ಇತ್ತೀಚೆಗೆ ಚೆನ್ನೈನಲ್ಲಿ ತಮ್ಮ ಮಕ್ಕಳ್ ನೀದಿಮೈಯ್ಯಂ ಪಕ್ಷದ ಪರವಾಗಿ ಉಪಚುನಾವಣೆ ರ್ಯಾಲಿ ಉದ್ದೇಶಿಸಿ ಮಾತನಾಡುತ್ತಾ, "ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಒಬ್ಬ ಹಿಂದೂ ಆಗಿದ್ದ. ಆತನ ಹೆಸರು ನಾಥೂರಾಮ್ ಗೋಡ್ಸೆ' ಎಂದು ಕಮಲ್ ಹಾಸನ್ ಹೇಳಿದ್ದರು.
ಫರಿದಾಬಾದ್ ನಲ್ಲಿ ಮತದಾನದ ಕೇಂದ್ರದ ಒಳಗಡೆ ಪ್ರಭಾವ ಬೀರಲು ಪ್ರಯತ್ನಿಸಿದ ವ್ಯಕ್ತಿಯನ್ನು ಈಗ ಬಂಧಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಚುನಾವಣಾ ಆಯುಕ್ತ ಅಶೋಕ್ ಲವಾಸಾ ಅವರು ಧೃಡಪಡಿಸಿದ್ದಾರೆ.
ಮತದಾನಕ್ಕೂ ಮೊದಲು 48 ಗಂಟೆಗಳ ಮೌನದ ಅವಧಿ ಸಮಯದಲ್ಲಿ ಚುನಾವಣೆಗೆ ಸಂಬಂಧಿಸಿದ ವಿಷಯಗಳನ್ನು ಪ್ರಸಾರ ಮಾಡಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಕಾರಣಕ್ಕಾಗಿ ನಮೋ ಟಿವಿ ವಿರುದ್ಧ ದೆಹಲಿ ಮುಖ್ಯ ಚುನಾವಣಾ ಅಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ.
ಪ್ರಧಾನಿ ಮೋದಿ ಹಾಗೂ ಅಮಿತ್ ಷಾ ವಿರುದ್ಧ ಇರುವ ಎಲ್ಲ ಪ್ರಕರಣಗಳಿಂದ ಆರೋಪ ಮುಕ್ತಗೊಳಿಸುತ್ತಿರುವ ಹಿನ್ನಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಚುನಾವಣಾ ಆಯೋಗ ಒತ್ತಡದ ನಡುವೆ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ಚಂಡೀಗಢ ಲೋಕಸಭಾ ಅಭ್ಯರ್ಥಿ ಕಿರಣ್ ಖೇರ್ ಟ್ವಿಟ್ಟರ್ನಲ್ಲಿ ಚುನಾವಣಾ ಪ್ರಚಾರದ ವೀಡಿಯೋವೊಂದರಲ್ಲಿ ಮಕ್ಕಳನ್ನು ಬಳಸಿಕೊಂಡಿರುವ ವಿಚಾರವಾಗಿ ಈಗ ಚುನಾವಣಾ ಆಯೋಗವು ಅವರಿಗೆ ಶನಿವಾರದಂದು ನೋಟಿಸ್ ಜಾರಿ ಮಾಡಿದೆ.
ಆಗಸ್ಟ್ 4, 2014ರಲ್ಲಿ ಬಾಂಬೆ ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿರುವ ಆಯೋಗವು, ಮಕ್ಕಳನ್ನು ಚುನಾವಣೆ ಪ್ರಚಾರಗಳಲ್ಲಿ ಬಳಸಿಕೊಳ್ಳಬಾರದು ಎಂದು ಹೇಳಿರುವುದನ್ನು ಮಕ್ಕಳ ರಕ್ಷಣಾ ಆಯೋಗ ಒತ್ತಿ ಹೇಳಿದೆ.
ಗುರುವಾರ ಬೆಳಿಗ್ಗೆ ರಿವೇರಾ ಪಟ್ಟಣದಲ್ಲಿರುವ ತಮ್ಮ ನಿವಾಸದಲ್ಲಿ ಸಾರ್ವಜನಿಕರನ್ನು ಭೇಟಿಯಾದ ಸಾಧ್ವಿ, ಭೂಪಾಲದ ಕರ್ಫ್ಯೂ ವಾಲಿ ಮಾತಾ ಮಂದಿರಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿ ಸಮಾವೇಶಗಳಲ್ಲಿ ಸೇನೆಯ ಬಗ್ಗೆ ಹೇಳಿಕೆಗಳನ್ನು ನೀಡುವುದು ಮತ್ತು ದ್ವೇಷಪೂರಿತ ಭಾಷಣ ಮಾಡುವ ಮೂಲಕ ನೀತಿ ಸಂಹಿತಿ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದೆ ಸುಶ್ಮಿತಾ ದೇವ್ ಸೋಮವಾರ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಚುನಾವಣಾ ಆಯೋಗವು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಷಾ ನೀತಿ ಸಂಹಿತೆ ಉಲ್ಲಂಘನೆ ವಿಚಾರವಾಗಿ ನೀಡಿದ್ದ ದೂರುಗಳಿಗೆ ಚುನಾವಣಾ ಆಯೋಗ ನಿರ್ಲಕ್ಷ ಧೋರಣೆ ಅನುಸರಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿ ಈಗ ಸುಪ್ರೀಂಕೋರ್ಟ್ ಮೊರೆ ಹೋಗಿದೆ.ಈಗ ಸುಪ್ರಿಂಗೆ ನೀಡಿರುವ ದೂರಿನಲ್ಲಿ ಚುನಾವಣಾ ಆಯೋಗಕ್ಕೆ ಬಂದಂತಹ ದೂರುಗಳನ್ನು 24 ಗಂಟೆಗಳಲ್ಲಿ ನಿರ್ಧರಿಸುವಂತೆ ನಿರ್ದೇಶನ ನೀಡಲು ಕಾಂಗ್ರೆಸ್ ಸುಪ್ರೀಂಗೆ ಮನವಿ ಮಾಡಿದೆ.
ಅನುಮತಿ ಇಲ್ಲದೆ ಚುನಾವಣಾ ರ್ಯಾಲಿಯನ್ನು ಆಯೋಜಿಸಿದ್ದಕ್ಕೆ ಗೌತಮ್ ಗಂಭೀರ್ ವಿರುದ್ಧ ಕೇಸ್ ದಾಖಲಿಸಲು ಚುನಾವಣಾ ಆಯೋಗ ಪೂರ್ವ ದೆಹಲಿ ಕ್ಷೇತ್ರದ ರಿಟರ್ನಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಚುನಾವಣಾ ಅವಧಿಯಲ್ಲಿ ನಮೋ ಟಿವಿ ಚುನಾವಣಾ ವಿಷಯಗಳನ್ನು ಪ್ರಸಾರ ಮಾಡುವಂತಿಲ್ಲವೆಂದು ಚುನಾವಣಾ ಆಯೋಗ ಸೂಚನೆ ನೀಡಿದೆ.ಉಳಿದ ಆರು ಹಂತದ ಚುನಾವಣೆಗಳಲ್ಲಿ ನಮೋ ಟಿವಿ ಚುನಾವಣಾ ಆಯೋಗದ ನಿರ್ದೇಶನಗಳನ್ನು ಅನುಸುತ್ತದೆಯೇ ಇಲ್ಲವೇ ಎನ್ನುವ ಕುರಿತಾಗಿ ದೆಹಲಿಯ ಚುನಾವಣಾಧಿಕಾರಿಗಳು ಪರಿಶೀಲಿಸಬೇಕೆಂದು ಆಯೋಗ ಸೂಚಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.