ಕುಮಾರಸ್ವಾಮಿ ತಮ್ಮ ಬಳಿ 7 ಸಚಿವರ ಅಕ್ರಮಗಳ ಬಗ್ಗೆ ದಾಖಲೆಗಳಿವೆ ಎಂದು ಹೇಳುತ್ತಿದ್ದಾರೆ ಎಂದು ಕೇಳಿದಾಗ, ಅವರ ಬಳಿ ದಾಖಲೆಗಳು ಇದ್ದರೆ ಬಿಡುಗಡೆ ಮಾಡಲಿ. ಚಂದ್ರಶೇಖರ್ ಅವರನ್ನು ನಾನು ನೋಡಿಯೂ ಇಲ್ಲ, ಮಾತನಾಡಿಯೂ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಹರಿಹರದಿಂದ ಸಾತಾನೂರುವರೆಗೆ ಶಾಲಾ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಬೇಕು ಎಂದು ಸಾತನೂರು ಗ್ರಾಮಾಂತರ ಪ್ರೌಢಶಾಲೆಯ ವಿದ್ಯಾರ್ಥಗಳ ಮನವಿಗೆ ಸ್ಪಂಧಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಂದಿನ ಜನಸ್ಪಂದನ ಸಭೆಯಲ್ಲಿ ಅರ್ಜಿ ಬರೆಯಲು 5 ಕೌಂಟರ್ ಗಳು ಹಾಗೂ ಇಲಾಖೆವಾರು ಅರ್ಜಿ ಸ್ವೀಕರಿಸಲು ಕೌಂಟರ್ ಗಳನ್ನು ತೆರೆಯಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸೂಚನೆ ನೀಡಿದರು.
ನನ್ನ ಬಳಿ ಇರುವ ದಾಖಲೆಗಳನ್ನು ಬಿಡುಗಡೆ ಮಾಡಿದರೆ ಕಾಂಗ್ರೆಸ್ ಸರ್ಕಾರದ ಏಳು ಜನ ಮಂತ್ರಿಗಳು ರಾಜೀನಾಮೆ ನೀಡಬೇಕಾಗುತ್ತದೆ ಎನ್ನುವ ಹೇಳಿಕೆ ಬಗ್ಗೆ ಕೇಳಿದಾಗ, "ದಾಖಲೆಗಳನ್ನು ಬಿಡುಗಡೆ ಮಾಡಲು ಬೇಡ ಎಂದವರು ಯಾರು?" ಎಂದರು.
ಗಂಭೀರ ಪ್ರಕರಣಗಳು ಎದುರಾದಾಗ ನಮ್ಮ ಅಧಿಕಾರಿಗಳು ತನಿಖೆಗೆ ಸೂಕ್ತರಲ್ಲ ಎನ್ನುವ ಅಭಿಪ್ರಾಯ ಬಂದರೆ,ಆ ವೇಳೆ ಸಿಬಿಐಗೆ ನೀಡುವ ಬಗ್ಗೆ ಚಿಂತನೆ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಭವಿಷ್ಯದ ಅಗತ್ಯಗಳನ್ನು ಪೂರೈಸುವ ರೀತಿಯಲ್ಲಿ ವಿಶೇಷ ವಿನ್ಯಾಸ ಮಾಡಿರುವ ಈ ಕ್ವಿನ್ ಸಿಟಿ-ಯು ಸುಸ್ಥಿರತೆ, ಮನೆ, ಕೆಲಸದ ಸ್ಥಳ ಮತ್ತು ಅತ್ಯಾಧುನಿಕ ನಗರ ಸೇರಿದಂತೆ ಬದುಕಿನ ವಿವಿಧ ಸಂಗತಿಗಳಲ್ಲಿ ತಂತ್ರಜ್ಞಾನದ ನೆರವಿನಿಂದ ದಕ್ಷತೆ ಹಾಗೂ ಅನುಕೂಲತೆಗಳನ್ನು ಗರಿಷ್ಠ ಪ್ರಮಾಣದಲ್ಲಿ ಸುಧಾರಿಸುವ ʼಸ್ಮಾರ್ಟ್ ಲಿವಿಂಗ್ʼ ಪರಿಕಲ್ಪನೆ .
ಕ್ವಿನ್ ಸಿಟಿ ಯೋಜನೆಯ ಮೂಲಕ ಸರ್ಕಾರ ಮತ್ತು ಸಂಪುಟ ಸಹೋದ್ಯೋಗಿಗಳು ಉದ್ಯಮಿಗಳ ಜೊತೆ ನಿಲ್ಲುತ್ತದೆ.ಎಲ್ಲರೂ ಒಟ್ಟಿಗೆ ಸೇರಿ ಉತ್ತಮ ಯೋಜನೆಯನ್ನು ಸಾಕಾರಗೊಳಿಸೋಣ" ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ಬಿಬಿಎಂಪಿಗೆ ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಮುಕ್ತಾಯ
ಮಧ್ಯರಾತ್ರಿ ಡಿಸಿಎಂ ಡಿಕೆಶಿಯಿಂದ ಬೆಂಗಳೂರು ರೌಂಡ್ಸ್
ರಸ್ತೆ ಗುಂಡಿ ಮುಚ್ಚಿರುವ ಕಾರ್ಯದ ಪ್ರಗತಿ ಪರೀಶೀಲನೆ
14 ಸಾವಿರಕ್ಕೂ ಹೆಚ್ಚು ಗುಂಡಿ ಕ್ಲೋಸ್ ಮಾಡಿದ್ದೀವೆಂದ ಡಿಕೆಶಿ
ಕಾಮಗಾರಿಯ ಗುಣಮಟ್ಟ ಪರೀಕ್ಷೆ ಮಾಡಿದ ಡಿಸಿಎಂ ಡಿಕೆಶಿ
ಮುನಿರತ್ನ ಅವರ ನೇತೃತ್ವದಲ್ಲಿ ಏಡ್ಸ್ ಸೋಂಕನ್ನು ಅವರ ವಿರೋಧಿಗಳಿಗೆ ಹರಡಿಸುವ ಯತ್ನ ನಡೆದಿದೆ. “ಯಾರನ್ನೆಲಾ ಬಳಸಿಕೊಂಡು ಸೋಂಕನ್ನು ಹರಡಿಸಲಾಗಿದೆ. ಈ ಜಾಲದಲ್ಲಿ ಯಾರೆಲ್ಲಾ ಇದ್ದಾರೆ ಎನ್ನುವುದು ತನಿಖೆ ಮೂಲಕ ಬಹಿರಂಗಗೊಳಿಸಬೇಕಿದೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಆರೋಪಿಸಿದರು.
ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಪ್ರಕರಣ. ಡಿಸಿಎಂ ಡಿಕೆಶಿಗೆ ಶುರುವಾಗುತ್ತಾ ಸಂಕಷ್ಟ..? ಸುಪ್ರೀಂ ಕೋರ್ಟ್ನಲ್ಲಿ ಇಂದು ಅರ್ಜಿ ವಿಚಾರಣೆ. ನ್ಯಾ.ಸೂರ್ಯ ಕಾಂತ್ ನೇತೃತ್ವದ ಪೀಠದಲ್ಲಿ ವಿಚಾರಣೆ. ಹೈಕೋರ್ಟ್ ಆದೇಶ ಪ್ರಶ್ನೆ ಮಾಡಿರುವ ಶಾಸಕ ಯತ್ನಾಳ್. ಈ ಪ್ರಕರಣದಲ್ಲಿ CBI ಇನ್ನೂ ಅರ್ಜಿ ಸಲ್ಲಿಕೆ ಮಾಡಿಲ್ಲ.
8ನೇ ದಿನವೂ ನಗರದಲ್ಲಿ ಗುಂಡಿ ಮುಚ್ಚುವ ಕಾರ್ಯ ಚುರುಕು
ಇಂದು ಬೊಮ್ಮನಹಳ್ಳಿಯಲ್ಲಿ ಗುಂಡಿಮುಕ್ತ ಕಾರ್ಯಕ್ಕೆ ಚಾಲನೆ
ಡಿಕೆಶಿ ಕೊಟ್ಟ ಒಂದೇ ಒಂದು ಸಂದೇಶಕ್ಕೆ ಬೆದರಿರೋ ಬಿಬಿಎಂಪಿ
ಸೆ.15ಕ್ಕೆ ಗುಂಡಿಮುಕ್ತ ನಗರ ಆಗಿರಬೇಕೆಂದು ವಾರ್ನ್ ಮಾಡಿದ್ದ ಡಿಕೆ
ಬೆಂಗಳೂರಿನಲ್ಲಿ ಗುಂಡಿ ಹಾವಳಿಗೆ ಬೇಸತ್ತಿರುವ ವಾಹನ ಸವಾರರು
ಒಂದೆಡೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಕೇಸ್ ಟೆನ್ಷನ್
ಇತ್ತ ಅಮೆರಿಕದಲ್ಲಿ ರಾಹುಲ್ ಗಾಂಧಿ ಭೇಟಿಯಾದ ಡಿಸಿಎಂ ಡಿಕೆ
ರಾಹುಲ್ ಗಾಂಧಿಯನ್ನು ಭೇಟಿಯಾದ ಡಿಕೆಶಿ ಹಾಗೂ ಅವರ ಪತ್ನಿ
ಅಮೆರಿಕದ ವಾಷಿಂಗ್ಟನ್ನಲ್ಲಿ ಭೇಟಿಯಾದ ಉಭಯ ನಾಯಕರು
ಕುರ್ಚಿ ಕಾಳಗ ತಾರಕಕ್ಕೆ ಏರಿರುವ ನಡುವೆಯೇ ಭೇಟಿ ಕುತೂಹಲ
ಇಂದೂ ಕೂಡ ನಡೆಯಲಿದೆ ನಗರದ ದಕ್ಷಿಣ ವಲಯದಲ್ಲಿ ನಡೆಯಲಿರೋ ಗುಂಡಿ ಮುಚ್ಚುವ ಕಾರ್ಯ. ಬಿಟಿಎಂ ಲೇಔಟ್ ನ ಪೋಸ್ಟ್ ಆಫೀಸ್ ಬಳಿ ಗುಂಡಿ ಮುಚ್ಚು ಕಾರ್ಯಕ್ಕೆ ಚಾಲನೆ. ಉಪಮುಖ್ಯಮಂತ್ರಿಗಳ ಆದೇಶ ಹಾಗೂ ಮುಖ್ಯ ಆಯುಕ್ತರ ನಿರ್ದೇಶನದಂತೆ ಕಾರ್ಯ . ವಲಯ ಆಯುಕ್ತರ ನೇತೃತ್ವದಲ್ಲಿ ನಡೆಯಲಿರುವ ಕಾಮಗಾರಿ. ಸ್ಥಳದಲ್ಲಿ ಚೀಫ್ ಇಂಜಿನಿಯರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತಿ. ಬೆಳಗ್ಗೆ 11.30ಕ್ಕೆ ಗುಂಡಿ ಮುಚ್ಚು ಕಾರ್ಯಕ್ಕೆ ಚಾಲನೆ .
Siddaramaiah Resign: ಸಿದ್ದರಾಮಯ್ಯ ಹೋಗೋದು ಫಿಕ್ಸ್ ಆಗಿದ್ದು, ಹೀಗಾಗಿ ಕಾಂಪಿಟೇಶನ್ ಶುರುವಾಗಿದೆ. ಒಂದು ಡಜನ್ ಗೆ ಹೆಚ್ಚು ಜನ ಆಕಾಂಕ್ಷಿಗಳಾಗಿದ್ದಾರೆ ಎಂದು ಮಾಜಿ ಸಚಿವ ಸಿಟಿ ರವಿ ತಿಳಿಸಿದರು.
ಉಚಿತ ಯೋಜನೆಗಳನ್ನು ಘೋಷಿಸಿದ ಹಿಮಾಚಲ ಪ್ರದೇಶದ ಸ್ಥಿತಿಯೇ ಕರ್ನಾಟಕಕ್ಕೂ ಎದುರಾಗಲಿದೆ. ಕಾಂಗ್ರೆಸ್ಸಿನ ಯೋಚನಾ ರಹಿತವಾದಂತಹ ಉಚಿತ ಯೋಜನೆಗಳಿಂದಾಗಿ ಈಗ ರಾಜ್ಯದಲ್ಲಿ ದೊಡ್ಡ ಆರ್ಥಿಕ ಅಸಮತೋಲನವೇ ಉಂಟಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಳವಳ ವ್ಯಕ್ತಪಡಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.