ಕ್ರಿಕೆಟಿನ ಎಲ್ಲ ಮಾದರಿಯಲ್ಲಿ ಯಶಸ್ವಿಯಾಗಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ನಿರಂತರವಾಗಿ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಸಾಕಷ್ಟು ರನ್ ಗಳಿಸುತ್ತಿದ್ದಾರೆ. ಆದರೆ ಅವರ ನಾಯಕತ್ವದ ಬಗ್ಗೆ ಮಾಜಿ ಕ್ರಿಕೆಟ್ ಆಟಗಾರರು ನಿರಂತರವಾಗಿ ಪ್ರಶ್ನಿಸುತ್ತಲೇ ಬಂದಿದ್ದಾರೆ. ಈಗ ಅಂತವರ ಸಾಲಿಗೆ ಗೌತಮ್ ಗಂಭೀರ್ ಕೂಡ ಸೇರಿದ್ದಾರೆ.
ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಅಜೇಯ 72 ರನ್ ಗಳಿಸುವ ಮೂಲಕ ಟಿ-20 ಕ್ರಿಕೆಟ್ ನಲ್ಲಿ ಅಧಿಕ ರನ್ ಗಳಿಸಿದ ಆಟಗಾರ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ.
ಮೂರು ಪಂದ್ಯಗಳ ಟಿ 20 ಸರಣಿಗೆ ಭಾರತ ಮತ್ತು ದಕ್ಷಿಣ ಆಫ್ರಿಕಾ ಪರಸ್ಪರ ಅಣಿಯಾಗುತ್ತಿರುವ ಸಂದರ್ಭದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಎಂ.ಎಸ್.ಧೋನಿ ಅವರನ್ನು ಶ್ಲಾಘಿಸಿದರು, 'ಅವರು ಯಾವಾಗಲೂ ಭಾರತೀಯ ಕ್ರಿಕೆಟ್ ಬಗ್ಗೆ ಯೋಚಿಸುತ್ತಾರೆ ಮತ್ತು ಅವರ ಅನುಭವಕ್ಕೆ ಯಾವುದೇ ಪರ್ಯಾಯವಿಲ್ಲ ಎಂದು ಹೇಳಿದರು.
ಒಂದು ವರ್ಷದ ನಿಷೇಧದ ನಂತರ ಕ್ರಿಕೆಟ್ ಗೆ ಮರಳಿರುವ ಸ್ಟೀವ್ ಸ್ಮಿತ್ ಈಗ ಇದುವರೆಗೆ ನಾಲ್ಕು ಇನ್ನಿಂಗ್ಸ್ ಗಳಲ್ಲಿ 589 ರನ್ ಗಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಸಕ್ತ ಕಾಲದಲ್ಲಿ ಕ್ರಿಕೆಟಿನಲ್ಲಿ ಶ್ರೇಷ್ಠ ಆಟಗಾರರು ಯಾರು ಎನ್ನುವ ಪ್ರಶ್ನೆ ಮತ್ತೆ ಮುನ್ನಲೆಗೆ ಬಂದಿದೆ.
ಆಧುನಿಕ ಕ್ರಿಕೆಟ್ ಯುಗದ ತಾಲಿಸ್ಮನ್ ಎಂದು ಪರಿಗಣಿಸಲ್ಪಟ್ಟಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಎಲ್ಲಾ ಸ್ವರೂಪದ ಕ್ರಿಕೆಟ್ ನಲ್ಲಿ ಸತತವಾಗಿ ರನ್ ಗಳಿಸುತ್ತಿದ್ದಾರೆ.ಇನ್ನೊಂದೆಡೆ ಅವರು ಸಚಿನ್ ತೆಂಡೂಲ್ಕರ್ ಅವರ ಏಕದಿನ ದಾಖಲೆಯನ್ನು ಅತಿ ಶೀಘ್ರದಲ್ಲಿಯೇ ಮೀರಿಸಲು ಸಜ್ಜಾಗಿದ್ದಾರೆ.
ಕೇವಲ ಒಂದೇ ದಶಕದ ಅವಧಿಯಲ್ಲಿ 20,000 ಕ್ಕೂ ಹೆಚ್ಚು ಅಂತರರಾಷ್ಟ್ರೀಯ ರನ್ ಗಳಿಸಿ ನೂತನ ದಾಖಲೆ ಮಾಡಿರುವ ವಿರಾಟ್ ಕೊಹ್ಲಿ, ಈಗ ಸೋಶಿಯಲ್ ಮೀಡಿಯಾ ಪ್ಲಾಟ್ಫಾರ್ಮ್ಗಳಲ್ಲಿಯೂ ಕೂಡ ಅಗ್ರಸ್ತಾನ ಪಡೆದಿದ್ದಾರೆ.
ಭಾರತ ಕ್ರಿಕೆಟ್ ತಂಡಕ್ಕೆ ಕೋಚ್ ಆಗಿ ಮರು ಆಯ್ಕೆಯಾಗಿರುವ ರವಿಶಾಸ್ತ್ರಿ ಆಯ್ಕೆ ವಿಚಾರದಲ್ಲಿ ಕೊಹ್ಲಿ ಪ್ರಭಾವ ಇಲ್ಲ ಎಂದು ಕ್ರಿಕೆಟ್ ಸಲಹಾ ಸಮಿತಿ ಅಧ್ಯಕ್ಷ ಕಪಿಲ್ ದೇವ್ ಸ್ಪಷ್ಟಪಡಿಸಿದ್ದಾರೆ.
ಭಾರತ ಕ್ರಿಕೆಟ್ ಕಂಡ ಅತ್ಯುತ್ತಮ ನಾಯಕರಲ್ಲಿ ಒಬ್ಬರಾಗಿರುವ ಮಾಜಿ ನಾಯಕ ಸೌರವ್ ಗಂಗೂಲಿ ಕೂಡ ತಂಡದ ಕೋಚ್ ಆಗಲು ಬಯಸಿದ್ದಾರೆ. ಆದರೆ ಅದಕ್ಕೆ ಒಂದು ಕಂಡಿಶನ್, ಅದೇನಪ್ಪಾ ಅಂದರೆ ಅವರು ಈ ಬಾರಿ ಅಲ್ಲ ಕೋಚ್ ಆಗಲು ಹೊರಟಿರುವುದು, ಮುಂಬರುವ ದಿನಗಳಲ್ಲಿ ಎಂದು ಅವರು ಹೇಳಿದ್ದಾರೆ.
ನವದೆಹಲಿ: ಸುಪ್ರೀಂಕೋರ್ಟ್ ನೇಮಕ ಮಾಡಿದ ನಿರ್ವಾಹಕರ ಸಮಿತಿ (ಸಿಒಎ) ಭಾರತದ ವಿಶ್ವಕಪ್ ಪ್ರದರ್ಶನದ ವಿಚಾರವಾಗಿ ನಾಯಕ ವಿರಾಟ್ ಕೊಹ್ಲಿ ಮತ್ತು ಮುಖ್ಯ ಕೋಚ್ ರವಿಶಾಸ್ತ್ರಿ ಅವರನ್ನು ವಿಚಾರಣೆಗೆ ಒಳಪಡಿಸಲಿದೆ. ಅಲ್ಲದೆ, ಮುಂದಿನ ವರ್ಷದ ವಿಶ್ವ ಟಿ 20 ಗಾಗಿ ಮಾರ್ಗಸೂಚಿಯನ್ನು ಪರಿಶೀಲನೆ ನಡೆಸಲಿದೆ ಎಂದು ಹೇಳಿದೆ.
ಆಗಸ್ಟ್ 3 ರಿಂದ ಪ್ರಾರಂಭವಾಗುವ ವೆಸ್ಟ್ ಇಂಡೀಸ್ ಸರಣಿಗೆ ಭಾರತದ ನಾಯಕ ವಿರಾಟ್ ಕೊಹ್ಲಿ ಮತ್ತು ವೇಗಿ ಜಸ್ಪ್ರೀತ್ ಬುಮ್ರಾ ವಿಶ್ರಾಂತಿ ಪಡೆಯುವ ಸಾಧ್ಯತೆ ಇದೆ. ಭಾರತವು ಕೆರಿಬಿಯನ್ ತಂಡದ ವಿರುದ್ಧ ಮೂರು ಟಿ 20, ಮೂರು ಏಕದಿನ ಮತ್ತು ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ.
ವಿಶ್ವಕಪ್ 12 ಆವೃತ್ತಿಯಲ್ಲಿ ಮ್ಯಾಂಚೆಸ್ಟರ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಮೊದಲ ಸೆಮಿಫೈನಲ್ ಪಂದ್ಯವನ್ನು ಮಂಗಳವಾರ ಆಡಲು ಭಾರತ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಜನರು ಸಂಗಮದಲ್ಲಿ ಪೂಜೆ ಮಾಡುವ ಮೂಲಕ ಹಾಗೂ ದರ್ಗಾದಲ್ಲಿ ಚಾದರ್ ಅರ್ಪಿಸುವ ಮೂಲಕ ಭಾರತ ತಂಡದ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ಟಾಸ್ ಬಗ್ಗೆ ನಮಗೆ ಚಿಂತೆಯಿಲ್ಲ. ಟಾಸ್ ಗೆಲ್ಲಲಿ ಅಥವಾ ಸೋಲಲಿ ನಾವು ಆಟ ಆಡಲು ಸಿದ್ಧರಿದ್ದೇವೆ. ಆದರೆ ಸೆಮಿಫೈನಲ್ಸ್ ಪಂದ್ಯದ ಟಾಸ್ ಸ್ವಲ್ಪ ವಿಭಿನ್ನವಾಗಿರಲಿದೆ ಎಂದು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಭಾನುವಾರ ಭಾರತ -ಇಂಗ್ಲೆಂಡ್ ನಡುವಿನ ಪಂದ್ಯ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ.ಈ ಹಿನ್ನಲೆಯಲ್ಲಿ ಈಗ ಇಂಗ್ಲೆಂಡ್ ತಂಡದ ಆಲ್ ರೌಂಡರ್ ಮೊಯಿನ್ ಅಲಿ ವಿರಾಟ್ ಕೊಹ್ಲಿ ವಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ.
ಭಾರತದ ಮುಖ್ಯ ಕೋಚ್ ರವಿಶಾಸ್ತ್ರಿ ಈಗ ಮಾಜಿ ನಾಯಕ ಧೋನಿ ಹಾಗೂ ಹಾಲಿ ನಾಯಕ ವಿರಾಟ್ ಕೊಹ್ಲಿ ಅವರನ್ನು ಹೋಲಿಕೆ ಮಾಡುತ್ತಾ ಇಬ್ಬರು ವಿಭಿನ್ನ ವ್ಯಕ್ತಿತ್ವದವರು, ಆದರೆ ಇಬ್ಬರು ಚಾಂಪಿಯನ್ಸಗಳು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.