ವಿಶ್ವನಾಥ್ ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ, ನಮ್ಮ ಪಕ್ಷದಲ್ಲೇ ಇರುತ್ತಾರೆ. ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ನನ್ನನ್ನು ಒತ್ತಾಯಿಸಬೇಡಿ ಎಂದು ಕೇಳಿಕೊಂಡಿದ್ದಾರೆ ಎಂದು ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಈ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಮಂಡ್ಯದಲ್ಲಿ ಗೆಲುವು ಸಾಧಿಸದೆ ಇರುವುದಕ್ಕೆ, ಪಕ್ಷದ ಅಭ್ಯರ್ಥಿಯಾಗಿ ನಾನೇ ಹೊಣೆ. ಇದಕ್ಕಾಗಿ ಯಾರನ್ನೂ ದೂಷಿಸುವುದಿಲ್ಲ. ಹಿನ್ನಡೆಗೆ ಕಾರಣಗಳನ್ನು ನೀಡುವ ಬದಲು ಅದರ ಸಂಪೂರ್ಣ ಜವಾಬ್ದಾರಿಯನ್ನು ನಾನೇ ಹೊತ್ತುಕೊಳ್ಳುತ್ತೇನೆ- ನಿಖಿಲ್ ಕುಮಾರಸ್ವಾಮಿ
ಕುಮಾರಕೃಪ ಅತಿಥಿ ಗೃಹದಲ್ಲಿ ಇಂದು ಕರೆದಿದ್ದ ಉಭಯ ಪಕ್ಷಗಳ ನಾಯಕರ ಸಭೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ, ಕೆ.ಸಿ. ವೇಣುಗೋಪಾಲ್, ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್ ಪಾಲ್ಗೊಂಡಿದ್ದರು.
ಕೇಂದ್ರದಲ್ಲಿ ಇನ್ನೊಂದು ಹೊಸ ಸರ್ಕಾರ ರಚನೆಯಾಗುವ ಮಹತ್ತರ ಘಟ್ಟದಲ್ಲಿ ನಾವಿರುವಾಗ ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿಪಕ್ಷಗಳ ಮುಖಂಡರು ವ್ಯತಿರಿಕ್ತ ಹೇಳಿಕೆಗಳನ್ನು ನೀಡಬಾರದು ಎಂದು ಸಿಎಂ ಮನವಿ ಮಾಡಿದ್ದಾರೆ.
ಬಿಜೆಪಿಯವರು ಸರ್ಕಾರ ಪತನವಾಗಲಿದೆ ಎಂದು ಹೇಳುತಿದ್ದಾರೆ. ಮೈತ್ರಿ ಪಕ್ಷಗಳು ಮೈತ್ರಿ ಧರ್ಮವನ್ನು ಪಾಲಿಸಿಕೊಂಡು ಹೋದರೆ ಇದಕ್ಕೆಲ್ಲಾ ಅವಕಾಶವೇ ಇರುವುದಿಲ್ಲ ಎಂದು ಹೊರಟ್ಟಿ ಹೇಳಿದ್ದಾರೆ.
ತುಮಕೂರು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬ ವದಂತಿಗೆ ಯಾವುದೇ ಉತ್ತರ ನೀಡುವುದಿಲ್ಲ. ಏನೇ ಇದ್ದರೂ ನಾನು, ಸಿದ್ದರಾಮಯ್ಯ ಕುಳಿತು ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ದೇವೇಗೌಡರು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.