ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಪ್ರಾರಂಭವಾಗಿದ್ದು, ನೈಸರ್ಗಿಕ ಮೂಲಗಳಿಂದ ಕುಡಿಯುವ ನೀರನ್ನು ಒದಗಿಸುವ ಜಲಧಾರೆ ಯೋಜನೆಯು ಜಾರಿಗೆ ಬಂದಿದೆ. ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಲು ಆದ್ಯತೆ ನೀಡುವ ಕಾರ್ಯಕ್ರಮ ಇದಾಗಿದೆ.
ಸಾರಾಯಿ ನಿಷೇಧ, ಲಾಟರಿ ನಿಷೇಧ, ಸಾಲ ಮನ್ನಾ, ಸಾವಿರಕ್ಕೂ ಹೆಚ್ಚು ಪ್ರೌಢಶಾಲೆಗಳು, ಐದುನೂರಕ್ಕೂ ಹೆಚ್ಚು ಪಿಯು ಹಾಗೂ ಪದವಿ ಕಾಲೇಜುಗಳ ಸ್ಥಾಪನೆ, ಗ್ರಾಮಗಳ ಸಮಗ್ರ ಅಭಿವೃದ್ಧಿಯ ಪರಿಕಲ್ಪನೆಯ ಸುವರ್ಣ ಗ್ರಾಮ ಯೋಜನೆ - ಇವೆಲ್ಲಾ ಗ್ರಾಮವಾಸ್ತವ್ಯದ ಫಲಶ್ರುತಿಗಳು.
ಧರ್ಮಸ್ಥಳದಲ್ಲಿ ಈ ಬಾರಿ ನೇತ್ರಾವತಿ ನೀರು ಬತ್ತಿ ಹೋಗಿರುವುದರಿಂದ ಉಂಟಾಗಿರುವ ಸಮಸ್ಯೆ ಕುರಿತು ಮುಖ್ಯಮಂತ್ರಿಗಳ ಸೂಚನೆಯಂತೆ ಭೇಟಿ ನೀಡಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್. ಸೆಲ್ವಮಣಿ ಅವರು ಸಮಸ್ಯೆ ಕುರಿತು ಮಾಹಿತಿ ನೀಡಿದರು.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಹಾಗೂ ಚಿಕಿತ್ಸೆಗೆ ಅಗತ್ಯವಿರುವವರಿಗೆ 1 ಲಕ್ಷ ರೂ. ಪರಿಹಾರವನ್ನು ಜಿಲ್ಲಾಧಿಕಾರಿಗಳು ತಕ್ಷಣ ನೀಡಲಿದ್ದಾರೆ. ಹೆಚ್ಚಿನ ಪರಿಹಾರ ಘೋಷಿಸುವ ಅಧಿಕಾರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ವಹಿಸಲಾಗಿದೆ.
ಬಡಾವಣೆ ನಿರ್ಮಾಣ, ಬಡಾವಣೆಗಳಿಗೆ ಸಂಪರ್ಕ ರಸ್ತೆ, ಜಿಲ್ಲಾ ಕ್ರೀಡಾಂಗಣ ಹಾಗೂ ಸರ್ಕಾರಿ ಜೂನಿಯರ್ ಕಾಲೇಜು ದುರಸ್ತಿ ಹಾಗೂ ಪ್ರಾದೇಶಿಕ ವಿಜ್ಞಾನ ಕೇಂದ್ರದ ದುರಸ್ತಿಗೆ ಅಗತ್ಯ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ರಾಜ್ಯದ 156 ತಾಲ್ಲೂಕುಗಳು ತೀವ್ರ ಬರಗಾಲ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕೂಲಿಕಾರರಿಗೆ ಸಕಾಲದಲ್ಲಿ ವೇತನ ಪಾವತಿಯಾಗದೆ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಸ್ವಯಂ ಪ್ರೇರಣೆಯಿಂದ ಕೇಂದ್ರ ಸರ್ಕಾರ ಭರಿಸಬೇಕಾದ ಮೊತ್ತವನ್ನು ಮುಂಗಡ ರೂಪದಲ್ಲಿ ಬಿಡುಗಡೆ ಮಾಡಿದ್ದು ಇನ್ನು 2-3 ದಿನಗಳಲ್ಲಿ ಕೂಲಿಕಾರರ ಖಾತೆಗೆ ವರ್ಗಾವಣೆಯಾಗಲಿದೆ- ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
ನಮ್ಮ ದೇಶದ ಸಂಸ್ಕೃತಿ ವಿಶ್ವಕ್ಕೆ ಮಾದರಿಯಾಗಿದೆ. ಭಕ್ತರು ಪವಿತ್ರ ಪುಣ್ಯ ಸ್ನಾನ ಮಾಡಿ ತಮ್ಮ ಮನಸ್ಸನು ಶುದ್ಧ ಮಾಡಿಕೊಳ್ಳಬೇಕು. ಮೂರು ವರ್ಷಕೊಮ್ಮೆ ನಡೆಯುವ ಕುಂಭಮೇಳ ಯಶಸ್ವಿ ಧಾರ್ಮಿಕ ಕಾರ್ಯಕ್ರಮ- ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.