ಏಳನೇ ವೇತನ ಆಯೋಗದ ಶಿಫಾರಸಿನ ಅನುಷ್ಠಾನದ ನಂತರ ಲಕ್ಷಾಂತರ ಸರ್ಕಾರಿ ನೌಕರರು ತಮ್ಮ ಸಂಬಳ ಹೆಚ್ಚಳಕ್ಕಾಗಿ ಕಾಯುತ್ತಿದ್ದಾರೆ. ಏತನ್ಮಧ್ಯೆ, ಸರ್ಕಾರವು ಏಪ್ರಿಲ್ನಿಂದ ಸಂಬಳವನ್ನು ಹೆಚ್ಚಿಸಲಿದೆ ಎಂಬ ಸುದ್ದಿ ಬಂದಿದೆ.
ಈ ಬಾರಿಯ ಕೇಂದ್ರ ಬಜೆಟ್ನಲ್ಲಿ 160 ಕಿ.ಮೀ. ಬೆಂಗಳೂರು ಉಪನಗರ ರೈಲು ಜಾಲದ ವಿಶೇಷ ಪ್ರಸ್ತಾಪದೊಂದಿಗೆ, ಬೆಂಗಳೂರಿನ ಸಾರಿಗೆ ಮೂಲಭೂತ ಸೌಕರ್ಯಕ್ಕಾಗಿ 17 ಸಾವಿರ ಕೋಟಿ ರೂ.ಗಳನ್ನು ಹಣಕಾಸು ಮಂತ್ರಿಗಳು ಘೋಷಿಸಿದ್ದಾರೆ.
ಶಿಕ್ಷಣ ಸಾಲಗಳು, ಶಿಕ್ಷಕ ತರಬೇತಿ ಕಾರ್ಯಕ್ರಮಗಳು, ಸರ್ವ ಶಿಕ್ಷಣ ಅಭಿಯಾನ ಇತ್ಯಾದಿ ವಿಷಯಗಳನ್ನು ಮೋದಿ ಸರ್ಕಾರ ಬಜೆಟ್ ನಲ್ಲಿ ಮಂಡಿಸಲಿದೆಯೇ ಎಂದು ಯುವಜನತೆ ಕಾತುರದಿಂದ ಎದುರುನೋಡುತ್ತಿದ್ದಾರೆ.
ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆಯು ಅತಿ ಕಡಿಮೆ ಅವಧಿಯಲ್ಲಿ ಸ್ಥಿರತೆ ಕಂಡಿದ್ದು, ಮುಂದಿನ ದಿನಗಳಲ್ಲಿ ತೆರಿಗೆದಾರರ ವ್ಯಾಪ್ತಿ ವಿಸ್ತರಿಸಲು ಮತ್ತು ತೆರಿಗೆ ದರಗಳನ್ನು ಇಳಿಸಲು ಸಾಧ್ಯವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಪೇಟಿಎಂ ಪೇಮೆಂಟ್ ಬ್ಯಾಂಕ್ ಅನ್ನು ಔಪಚಾರಿಕವಾಗಿ ಮಂಗಳವಾರ ಸಂಜೆ ಉದ್ಘಾಟಿಸಿದರು. ದೀರ್ಘಕಾಲದವರೆಗೆ ದೊಡ್ಡ ಪ್ರಮಾಣದಲ್ಲಿ ಉದ್ಯೋಗಗಳನ್ನು ಉತ್ಪಾದಿಸುವ ಕಡೆಗೆ ಪೇಟಿಎಂ ಪೇಮೆಂಟ್ ಬ್ಯಾಂಕ್ ಕೆಲಸ ಮಾಡುತ್ತದೆ.
ಜನ-ಧನ್ ಯೋಜನೆಗೂ ಮೊದಲು ಸುಮಾರು 42 ಪ್ರತಿಶತದಷ್ಟು ಕುಟುಂಬಗಳು ಬ್ಯಾಂಕಿಂಗ್ ಸೌಲಭ್ಯ ಹೊಂದಿರಲಿಲ್ಲ. ಎಲ್ಲಾ ವಾಣಿಜ್ಯ ಬ್ಯಾಂಕ್ಗಳಲ್ಲಿ ಶೂನ್ಯ ಹಣಕಾಸಿನ ಖಾತೆ ತೆರೆಯುವ ಅವಕಾಶವನ್ನು ಸರ್ಕಾರ ಕಲ್ಪಿಸಿತ್ತು. ಪ್ರತಿ ಕುಟುಂಬವೂ ಬ್ಯಾಂಕಿಂಗ್ ಸೌಲಭ್ಯಗಳನ್ನೂ ಪಡೆಯಬೇಕೆಂಬುದು ಇದರ ಮುಖ್ಯ ಉದ್ದೇಶವಾಗಿತ್ತು - ಅರುಣ್ ಜೇಟ್ಲಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.