ಒಂದು ಸಮುದಾಯದ ಬಗ್ಗೆ ಕೀಳಾಗಿ ಮಾತನಾಡುವುದು ನಿಲ್ಲಿಸಬೇಕು. ನಾಣ್ಣುಡಿ ಇದೆ ಅಂತಾ ಹೇಳಿ ಕೀಳಾಗಿ ಮಾತನಾಡುವುದು ಸರಿಯಲ್ಲ. ಇದನ್ನು ನಿಲ್ಲಿಸಿದರೆ ಒಳ್ಳೆಯದು, ಚುಚ್ಚು ಮಾತುಗಳನ್ನಾಡುವಾಗ ವಿವೇಚನೆ ಇರಬೇಕು ಎಂದು ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
Upendra Controversy: ರಾಜಕೀಯ ಪಕ್ಷ ಪ್ರಜಾಕೀಯ ಅಭಿಮಾನಿಗಳು ಮತ್ತು ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ನಟ, ಮಾತಿನ ಮಧ್ಯೆ ʻಊರಿದ್ದಲ್ಲಿ ಹೊಲಗೇರಿ ಇರುತ್ತೆʼ ಎಂದಿದ್ದರು. ಇದು ಅನೇಕ ದಲಿತ ಸಂಘಟನೆಗಳ ಅಸಮಾಧಾನಕ್ಕೆ ಕಾರಣವಾಗಿತ್ತು.
ಕನ್ನಡ ಗಾದೆಯನ್ನು ಬಳಸಿದ್ದಕ್ಕಾಗಿ ಅರ್ಜಿದಾರರ ವಿರುದ್ಧ ಸುಳ್ಳು ದೂರು ನೀಡಲಾಗಿದೆ. ಕ್ಷುಲ್ಲಕ ಮತ್ತು ಪ್ರಚಾರಕ್ಕಾಗಿ ದೂರನ್ನು ದಾಖಲಿಸಲಾಗಿದೆ. ಅರ್ಜಿದಾರರು ದಲಿತರು ಅಥವಾ ಎಸ್ಸಿ ಮತ್ತು ಎಸ್ಟಿಎಸ್ಗೆ ಸೇರಿದ ವ್ಯಕ್ತಿಗಳನ್ನು ಅವಮಾನಿಸಿಲ್ಲ ಎಂದು ನಟ ಉಪೇಂದ್ರ ಅವರು ತಮ್ಮ ವಿರುದ್ಧದ ಎಫ್ಐಆರ್ ರದ್ದತಿ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಇತ್ತೀಚೆಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಯ ಲೈವ್ನಲ್ಲಿ ಮಾತನಾಡಿದ್ದ ಉಪೇಂದ್ರ ಸಮುದಾಯವೊಂದರ ಕುರಿತು ಆಕ್ಷೇಪಾರ್ಹ ಪದ ಬಳಸಿದ್ದರು. ತಕ್ಷಣ ಎಚ್ಚೆತ್ತ ಉಪೇಂದ್ರ ಆ ವಿಡಿಯೋ ಡಿಲೀಟ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಕ್ಷಮೆಯಾಚಿಸಿದ್ದರು.
ನಿನ್ನೆ ಉಪೇಂದ್ರ ಅವರು ತಮ್ಮ ಅಭಿಮಾನಿಗಳ ಜೊತೆ ಪ್ರಜಾಕೀಯ ಮುನ್ನೆಲೆಗೆ ಬಂದು 6 ವರ್ಷವಾದ ಪ್ರಯುಕ್ತ ಸಂವಾದ ನಡೆಸಿದ್ದರು. ಈ ವೇಳೆ ಮಾತಿನ ಭರದಲ್ಲಿ ʼಊರು ಅಂದ್ಮೇಲೆ ಹೊಲ್ಗೇರಿ ಇರುತ್ತಲ್ಲಾ ಹಾಗೆ..ʼ ಅಂತ ಹೇಳಿದ್ದರು. ಈ ಮಾತು ಕೆಲವು ಸಮುದಾಯದ ಜನರಿಗೆ ನೋವುಂಟು ಮಾಡಿತ್ತು. ಅಲ್ಲದೆ, ಆಕ್ರೋಶ ವ್ಯಕ್ತವಾಗಿತ್ತು.
ಜಾಣ ಕುರುಡರೇ ನಿಮ್ಮನ್ನು ನೀವು ನೋಡಿಕೊಳ್ಳಿ. ಈ ನಿಮ್ಮ ನೀತಿ ನಿಯತ್ತು, ಪರಾಕ್ರಮ ಚುನಾವಣೆಯಲ್ಲಿ ಮತ ಕೇಳಲು ಬರುವ ಭ್ರಷ್ಟ ನಾಯಕರ ಮುಂದೆ ತೋರಿಸಿ ಎಂದು ಸೌಂದರ್ಯ ಜಗದೀಶ್ ಪುತ್ರನ ವಿಚಾರವಾಗಿ ಹೇಳಿಕೆ ನೀಡಿದ್ದಕ್ಕೆ ಕೆಟ್ಟದಾಗಿ ಕಾಮೆಂಟ್ ಮಾಡಿದ ಜನಕ್ಕೆ ನಟ, ನಿರ್ದೇಶಕ ಉಪೇಂದ್ರ ಅವರು ಪ್ರತ್ಯುತ್ತರ ನೀಡಿದ್ದಾರೆ.
ಸದಾ ಒಂದಲ್ಲ ಒಂದು ವಿಶಿಷ್ಟತೆಯ ಮೂಲಕ ಅಭಿಮಾನಿಗಳ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ನಟ, ನಿರ್ದೇಶಕ ಉಪೇಂದ್ರ ಅವರು ಸಧ್ಯ ತಮ್ಮ ಫ್ಯಾನ್ಸ್ಗೆ ಛಾಲೆಂಜ್ ಒಂದನ್ನು ನೀಡಿದ್ದು, ಗೆದ್ರೆ ಬಹುಮಾನ ನೀಡುವುದಾಗಿ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.