ನವೆಂಬರ್ 29ರಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮೂರು ಕಾನೂನುಗಳನ್ನು ಅಧಿಕೃತವಾಗಿ ಹಿಂಪಡೆಯುವ ಪ್ರಕ್ರಿಯೆಗೆ ಚಾಲನೆ ದೊರೆಯಲಿದ್ದು, ಇದಕ್ಕಾಗಿ ಸರ್ಕಾರ ಮಸೂದೆ ತರಲಿದೆ.
Bharat Bandh by Farmers: ಹೊಸ ಕೃಷಿ ಕಾನೂನುಗಳಿಗೆ (New Agriculture Laws) ವಿರುದ್ಧವಾಗಿ ಮಾರ್ಚ್ 26 ರಂದು ಭಾರತ್ ಬಂದ್ ಸಮಯದಲ್ಲಿ ರಸ್ತೆ ಮತ್ತು ರೈಲು ಸಾರಿಗೆ, ಮಾರುಕಟ್ಟೆಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳನ್ನು ಮುಚ್ಚಲಾಗುವುದು.
ಕೇಂದ್ರ ಸರ್ಕಾರ ಅವಸರದಲ್ಲಿ ಕೃಷಿ ಬಿಲ್ ಗಳನ್ನು ಪಾಸ್ ಮಾಡಬಾರದಿತ್ತು. ಕೃಷಿ ಕಾನೂನುಗಳ ಬಗ್ಗೆ ಇನ್ನೂ ಎರಡ್ಮೂರು ತಿಂಗಳ ಕಾಲಾವಕಾಶ ತಗೊಳ್ಳಿ. ಚರ್ಚೆ ಮಾಡಿ ಅಂತಿಮ ನಿರ್ಧಾರ ಕೈಗೊಳ್ಳಿ- ಎಚ್.ಡಿ. ದೇವೇಗೌಡ
ಹೊಸ ಕೃಷಿ ಕಾನೂನುಗಳ ವಿರುದ್ಧ ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಇಂದು 3 ಗಂಟೆಗಳ ರಾಷ್ಟ್ರವ್ಯಾಪಿ ಚಕ್ಕಾ ಜಾಮ್ಗೆ ಕರೆ ನೀಡಿದ್ದಾರೆ. ಚಕ್ಕಾ ಜಾಮ್ನಲ್ಲಿ ಹಿಂಸಾಚಾರದ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಪೊಲೀಸರು ಸೇರಿದಂತೆ ವಿವಿಧ ರಾಜ್ಯಗಳ ಪೊಲೀಸರು ಭಾರೀ ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಕೃಷಿ ಕಾನೂನುಗಳ (Agriculture Laws) ವಿರುದ್ಧ ರೈತರ ಪ್ರತಿಭಟನೆಗೆ (Farmers Protest) ಪ್ರತಿಕ್ರಿಯಿಸುವ ಮೂಲಕ ಯುನೈಟೆಡ್ ಸ್ಟೇಟ್ಸ್ ಕಾನೂನುಗಳನ್ನು ಬೆಂಬಲಿಸಿದೆ. ರೈತ ಚಳವಳಿಯ ಬಗ್ಗೆ ಅಮೆರಿಕ ನೀಡಿದ ಹೇಳಿಕೆಯ ನಂತರ ಭಾರತ ಪ್ರತಿಕ್ರಿಯಿಸಿದೆ.
ಈ ಪ್ರತಿಭಟನಾತ್ಮಕ ಟ್ರ್ಯಾಕ್ಟರ್ ಮೆರವಣಿಗೆಯಲ್ಲಿ 50ಕ್ಕೂ ಹೆಚ್ಚು ರೈತ ಸಂಘಟನೆಗಳು ಭಾಗವಹಿಸುತ್ತಿದ್ದು ಎಲ್ಲಾ ಸಂಘಟನೆಗಳಿಗೂ ಭಿನ್ನ ಭಿನ್ನವಾದ ಸ್ತಬ್ಧಚಿತ್ರಗಳನ್ನು ರೂಪಿಸುವಂತೆ ಸೂಚಿಸಲಾಗಿದೆ. ದೇಶದೆಲ್ಲೆಡೆಯಿಂದ ಸುಮಾರು ಒಂದು ಲಕ್ಷ ಟ್ರ್ಯಾಕ್ಟರ್-ಟ್ರಾಲಿಗಳು ಭಾಗವಹಿಸಲಿವೆ.
ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸೇರಿಸಲು ಕಾಂಗ್ರೆಸ್ ಮುಂದಾಗಿದೆ. ದೂರದ ಜಿಲ್ಲೆಗಳಿಂದ ಹೆಚ್ಚು ಜನ ಬರುವುದು ಕಷ್ಟು ಎಂಬ ಹಿನ್ನೆಲೆಯಲ್ಲಿ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಿಂದ ಹೆಚ್ಚಿನ ಜನರನ್ನು ಕರೆತರುವ ಉದ್ದೇಶ ಹೊಂದಿದೆ. ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳ ನಾಯಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಕರೆತರುವಂತೆ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ ಎಂದು ತಿಳಿದುಬಂದಿದೆ.
International Monetary Fund- ಕೃಷಿ ಕಾನೂನುಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿರುವ ಅಂತರರಾಷ್ಟ್ರೀಯ ಹಣಕಾಸು ನಿಧಿ, ಈ ಕಾನೂನುಗಳು ಕೃಷಿ ಕ್ಷೇತ್ರದಲ್ಲಿ ಸುಧಾರಣೆಗಾಗಿ ಮಹತ್ವದ ಹೆಜ್ಜೆಯಾಗಲಿದ್ದು, ಇವುಗಳಿಂದ ರೈತರ ಆದಾಯ ಕೂಡ ಹೆಚ್ಚಾಗಲಿದೆ ಎಂದು ಹೇಳಿದೆ.
ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ರಚಿಸಿರುವ ಸಮಿತಿಯಿಂದ ಭಾರತೀಯ ಕಿಸಾನ್ ಯುನಿಯನ್ ಅಧ್ಯಕ್ಷ ಹಾಗೂ ಮಾಜಿ ರಾಜ್ಯಸಭಾ ಸಂಸದ ಭೂಪಿಂದರ್ ಸಿಂಗ್ ಮಾನ್ ಹೊರಬಂದಿದ್ದಾರೆ.
Farmers Protest:ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ದಾಖಲಾಗಿರುವ ಅರ್ಜಿಗಳ ವಿಚಾರಣೆ ನಡೆಸಿರುವ ಸರ್ವೋಚ್ಛ ನ್ಯಾಯಾಲಯ, ಕೃಷಿ ಕಾನೂನುಗಳಿಗೆ ಕೇಂದ್ರ ಸರ್ಕಾರ ತಡೆ ನೀಡಲಿದೆಯೋ ಅಥವಾ ಇಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು. ಇಲ್ಲದೆ ಹೋದರೆ ನಾವು ತಡೆ ನೀಡಬೇಕಾಗುತ್ತದೆ ಎಂದು ಹೇಳಿದೆ.
ಮುಂದಿನ ಮಾತುಕತೆಯಲ್ಲಿ ರೈತ ಸಂಘಟನೆಯ ಪ್ರತಿನಿಧಿಗಳು ಪರ್ಯಾಯ ಮಾರ್ಗ ಹುಡುಕಬಹುದು, ಅದರಿಂದ ಪರಿಹಾರ ಸಿಗಬಹುದು ಎಂಬ ಭಾವನೆ ಇದೆ ಎಂದು ನರೇಂದ್ರ ಸಿಂಗ್ ಥೋಮರ್ ಹೇಳಿದರು. ಈ ಮುಖಾಂತರ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ಕೇಂದ್ರ ಸರ್ಕಾರ ಹಠಮಾರಿತನ ಮುಂದುವರೆಸುತ್ತದೆ ಎಂಬುದನ್ನು ಒಪ್ಪಿಕೊಂಡರು.
ಕೇಂದ್ರ ಸರ್ಕಾರ ಹಾಗೂ ರೈತರ ನಡುವೆ 7ನೇ ಸುತ್ತಿನ ಸಭೆ ನಡೆಯುವ ಮೊದಲೇ ರೈತರು 'ಮಾತುಕತೆ ಫಲಪ್ರದವಾಗದಿದ್ದರೆ, ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಒಪ್ಪದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು' ಎಂಬ ಎಚ್ಚರಿಕೆ ನೀಡಿದ್ದರು. ಈಗ ಪ್ರತಿಭಟನೆ ತೀವ್ರಗೊಳಿಸುವ ಹಿನ್ನೆಲೆಯಲ್ಲಿ ಟ್ರ್ಯಾಕ್ಟರ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
7ನೇ ಸುತ್ತಿನ ಮಾತುಕತೆ ವಿಫಲವಾದರೆ ಹರಿಯಾಣದ ಎಲ್ಲಾ ಶಾಪಿಂಗ್ ಮಾಲ್ ಹಾಗೂ ಟೋಲ್ ಫ್ಲಾಜಾಗಳನ್ನು ಮುಚ್ಚಿಸುವುದಾಗಿ ಮತ್ತು ಗಣರಾಜ್ಯೋತ್ಸವದ ದಿನ ದೆಹಲಿಯಲ್ಲಿ ಟ್ರ್ಯಾಕ್ಟರ್ ಮೆರವಣಿಗೆ ಮಾಡುವುದಾಗಿ ಪ್ರತಿಭಟನಾನಿರತ ರೈತರು ಬೆದರಿಕೆ ಹಾಕಿದ್ದಾರೆ.
ಟೊಮೆಟೊದ ಸಗಟು ಬೆಲೆ 30 ಪೈಸೆಗೆ ಕುಸಿದ ನಂತರ ರಾಯಲಸೀಮಾದ ಕೃಷಿ ಉತ್ಪಾದನಾ ಮಾರುಕಟ್ಟೆ ಸಮಿತಿ (ಎಪಿಎಂಸಿ) ಮಾರುಕಟ್ಟೆಯ ಆಡಳಿತದ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು. ನಮ್ಮ ಬೆಳೆ ಒಂದು ಪೈಸೆಯ ವೆಚ್ಚದಲ್ಲಿ ಮಾರಾಟವಾದರೆ ನಮ್ಮ ಗತಿ ಏನು ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.
ಕೆನಡಾ ಪ್ರಧಾನಿ ಕಳವಳದ ನಡುವೆಯೇ ಈಗ ಅಮೆರಿಕ, ಬ್ರಿಟನ್ ಸಂಸದರೂ ಕಳವಳ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಏನೋ ಸಮಸ್ಯೆ ಸೃಷ್ಟಿಯಾಗಿದೆ ಎಂಬರ್ಥವನ್ನು ರೈತರ ಈ ಹೋರಾಟ ಹೊಮ್ಮಿಸುತ್ತಿದೆ- ಎಚ್.ಡಿ. ಕುಮಾರಸ್ವಾಮಿ
PM Kisan Yojana: ಒಂದು ಕಡೆ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ಮೋದಿ ಸರ್ಕಾರ ರೈತರ ಖಾತೆಗಳಿಗೆ 2-2 ಸಾವಿರ ರೂಪಾಯಿಗಳನ್ನು ವರ್ಗಾಯಿಸಲಿದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯಡಿ ಯೋಜನೆಯ 7 ನೇ ಕಂತನ್ನು ನಾಳೆ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುವುದು.
'ಮನ್ ಕಿ ಬಾತ್' ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡುವ ಸಮಯದಲ್ಲಿ ದೇಶದ ಜನರು ತಟ್ಟೆ ಬಾರಿಸಿ, ಚಪ್ಪಾಳೆ ತಟ್ಟಿ ರೈತರ ಪ್ರತಿಭಟನೆಯನ್ನು ಬೆಂಬಲಿಸಬೇಕು. ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು' ಎಂದು ಮನವಿ ಮಾಡಲಾಗಿದೆ
ಪ್ರತಿಭಟನಾ ನಿರತ ರೈತರು ಹೊಸ ಕಾನೂನುಗಳು ಕನಿಷ್ಟ ಬೆಂಬಲ ಬೆಲೆಯ ವ್ಯವಸ್ಥೆಗೆ ಮಾರಕವಾಗಿವೆ. ಈಗಿರುವ ಮಂಡಿ ವ್ಯವಸ್ಥೆಯನ್ನು ತೆಗೆದುಹಾಕಲಾಗುತ್ತದೆ. ದೊಡ್ಡ ದೊಡ್ಡ ಕಾರ್ಪೊರೇಟ್ ಕಂಪನಿಗಳು ಕೃಷಿ ಕ್ಷೇತ್ರವನ್ನು ಆವರಿಸಿಕೊಂಡು ರೈತರು ಬೀದಿಗೆ ಬೀಳಬೇಕಾಗುತ್ತದೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.