ಹೈಕಮಾಂಡ್ ನಿರ್ದೇಶನದ ಮೇರೆಗೆ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲಾಗುವುದು, ಅದು ಒಂದೋ ಅಥವಾ ಎರಡೋ ಎಂಬುದು ಸೋಮವಾರ ಗೊತ್ತಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದರು.
ಇಲ್ಲಿನ ರಾಷ್ಟ್ರೀಯ ಗಣೇಶ ಉತ್ಸವದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಹಿಂದೂ ಬಹುಮತದ ಆಶಯಕ್ಕೆ ಅನುಗುಣವಾಗಿ ಭಾರತ ನಡೆಯುತ್ತದೆ ಎಂದು ಹೇಳಿ ವಿವಾದ ಸೃಷ್ಟಿಸಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳ ಸಂತ್ರಸ್ತರ ನೋವಿಗೆ ಸ್ಪಂದಿಸುವುದು ನಮ್ಮ ಸರ್ಕಾರದ ಪ್ರಥಮ ಆದ್ಯತೆಯಾಗಿದೆ. ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಂಡು ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಪರಿಶೀಲನಾ ಸಭೆ ನಡೆಸುವುದಲ್ಲದೆ ಪ್ರವಾಹದಿಂದ ತೀವ್ರ ತೊಂದರೆಯಾಗಿರುವ ಗ್ರಾಮಗಳಿಗೆ ಭೇಟಿ ನೀಡಿ, ಸಂತ್ರಸ್ತರೊಂದಿಗೆ ವಿಚಾರ ವಿನಿಮಯ ಮಾಡಿ, ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.
ರಾಜಸ್ಥಾನ ವಿಧಾನಸಭೆಯಲ್ಲಿ ಸಂಖ್ಯೆಯ ಕೊರತೆಯಿಂದಾಗಿ ಭಾರತೀಯ ಜನತಾ ಪಕ್ಷ(ಬಿಜೆಪಿ)ವು ಯಾವುದೇ ಅಭ್ಯರ್ಥಿಯನ್ನು ನೇಮಿಸಲಿಲ್ಲವಾದ್ದರಿಂದ, ನಾಮಪತ್ರಗಳನ್ನು ಹಿಂಪಡೆಯಲು ನಿಗದಿತ ಸಮಯದ ನಂತರ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರಾಜ್ಯಸಭೆಗೆ ಚುನಾಯಿತರಾದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.