ವಿದೇಶಕ್ಕೆ ಹಾರಲು ಸಿದ್ಧವಾಗುವುದಕ್ಕೆ ಸ್ವಲ್ಪ ಮುಂಚೆ ದೆಹಲಿ ವಿಮಾನ ನಿಲ್ದಾಣದಲ್ಲಿ ಶಾ ಫೈಸಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.ಜೀ ನ್ಯೂಸ್ ಗೆ ತಿಳಿಸಿರುವ ಸುದ್ದಿ ಮೂಲಗಳ ಪ್ರಕಾರ ಈಗ ಅವರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ವಾಪಸ್ ಕಳುಹಿಸಲಾಗಿದೆ.ರಾಜಧಾನಿ ಶ್ರೀನಗರದಲ್ಲಿ ಫೈಸಲ್ ಅವರನ್ನು ಗೃಹಬಂಧನದಲ್ಲಿರಿಸಲಾಗಿದೆ ಎನ್ನಲಾಗಿದೆ.
ಸಂವಿಧಾನದ 370 ನೇ ವಿಧಿ ಅನ್ವಯ ಜಮ್ಮು ಮತ್ತು ಕಾಶ್ಮೀರಕ್ಕೆ ಇರುವ ವಿಶೇಷ ಸ್ಥಾನಮಾನವನ್ನು ತೆಗೆದುಹಾಕುವುದರಿಂದಾಗಿ ಭಯೋತ್ಪಾದನೆ ಕೊನೆಗೊಳ್ಳುವುದಲ್ಲದೆ ಮತ್ತು ಆ ಪ್ರದೇಶದ ಪ್ರಗತಿಗೆ ಕಾರಣವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಅಭಿಪ್ರಾಯಪಟ್ಟಿದ್ದಾರೆ.
ಜಮ್ಮು ಮತ್ತು ಕಾಶ್ಮೀರದನಡೆ ಸಂವಿಧಾನದ ಚೌಕಟ್ಟಿನಲ್ಲಿದೆ ಎಂದು ಈಗ ಭಾರತದ ನಡೆಯನ್ನು ರಷ್ಯಾ ಬೆಂಬಲಿಸಿದೆ. ಇನ್ನು ಉಭಯ ದೇಶಗಳ ನಡುವೆ ಇರುವ ಭಿನ್ನಾಭಿಪ್ರಾಯಗಳನ್ನು ದ್ವಿಪಕ್ಷೀಯವಾಗಿ ಸಿಮ್ಲಾ ಒಪ್ಪಂದ ಮತ್ತು ಲಾಹೋರ್ ಘೋಷಣೆಯ ಆಧಾರದ ಮೇಲೆ ಪರಿಹರಿಸಿಕೊಳ್ಳಲಿವೆ ಎಂದು ಆಶಿಸಿದೆ.
ಕಾಶ್ಮೀರದ ಮೇಲಿನ ಕ್ರಮಗಳನ್ನು ಮರುಪರಿಶೀಲಿಸಲು ನವದೆಹಲಿ ಒಪ್ಪಿದರೆ ಭಾರತದ ವಿರುದ್ಧದ ನಿರ್ಧಾರವನ್ನು ಪರಿಶೀಲಿಸಲು ಪಾಕಿಸ್ತಾನ ಸಿದ್ಧ ಎಂದು ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನದ ಅವಕಾಶ ನೀಡುತ್ತಿದ್ದ 370ನೇ ಕಲಂ ಅನ್ನು ರದ್ದು ಪಡಿಸಿ ಈಗ ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಿರುವ ನಿರ್ಧಾರವನ್ನು ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಜಮ್ಮು ಕಾಶ್ಮೀರದ ಕೊನೆಯ ಸದರ್-ಎ-ರಿಯಾಸತ್ ಕರಣ್ ಸಿಂಗ್ ಶ್ಲಾಘಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದು ಮಾಡುವ ಮತ್ತು ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಉದ್ದೇಶದ ಬಗ್ಗೆ ಭಾರತವು ಅಮೆರಿಕಕ್ಕೆ ಮಾಹಿತಿ ನೀಡಿಲ್ಲ ಎಂದು ಅಮೆರಿಕಾದ ರಾಜ್ಯ ಇಲಾಖೆ ಬುಧವಾರದಂದು ತಿಳಿಸಿದೆ.
ಕಲಂ 370 ಮತ್ತು 35 ಎ ಯನ್ನು ರದ್ದುಗೊಳಿಸುವ ನಿರ್ಧಾರವು ನಿಜಕ್ಕೂ ಇಡೀ ಜಗತ್ತನ್ನು ಬೆಚ್ಚಿ ಬೀಳಿಸಿದೆ. ಈಗ ಈ ವಿವಾದದ ಸುತ್ತ ಸಿನಿಮಾ ಮಾಡಲು ಚಿತ್ರ ಭಾರತೀಯ ಚಲನಚಿತ್ರ ನಿರ್ಮಾಪಕರು ಮುಂದಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಈಗಲೇ ಚಲನಚಿತ್ರ ಶೀರ್ಷಿಕೆಗಳನ್ನು ಕಾಯ್ದಿರಿಸುವ ಆತುರದಲ್ಲಿದ್ದಾರೆ ಎನ್ನಲಾಗಿದೆ.
ಭಯೋತ್ಪಾದನೆ ಬೆದರಿಕೆಯ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಗೃಹ ಸಚಿವ ಅಮಿತ್ ಶಾ ಭಾನುವಾರ ಸಂಸತ್ತಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.
ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಎಸ್ಪಿ ಮಲಿಕ್ ಅವರು ಸಂವಿಧಾನದ 370 ಮತ್ತು 35 ಎ ವಿಧಿಗಳನ್ನು ರದ್ದುಪಡಿಸುವ ಬಗ್ಗೆ ಅಥವಾ ವಿರೂಪಗೊಳಿಸುವಿಕೆಯ ಬಗ್ಗೆ ಯಾವುದೇ ಕ್ರಮಗಳನ್ನು ರೂಪಿಸುವುದಿಲ್ಲ ಎಂದು ತಮ್ಮ ಪಕ್ಷಕ್ಕೆ ಭರವಸೆ ನೀಡಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖಂಡ ಒಮರ್ ಅಬ್ದುಲ್ಲಾ ಶನಿವಾರದಂದು ತಿಳಿಸಿದ್ದಾರೆ.
ಶ್ರೀನಗರದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರದಂದು ಪಾಕ್ ಮೂಲದ ಉಗ್ರನನ್ನು ಬಂಧಿಸಿದ್ದಾರೆ. ಬಂಧಿತನಾಗಿರುವ ಉಗ್ರನು ಬಾರಾಮುಲ್ಲಾ ಜಿಲ್ಲೆಯಲ್ಲಿ ಭಯೋತ್ಪಾದನೆಯನ್ನು ಪುನರುಜ್ಜೀವನಗೊಳಿಸಲು ಯೋಜನೆ ರೂಪಿಸಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
ಭದ್ರತಾ ಪಡೆಗಳು 6 ಉಗ್ರರನ್ನು ಹತ್ಯೆ ಮಾಡಿದ ಬೆನ್ನಲ್ಲೇ, ಕಾರ್ಯಾಚರಣೆ ವೇಳೆ ಪ್ರತಿಭಟನಾಕಾರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಘರ್ಷಣೆ ಉಂಟಾಗಿ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ.
ಭಯೋತ್ಪಾದಕರ ಕೃತ್ಯದ ಬಗ್ಗೆ ಕಠಿಣ ನಿಲುವು ತಾಳಿರುವ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಆಗಸ್ಟ್ ತಿಂಗಳಿಂದ 40 ಕ್ಕೂ ಅಧಿಕ ಜನರು ಸಾವನನಪ್ಪಿದ್ದಾರೆ ಒಂದು ವೇಳೆ ಉಗ್ರರು ಗುಂಡು ಹಾರಿಸಿದ್ದಲ್ಲಿ ಅವರಿಗೆ ವಾಪಸ್ ಗುಂಡೇ ಬರುವುದೇ ಹೊರತು ಹೂಗುಚ್ಚವಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.