ಫೆಬ್ರವರಿ 2 ರಂದು ಅಮ್ರಾಹಾದಲ್ಲಿ ಪಶ್ಚಿಮ ವಲಯದ ಬೂತ್ ಅಧ್ಯಕ್ಷರ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಾತನಾಡಲಿದ್ದಾರೆ. ಫೆಬ್ರವರಿ 6 ರಂದು ಇಟಾದಲ್ಲಿ ಬ್ರಾಜ್ ಪ್ರದೇಶದ ಬೂತ್ ಅಧ್ಯಕ್ಷರ ಸಮಾವೇಶದಲ್ಲಿ ಭಾಗಿಯಾಗಲಿರುವ ಅವರು ಪಕ್ಷದ ಕಾರ್ಯಕರ್ತರೊಂದಿಗೆ ನೇರ ಮಾತುಕತೆ ನಡೆಸುತ್ತಾರೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆರೋಗ್ಯ ಸುಧಾರಿಸುತ್ತಿದೆ, ಒಂದೆರಡು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಬಿಜೆಪಿ ವಕ್ತಾರ ಅನಿಲ್ ಬಲೂನಿ ಗುರುವಾರ ತಿಳಿಸಿದರು.
ಪ್ರತಿಪಕ್ಷಗಳು ಮಹಾಘಟಬಂಧನ ಹೆಸರಿನಲ್ಲಿ ಮಾಡಿಕೊಳ್ಳುತ್ತಿರುವ ಮೈತ್ರಿಕೂಟದಲ್ಲಿ ಪರಸ್ಪರ ವಿಶ್ವಾಸ, ನಂಬಿಕೆಯೇ ಇಲ್ಲ. ಈ ಮೈತ್ರಿಕೂಟ ಕೇವಲ ಭ್ರಮೆ, ಅದು ಯಾವುದೇ ಕಾರಣಕ್ಕೂ ಅಸ್ತಿತ್ವಕ್ಕೆ ಬರಲು ಸಾಧ್ಯವಿಲ್ಲ ಎಂದು ಅಮಿತ್ ಶಾ ಹೇಳಿದರು.
ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರು ಪ್ರವೇಶಿಸುವ ವಿಚಾರವಾಗಿ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿರುವ ಅಮಿತ್ ಶಾ ಅವರ ಭಾಷಣವೇ ಈ ಹಿಂಸಾತ್ಮಕ ಪ್ರತಿಭಟನೆಯ ಹಿಂದಿನ ಕಾರಣಗಳನ್ನು ಬಹಿರಂಗಪಡಿಸಿದೆ ಎಂದು ಭಾರತೀಯ ಕಮ್ಯೂನಿಸ್ಟ್ ಪಕ್( ಮಾರ್ಕ್ಸವಾದಿ) ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿರುವ ಮನೋಹರ್ ಪರಿಕ್ಕರ್ ಆರೋಗ್ಯದ ದೃಷ್ಟಿಯಿಂದ ಗೋವಾದ ಮುಖ್ಯಮಂತ್ರಿಯನ್ನು ಬದಲಿಸುವ ಚರ್ಚೆ ನಡೆದಿತ್ತು ಆದರೆ ಈಗ ಆ ಎಲ್ಲ ವದಂತಿಗಳಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತೆರೆ ಎಳೆದಿದ್ದಾರೆ. ಪರಿಕರ್ ಅವರೇ ಗೋವಾ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಐಟಿ ಇಲಾಖೆಗೆ ಯಡಿಯೂರಪ್ಪ ಬರೆದ ಪತ್ರ ಬಹಿರಂಗವಾದ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪುಲ್ ಗರಂ ಆಗಿದ್ದಾರೆ ಎಂದು ತಿಳಿದು ಬಂದಿದೆ. ಎರಡು ದಿನಗಳ ಕಾಲ ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಿಮಿತ್ತ ದೆಹಲಿಗೆ ಆಗಮಿಸಿದ್ದ ಯಡಿಯೂರಪ್ಪನವರಿಗೆ ಈ ವಿಚಾರವಾಗಿ ಅಮಿತ್ ಶಾ ಪುಲ್ ಕ್ಲಾಸ್ ತಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಎನ್ಡಿಎ ಮೈತ್ರಿಕೂಟ ತ್ಯಜಿಸಿದ ಟಿಡಿಪಿ ನಿರ್ಧಾರ ದುರದೃಷ್ಟಕರ ಮತ್ತು ಏಕಪಕ್ಷೀಯ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.