ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ(ಎಸ್ಪಿ) ಅಧಿಕ ಸ್ಥಾನಗಳನ್ನು ವಶಪಡಿಸಿಕೊಳ್ಳಲಿದೆ ಎಂದು ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ. ಮುಲಾಯಂ ಸಿಂಗ್ ಯಾದವ್ 1996, 2004, 2009 ಮತ್ತು 2014 ರಲ್ಲಿ ಮೇನ್ಪುರಿ ಕ್ಷೇತ್ರದ ಚುನಾವಣೆಯಲ್ಲಿ ಗೆದ್ದಿದ್ದಾರೆ.
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಉದ್ಯೋಗ ಸೃಷ್ಟಿ ಭರವಸೆ ನೀಡುವ ಸಾಧ್ಯತೆಯಿದೆ. ಇದಲ್ಲದೆ ಕೃಷಿ ಬೆಳವಣಿಗೆ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಬಲಪಡಿಸುವುದರ ಬಗ್ಗೆಯೂ ಆಶ್ವಾಸನೆ ನೀಡುವ ಸಾಧ್ಯತೆಯಿದೆ.
ಸುಮಲತಾ ನಿಜಕ್ಕೂ ಒಕ್ಕಲಿಗರಾ? ಹಾಗೆ ಹೀಗೆ, ಅಂತೆಲ್ಲಾ ಕೆಲವರು ಮಾತನಾಡಿದ್ದಾರೆ. ಆದರೆ, ನಾನು ಆ ಲೆವೆಲ್ ಗೆ ಹೋಗಲ್ಲ. ಇನ್ನೇನು ಹದಿನೇಳು ದಿನಗಳಲ್ಲಿ ಜನರೇ ಅವರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಸುಮಲತಾ ಹೇಳಿದರು.
ನಮ್ಮ ರಕ್ಷಣಾ ಪಡೆಗಳನ್ನು ಸಾಮಾನ್ಯ ರಾಜಕೀಯ ಭಾಷಣಗಳಲ್ಲಿ ವ್ಯಾಖ್ಯಾನಿಸಲು ಸಾಧ್ಯವಿಲ್ಲ, ಹೀಗಾಗಿಯೇ ಕೆಲ ರಾಜಕಾರಣಿಗಳು ಜನರ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಜನರಲ್ ವಿ.ಕೆ.ಸಿಂಗ್ ಹೇಳಿದ್ದಾರೆ.
ಗೋವರ್ಧನ ಕ್ಷೇತ್ರದ ಮಹಿಳೆಯರ ಅಗತ್ಯತೆಗಳು ಹಾಗೂ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಹೇಮಾ ಮಾಲಿನಿ, ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರೊಂದಿಗೆ ತಾವೂ ಕುಡುಗೋಲು ಹಿಡಿದು ಕೆಲಸ ಮಾಡಿ ಸಹಾಯ ಮಾಡಿದರು.
ಮೈ ಭಿ ಚೌಕಿದಾರ್ ಅಭಿಯಾನದ ಭಾಗವಾಗಿ ಪ್ರಧಾನಿ ಮೋದಿ ವಿಡಿಯೋ ಸಂವಾದದ ಮೂಲಕ ದೇಶವನ್ನು ಉದ್ದೇಶಿಸಿ ಮಾತನಾಡಿದರು.ಇದೇ ವೇಳೆ ಬಿಜೆಪಿ ಪ್ರಮುಖ ನಾಯಕರು ಕೂಡ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೇವಲ ಪ್ರಧಾನಿ ಮೋದಿ ಮಾರ್ಕೆಟಿಂಗ್ ಗಷ್ಟೇ ಸೀಮಿತವಾಗಿರುವ ನೀತಿ ಆಯೋಗವನ್ನು ರದ್ದು ಪಡಿಸಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದರು. ಈ ನೀತಿ ಆಯೋಗದ ಬದಲು ಈ ಹಿಂದಿನ ಯೋಜನಾ ಆಯೋಗವನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಲೋಕಸಭೆ ಚುನಾವಣೆ ಮೊದಲು ಬಿಡುಗಡೆಯಾಗಲಿರುವ ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ "ನಮ್ಮ ಪ್ರಣಾಳಿಕೆ ಜನರ ಧ್ವನಿಯನ್ನು ಪ್ರತಿನಿಧಿಸುತ್ತದೆ ಹೊರತು ಕೇವಲ ಒಬ್ಬನ ಅಭಿಪ್ರಾಯವಲ್ಲ" ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
2015 ರಲ್ಲಿನ ಹಿಂಸಾಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ತಡೆ ನೀಡಬೇಕೆಂದು ಹಾರ್ದಿಕ್ ಪಟೇಲ್ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದೆ.ಈ ಹಿನ್ನಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಚ್ಚಿಸಿದ್ದ ಹಾರ್ದಿಕ್ ಪಟೇಲ್ ಗೆ ಹಿನ್ನಡೆಯಾಗಿದೆ.
ರೈಲ್ವೆಯೊಂದರಲ್ಲಿ ಈಗ ಮೈ ಬಿ ಚೌಕಿದಾರ್' ಕಪ್ ಮೂಲಕ ರೈಲ್ವೆಯಲ್ಲಿ ಚಹಾ ಸರಬರಾಜು ಮಾಡಲಾಗಿದೆ.ಈಗ ಈ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಂತರ ಈ ತಪ್ಪನ್ನು ಒಪ್ಪಿಕೊಂಡ ಐಆರ್ಸಿಟಿಸಿ ತಕ್ಷಣ ಈ ಕಪ್ ನ ಸೇವೆಯನ್ನು ಸ್ಥಗಿತಗೊಳಿಸಿದೆ.
ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಸಂಗಣ್ಣ ಕರಡಿ, ರಾಯಚೂರು ಕ್ಷೇತ್ರದಿಂದ ರಾಜಾ ಅಮ್ರೇಶ್ ನಾಯಕ್ ಮತ್ತು ಚಿಕ್ಕೋಡಿ ಕ್ಷೇತ್ರದಿಂದ ಅಣ್ಣಾ ಸಾಹೇಬ್ ಜೊಲ್ಲೆ ಅವರಿಗೆ ಟಿಕೆಟ್ ನೀಡಿ ಘೋಷಿಸಲಾಗಿದೆ.
ತಮಿಳುನಾಡಿನ ಸೇಲಂ ನಿವಾಸಿ ಪದ್ಮರಾಜನ್ನ್(60) ಅವರು 1988ರಲ್ಲಿ ಮೊದಲ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದರು. ಆದರೆ ಸೋಲಿಗೆ ಹೆದರದೆ ಮರಳಿ ಯತ್ನವ ಮಾಡು ಎಂಬಂತೆ ಇದುವರೆಗೂ 170 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದಾರೆ. ಆದರೆ ಇದುವರೆಗೂ ಒಂದು ಬಾರಿಯೂ ಗೆಲುವು ಸಾಧಿಸಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.