Karnataka Election Campaign: ಮೊದಲ ಬಾರಿಗೆ ನಾನು ಈ ಊರಿಗೆ ಬಂದಿದ್ದೇನೆ. ಬಹಳ ಸುಂದರವಾಗಿ ನನ್ನನ್ನು ಸ್ವಾಗತ ಮಾಡಿದ್ದೀರಿ. ಸಂತ ಶಿಶುನಾಳ ಶರೀಫರ ಭೂಮಿಯಲ್ಲಿ ಪ್ರಚಾರ ಆರಂಭಿಸಿದ್ದು ಬಹಳ ಸಂತಸ ತಂದಿದೆ. ಬಸವರಾಜ ಬೊಮ್ಮಾಯಿ ಅವರು ನಾಮಕಾವಸ್ಥೆ ಅಲ್ಲ. ಕಾಮ್’ಕಾವಸ್ಥೆ. ಅಭಿವೃದ್ಧಿ ಆಗಬೇಕೆಂದರೆ ಮತ್ತೆ ಬೊಮ್ಮಾಯಿ ಅವರಿಗೆ ಮತ್ತೊಂದು ಅವಕಾಶ ನೀಡಿ ಎಂದರು.
ಕಿಚ್ಚ ಸುದೀಪ್ ನಟನೆಯಲ್ಲಷ್ಟೇ ಅಲ್ಲದೆ ಹಲವು ಸಮಾಜಮುಖಿ ಕಾರ್ಯಗಳನ್ನುೂ ಮಾಡುತ್ತಾ ಮನಗೆದ್ದವರು. 'ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ' ವತಿಯಿಂದ ಇಂದಿಗೂ ಅದೆಷ್ಟೋ ಜೀವಗಳಿಗೆ ಆಶಾಕಿರಣವಾಗಿದ್ದಾರೆ. ಹೌದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ತಂಡ ಈಗ ಮತ್ತೊಂದು ಕಾರ್ಯದಲ್ಲಿ ತೊಡಗಿ ಕೊಂಡಿದೆ.
ಕನ್ನಡ ಚಿತ್ರರಂಗದಲ್ಲಿ ಸ್ಮಾರ್ಟ್ ಅಂಡ್ ಸ್ಟೈಲಿಶ್ ನಟ ಯಾರಪ್ಪ ಅಂತ ಯಾರನ್ನಾದ್ರು ಕೇಳಿದ್ರೆ ಯೋಚನೆ ಮಾಡದೆ ಕಿಚ್ಚ ಸುದೀಪ್ ಅಂತಾರೆ.. ಸಿನಿಮಾ ಅಷ್ಟೇ ಅಲ್ಲಾ ಕ್ರಿಕೆಟ್ ನಲ್ಲೂ ಆಕ್ಟೀವ್ ಆಗಿರೋ ಕಿಚ್ಚನ ಎನರ್ಜಿಗೆ ಹರೆಯದ ಯುವಕರು ಸಲಾಂ ಹೊಡೆಯಲೇ ಬೇಕು
ಕಳೆದ ಸಲ ವಾಲ್ಮೀಕಿ ಜಾತ್ರೆಗೆ ನಟ ಸುದೀಪ್ ಆಗಮನ ವೇಳೆ ದಾಂಧಲೆ ನಡೆದಿತ್ತು. ಈ ಹಿನ್ನೆಲೆ ಈ ಬಾರಿ ವಾಲ್ಮೀಕಿ ಜಾತ್ರೆಯಲ್ಲಿ ಬಿಗಿ ಬಂದೋ ಬಸ್ತ್ ಕೈಗೊಳ್ಳಲಾಗಿದೆ.. ಇಂದು ವಾಲ್ಮೀಕಿ ಜಾತ್ರೆಯಲ್ಲಿ ಸುದೀಪ್ ಭಾಗವಹಿಸಲಿದ್ದಾರೆ.. ಈ ಹಿನ್ನೆಲೆ ಭದ್ರತೆ ಹೆಚ್ಚಿಸಲಾಗಿದೆ.
ಅನಾಥ ಗೋವುಗಳ ಪಾಲನೆ-ಪೋಷಣೆಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಮಾಡಿರುವ "ಪುಣ್ಯಕೋಟಿ ಯೋಜನೆ"ಯ ರಾಯಭಾರಿಯನ್ನಾಗಿ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನೇಮಿಸಿ ಸರ್ಕಾರ ವಿಶೇಷ ಗೌರವ ನೀಡಿದೆ.
ಭಾರತ ಸರ್ಕಾರದ ಅಂಚೆ ಇಲಾಖೆಯು ದೇಶದ ಮಹತ್ತರ ಘಟನೆಗಳನ್ನು, ಪ್ರಶಸ್ತಿಗಳನ್ನು ಅಥವಾ ವ್ಯಕ್ತಿಗಳ ಸಾಧನೆಗಳನ್ನು ನೂರಾರು ವರ್ಷ ದಾಖಲೆಯಾಗಿ ಉಳಿಸಬೇಕೆಂಬ ಕಾರಣಕ್ಕೆ 'ವಿಶೇಷ ಅಂಚೆ ಲಕೋಟೆಯನ್ನು' ಬಿಡುಗಡೆ ಮಾಡುತ್ತಿದೆ.
ಅಪ್ಪಟ ಕ್ರಿಕೆಟ್ ಪ್ರೇಮಿಯಾಗಿರುವ ಸುದೀಪ್ ಇಂದು ಬೆಳ್ಳಂ ಬೆಳಿಗ್ಗೆ ಬ್ಯಾಟ್ ಹಿಡಿದು ಮೈದಾನಕ್ಕಿಳಿದಿದ್ದರು. ಇದೀಗ ಸುದೀಪ್ ಪೊಲೀಸ್ ತಂಡದ ಜೊತೆ ಸ್ನೇಹ ಪೂರ್ವಕ ಪಂದ್ಯ ಆಡುತ್ತಿದ್ದಾರೆ. ನಿರ್ದೇಶಕ ನಂದಕಿಶೋರ್, ನಿರ್ಮಾಪಕ ಕೆ.ಪಿ ಶ್ರೀಕಾಂತ್, ಜೆಕೆ, ರಾಜೀವ್, ಬಿಗ್ ಬಾಸ್ ಖ್ಯಾತಿಯ ಮಂಜು ಪಾವಗಡ ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿದ್ದಾರೆ. ಬೆಂಗಳೂರಿನ ಬಿಜಿಎಸ್ ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಕಿಚ್ಚ ಸುದೀಪ್ ಜರ್ಸಿ ತೊಟ್ಟು ಮೈದಾನದಲ್ಲಿ ಆಟ ಆಡುವ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
Kiccha Sudeep playing cricket: ಅಪ್ಪಟ ಕ್ರಿಕೆಟ್ ಪ್ರೇಮಿಯಾಗಿರುವ ಸುದೀಪ್ ಇಂದು ಬೆಳ್ಳಂ ಬೆಳಿಗ್ಗೆ ಬ್ಯಾಟ್ ಹಿಡಿದು ಮೈದಾನಕ್ಕಿಳಿದಿದ್ದರು. ಸ್ಯಾಂಡಲ್ವುಡ್ನ ಅಭಿನಯ ಚಕ್ರವರ್ತಿ ಸುದೀಪ್ ಸದ್ಯ ಬಹುನಿರೀಕ್ಷಿತ ‘ವಿಕ್ರಾಂತ್ ರೋಣ‘ ಚಿತ್ರದ ಬಿಡುಗಡೆಯ ಸನಿಹದಲ್ಲಿದ್ದಾರೆ.
ಅಭಿನಯ ಚಕ್ರವರ್ತಿ ಸುದೀಪ್ ಇದ್ದಕ್ಕಿದ್ದಂತೆ ಕೇರಳದಲ್ಲಿರುವ ಒಂದು ಮನೆಗೆ ಭೇಟಿ ನೀಡಿದ್ದಾರೆ. ಬರೋಬ್ಬರಿ 15 ವರ್ಷಗಳ ಬಳಿಕ ಇಲ್ಲಿಗೆ ಭೇಟಿ ನೀಡಿದ ಅವರು ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.