ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರದಂದು ರಾಷ್ಟ್ರದ ರಾಜಧಾನಿಯಲ್ಲಿ ಉಚಿತ ವೈ-ಫೈ ಇಂಟರ್ನೆಟ್ ಸೇವೆಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಘೋಷಿಸಿದ್ದಾರೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಕೇಜ್ರಿವಾಲ್ ಪ್ರತಿ ಬಳಕೆದಾರರಿಗೆ 15 ಜಿಬಿ ಡೇಟಾವನ್ನು ಉಚಿತವಾಗಿ ನೀಡಲಾಗುವುದು, ಪ್ರತಿ ತಿಂಗಳು 200 ಎಂಬಿಪಿಎಸ್ ವೇಗದಲ್ಲಿ ಇಂಟರ್ ನೆಟ್ ನೀಡಲಾಗುವುದು ಎಂದು ಹೇಳಿದರು.
ಸರ್ಕಾರದ ಹೊಸ ಪ್ರಸ್ತಾಪವು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಹೆಚ್ಚಿಸಿ, ಅಭಿವೃದ್ಧಿಯ ವೇಗವನ್ನು ಹೆಚ್ಚಿಸುತ್ತದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
200 ಯುನಿಟ್ವರೆಗಿನ ವಿದ್ಯುತ್ ಬಳಕೆಗೆ ಜನರು ವಿದ್ಯುತ್ ಬಿಲ್ ಪಾವತಿಸಬೇಕಾಗಿಲ್ಲ ಮತ್ತು ಆಗಸ್ಟ್ 1 ರಿಂದ ಅವರ ಬಿಲ್ಗಳನ್ನು ಮನ್ನಾ ಮಾಡಲಾಗುವುದು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಆಮ್ ಆದ್ಮಿ ಪಕ್ಷದ ಈ ಇಬ್ಬರೂ ಮುಖಂಡರಿಗೆ ತಲಾ 10,000 ರೂ.ಗಳ ಬಾಂಡ್ ಮೇಲೆ ಜಾಮೀನು ನೀಡಲಾಗಿದ್ದು, ಮಾನಹಾನಿ ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 25ಕ್ಕೆ ಕೋರ್ಟ್ ನಿಗದಿ ಮಾಡಿದೆ.
ಶಿರೋಮಣಿ ಅಕಾಲಿ ದಳ (ಎಸ್ಎಡಿ) ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ಕಚೇರಿ ಮತ್ತು ಅದರ ಹತ್ತಿರದ ಪ್ರದೇಶಗಳ ಹೊರಗೆ ಬುಧವಾರ ಪೋಸ್ಟರ್ಗಳನ್ನು ಹಾಕಿ ದೆಹಲಿ ಶಾಲೆಗಳ ನಿರ್ಮಾಣದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದ ಮಹಿಳೆಯರಿಗೆ ಉಚಿತ ಮೆಟ್ರೋ ಸಾರಿಗೆ ನೀಡುವ ಮಹತ್ವಾಕಾಂಕ್ಷೆಯ ಯೋಜನೆ ಸಾರಿಗೆ ವ್ಯವಸ್ಥೆಯನ್ನು ಅದಕ್ಷತೆ ಮತ್ತು ದಿವಾಳಿತನದ ಕಡೆಗೆ ಕೊಂಡೊಯ್ಯುತ್ತದೆ. ಆದ್ದರಿಂದ ಈ ಯೋಜನೆಗೆ ಒಪ್ಪಿಗೆ ನೀಡಬೇಡಿ ಎಂದು ನಿವೃತ್ತ ದೆಹಲಿ ಮೆಟ್ರೋ ಮುಖ್ಯಸ್ಥ ಇ-ಶ್ರೀಧರನ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಅಣ್ಣಾ ಹಜಾರೆ ಚಳವಳಿಯಲ್ಲಿ ಭಾಗಿಯಲ್ಲದ ನನ್ನ ತಂದೆಗೆ ಯಾಕೆ ಆಮ್ ಆದ್ಮಿ ಪಕ್ಷ ಟಿಕೆಟ್ ನೀಡಿದೆ? ಅಷ್ಟಕ್ಕೂ ಒಬ್ಬ ಅನುಭವವಿಲ್ಲದ ರಾಜಕಾರಣಿಗೆ ಲೋಕಸಭೆ ಟಿಕೆಟ್ ದೊರೆತಿದೆ ಎಂದರೆ ಅದು ನಿಜಕ್ಕೂ 'ಅಚ್ಚರಿ' ತಂದಿದೆ ಎಂದು ಉದಯ್ ಹೇಳಿದ್ದಾರೆ
ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳ ನಡುವಿನ ಮೈತ್ರಿ ಸಾಧ್ಯತೆಗಳ ನಡುವೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಶೀಲಾ ದೀಕ್ಷಿತ್ ಚೆನ್ನಾಗಿ ಕಾರ್ಯನಿರ್ವಹಿಸಿದ್ದರೆ ನಾವು ಹೊಸ ಪಕ್ಷ ಸ್ಥಾಪಿಸುವ ಅಗತ್ಯವಿರಲಿಲ್ಲ ಎಂದು ಕೇಜ್ರಿವಾಲ್ ಹೇಳಿದರು.
ದೆಹಲಿಯಲ್ಲಿ ಕಾಂಗ್ರೆಸ್ ಹಾಗೂ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಮೈತ್ರಿ ವಿಚಾರಗಳ ಕುರಿತಾಗಿ ಹರಡಿದ್ದ ಎಲ್ಲ ಊಹಾಪೋಹಗಳಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಂತಿಮ ತೆರೆ ಎಳೆದಿದ್ದಾರೆ. ದೆಹಲಿಯ ಎಲ್ಲ ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ,ಆದ್ದರಿಂದ ಯಾವುದೇ ಪಕ್ಷದ ಜೊತೆ ಮೈತ್ರಿ ಇಲ್ಲವೆಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದರು.
2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಆಮ್ ಆದ್ಮಿ ಪಕ್ಷದದೊಂದಿಗೆ ಮೈತ್ರಿ ನಿರಾಕರಿಸುವ ಮೂಲಕ ಕಾಂಗ್ರೆಸ್ ಪಕ್ಷವು ಬಿಜೆಪಿಗೆ ಅನೂಕೂಲ ಮಾಡಿಕೊಳ್ಳುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ನಡುವಿನ ಜಟಾಪಟಿ ವಿಚಾರವಾಗಿ ಸುಪ್ರೀಕೋರ್ಟ್ ತೀರ್ಪು ನೀಡಿದ್ದು, ದೆಹಲಿ ಆಡಳಿತದಲ್ಲಿ ಅಲ್ಲಿನ ಸರ್ಕಾರಕ್ಕಿಂತ ಲೆಫ್ಟಿನೆಂಟ್ ಗವರ್ನರ್ಗೆ ಹೆಚ್ಚಿನ ಅಧಿಕಾರ ವ್ಯಾಪ್ತಿ ಇದೆ ಎಂದು ಸುಪ್ರೀಂಕೋರ್ಟಿನ ನ್ಯಾ. ಎ.ಕೆ. ಸಿಕ್ರಿ ಮತ್ತು ನ್ಯಾ. ಅಶೋಕ್ ಭೂಷಣ್ ದ್ವಿಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.
ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಸುಮಾರು ನೂರು ಜನರನ್ನು ಒಳಗೊಂಡ ಗುಂಪೊಂದು ಶುಕ್ರವಾರದಂದು ಮಧ್ಯಾಹ್ನ ದಾಳಿ ನಡೆಸಿದೆ ಎನ್ನುವ ಸಂಗತಿಯನ್ನು ಮುಖ್ಯಮಂತ್ರಿ ಕಚೇರಿ ಖಚಿತಪಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.