ಎಸ್ಪಿಜಿ (ತಿದ್ದುಪಡಿ) ಮಸೂದೆ 2019 ಕ್ಕೆ ಮಂಗಳವಾರ (ಡಿಸೆಂಬರ್ 3ರಂದು ) ರಾಜ್ಯಸಭೆ ಅಂಗೀಕರಿಸಿದೆ.ಇದೇ ವೇಳೆ ಕಾಂಗ್ರೆಸ್, ಡಿಎಂಕೆ ಮತ್ತು ಎಡ ಪಕ್ಷದ ಸದಸ್ಯರು ಮಸೂದೆ ಮತದಾನದ ವೇಳೆ ಸಭಾ ತ್ಯಾಗ ಮಾಡಿದರು.
ಇಂತಹ ವಿಷಯಗಳು ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ ತರುತ್ತವೆ. ತನ್ನ ನಂಬಿಕೆಯನ್ನು ಹರಡುವ ಬದಲು ಉತ್ತರಗಳನ್ನು ಪಡೆಯುವ ಉತ್ತಮ ಮಾರ್ಗಗಳಿವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಮಹಾರಾಷ್ಟ್ರದ ರಾಜಕೀಯ ಪರಿಸ್ಥಿತಿ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಇಂದು ಬೆಳಿಗ್ಗೆ ಸಂಸತ್ತಿನೊಳಗೆ ಭೇಟಿಯಾದರು ಎನ್ನಲಾಗಿದೆ.
ಅಮರಾವತಿಯನ್ನು ನಕ್ಷೆಯಲ್ಲಿ ಸೇರಿಸಿದ್ದಕ್ಕಾಗಿ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಗೃಹ ಸಚಿವ ಅಮಿತ್ ಶಾ ಅವರಿಗೆ ಶನಿವಾರ ಧನ್ಯವಾದ ಅರ್ಪಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಶಿವಸೇನೆ-ಕಾಂಗ್ರೆಸ್ಗೆ ಮಾಸ್ಟರ್ ಸ್ಟ್ರೋಕ್ ನೀಡಿ ರಾಜ್ಯದಲ್ಲಿ ಬಿಜೆಪಿ-ಎನ್ಸಿಪಿ ಮೈತ್ರಿ ಸರ್ಕಾರ ರಚಿಸಿದೆ. ಬಿಜೆಪಿಯ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರೆ, ಎನ್ಸಿಪಿಯಾ ಅಜಿತ್ ಪವಾರ್ ಉಪಮುಖ್ಯಮಂತ್ರಿ ಪದಗ್ರಹಣ ಮಾಡಿದರು.
ಅಸ್ಸಾಂ ಮಾದರಿಯಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ದೇಶಾದ್ಯಂತ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ. ಯಾವುದೇ ಧರ್ಮದ ಜನರು ಇದರ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ ಎಂಬ ಅಂಶವನ್ನೂ ಅವರು ಒತ್ತಿ ಹೇಳಿದ್ದಾರೆ.
ಮಹಾರಾಷ್ಟ್ರದ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಅಮಿತ್ ಶಾ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿರುವ ಶಿವಸೇನಾ ವಕ್ತಾರ ಸಂಜಯ್ ರೌತ್ ಬಿಜೆಪಿ ಅಧ್ಯಕ್ಷ ಶಾ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
ನೂತನ ಮಹಾರಾಷ್ಟ್ರ ಸರ್ಕಾರದಲ್ಲಿ ಶಿವಸೇನಾಗೆ 50:50 ಸೂತ್ರದ ಅನುಸಾರವಾಗಿ ಮುಖ್ಯಮಂತ್ರಿ ಹುದ್ದೆ ನೀಡುವ ಭರವಸೆಯನ್ನು ಬಿಜೆಪಿ ಮುಖ್ಯಸ್ಥ ಅಮಿತ್ ಶಾ ತಿರಸ್ಕರಿಸಿದ್ದಾರೆ. ಅಲ್ಲದೆ ಚುನಾವಣಾ ಫಲಿತಾಂಶದ ನಂತರ ಸ್ಥಿತಿಯಲ್ಲಿ ಈ ಸೂತ್ರಕ್ಕೆ ಅಂಟಿಕೊಳ್ಳಲು ಸಾಧ್ಯವಿಲ್ಲ ಎಂದು ಅಮಿತ್ ಶಾ ತಿಳಿಸಿದ್ದಾರೆ.
ಅಯೋಧ್ಯೆ ಭೂ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಐತಿಹಾಸಿಕ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಶ್ಲಾಘಿಸಿದ್ದಾರೆ. ಈ ತೀರ್ಪು ಭಾರತದ ಏಕತೆ ಮತ್ತು ಅದರ ಶ್ರೇಷ್ಠ ಸಂಸ್ಕೃತಿಗೆ ಶಕ್ತಿ ನೀಡುತ್ತದೆ ಎಂದು ಶಾ ಹೇಳಿದ್ದಾರೆ.
ನವೆಂಬರ್ 12 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕರ್ತಾರ್ಪುರ್ ಕಾರಿಡಾರ್ ಅನ್ನು ಉದ್ಘಾಟಿಸಲಿದ್ದು, ನವೆಂಬರ್ 12 ರಂದು ಗುರು ದೇವ್ ಅವರ 550 ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಕರ್ತಾರ್ಪುರ್ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡುವ ಸಿಖ್ ಯಾತ್ರಿಕರ ಮೊದಲ ಬ್ಯಾಚ್ ಅನ್ನು ಕಳುಹಿಸಲಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬಿಜೆಪಿ ಸಭೆಯಲ್ಲಿ ಮಾತನಾಡಿರುವ ವಿಡಿಯೋ ವೈರಲ್ ಆಗಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಈ ವಿಚಾರವನ್ನು ಇಲ್ಲಿಗೆ ಬಿಡುವುದಿಲ್ಲ ಇದನ್ನು ರಾಷ್ಟ್ರಪತಿಯವರ ಗಮನಕ್ಕೆ ತರಲಾಗುವುದು ಎಂದು ಹೇಳಿದ್ದಾರೆ.ಈ ವಿಚಾರವಾಗಿ ಸರಣಿ ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಪಕ್ಷದ ನಾಯಕ ಕಿಡಿ ಕಾರಿದ್ದಾರೆ.
ಆರ್ಟಿಕಲ್ 370 ಮತ್ತು 35 ಎ ದೇಶದಲ್ಲಿ ಭಯೋತ್ಪಾದನೆಗೆ ಒಂದು ಹೆಬ್ಬಾಗಿಲು. ಪ್ರಧಾನಿ ನರೇಂದ್ರ ಮೋದಿ ಆ ನಿಬಂಧನೆಗಳನ್ನು ರದ್ದುಗೊಳಿಸುವ ಮೂಲಕ ಆ ಪ್ರವೇಶವನ್ನು ಮುಚ್ಚಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ + ಶಿವಸೇನೆ ಮೈತ್ರಿ ಗೆಲುವು ಸಾಧಿಸಿದರೆ, ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಕೆಲವು ಸ್ಥಾನಗಳಿಂದ ದೂರ ಉಳಿದಿದೆ. ಆದರೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಪ್ರಚಾರ ಮುಗಿದ ನಂತರ ಶಿವಸೇನೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರಂತಹ ನಾಯಕರೊಂದಿಗೆ ಇಷ್ಟು ಬಿಜೆಪಿ ರ್ಯಾಲಿಗಳು ಏಕೆ ನಡೆಯುತ್ತಿವೆ ಎಂದು ಪ್ರಶ್ನಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.