ್ಪಿಕೊಂಡ ನಿಯಮಗಳು ಮತ್ತು ಷರತ್ತುಗಳನ್ನು ಸರಿಯಾಗಿ ಪಾಲಿಸಿದ್ದಾರೆ ಎಂಬ ಅಂಶವನ್ನು ಪೀಠವು ಗಮನಿಸಿತು. ಗಂಡ ಮತ್ತು ಹೆಂಡತಿ ಒಂದು ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲ ಪ್ರತ್ಯೇಕವಾಗಿ ವಾಸಿಸುತ್ತಿದ್ದರೆ, ಅವರು ಪರಸ್ಪರ ಒಪ್ಪಿಗೆಯ ಮೂಲಕ ವಿಚ್ಛೇದನ ಆದೇಶವನ್ನು ಪಡೆಯಲು ಅರ್ಜಿ ಸಲ್ಲಿಸಬಹುದು. ಆದರೆ, ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 13B(2) ರ ಅಡಿಯಲ್ಲಿ, ದಂಪತಿಗಳ ನಡುವೆ ಸಮನ್ವಯ ಮತ್ತು ಪುನರ್ಮಿಲನದ ಸಾಧ್ಯತೆಗಳನ್ನು ಅನ್ವೇಷಿಸಲು ವಿಚ್ಛೇದನ ಅರ್ಜಿಯನ್ನು ಸಲ್ಲಿಸಿದ ದಿನಾಂಕದಿಂದ ಕನಿಷ್ಠ ಆರು ತಿಂಗಳ ಶಾಸನಬದ್ಧ ಕೂಲಿಂಗ್-ಆಫ್ ಅವಧಿಯನ್ನು ಒದಗಿಸಲಾಗಿದೆ.
2017ರಲ್ಲಿ ಸುಪ್ರೀಂ ಕೋರ್ಟ್ ಒಂದು ಮಹತ್ವದ ತೀರ್ಪಿನಲ್ಲಿ, ಆರು ತಿಂಗಳ ಕೂಲಿಂಗ್-ಆಫ್ ಅವಧಿ ಕಡ್ಡಾಯವಲ್ಲ. ಕಕ್ಷಿದಾರರು ಮತ್ತೆ ಒಟ್ಟಿಗೆ ವಾಸಿಸುವ ಸಾಧ್ಯತೆಯಿಲ್ಲ ಎಂದು ನಂಬಿದ್ದರೆ ನ್ಯಾಯಾಲಯವು ಈ ಷರತ್ತನ್ನು ಮನ್ನಾ ಮಾಡಬಹುದು ಎಂದು ತೀರ್ಪು ನೀಡಿತ್ತು.
ಇದನ್ನೂ ಓದಿ: ಗೋರಂಟಿ ಅಲ್ಲ.. ಮೊಸರಿಗೆ ಈ ಎಲೆಯ ಪುಡಿ ಬೆರೆಸಿ ಹಚ್ಚಿದರೆ ಬಿಳಿ ಕೂದಲು 2 ನಿಮಿಷದಲ್ಲೇ ಕಪ್ಪಾಗುವುದು!
ಧನಶ್ರೀ ಮತ್ತು ಚಾಹಲ್ 2020 ರಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಅದೇ ವರ್ಷ ಡಿಸೆಂಬರ್ನಲ್ಲಿ ಗುರುಗ್ರಾಮ್ನಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ವಿವಾಹವಾಗಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









